BREAKING NEWS

“ಫ್ಯಾಸಿಸ್ಟ್‌ ಬಿಜೆಪಿ ಡೌನ್” ಘೋಷಣೆ ಕೂಗುವುದು ಅಪರಾಧವಲ್ಲ: ಮದ್ರಾಸ್‌ ಹೈಕೋರ್ಟ್‌

ನವದೆಹಲಿ : ವಿಮಾನ ನಿಲ್ದಾಣವೊಂದರಲ್ಲಿ ಹಾಗೂ ಆಗಿನ ತಮಿಳುನಾಡು ಬಿಜೆಪಿ ಅಧ್ಯಕ್ಷೆ ತಮಿಳಿಸೈ ಸೌಂದರರಾಜನ್‌ ಅವರು ಪ್ರಯಾಣಿಸುತ್ತಿದ್ದ ವಿಮಾನವೊಂದರಲ್ಲಿ 2018ರಲ್ಲಿ ಬಿಜೆಪಿ ವಿರುದ್ಧ ಘೋಷಣೆ ಕೂಗಿದ್ದ ಸಂಶೋಧನಾ ವಿದ್ವಾಂಸೆಯ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಮದ್ರಾಸ್‌ ಹೈಕೋರ್ಟ್‌ ರದ್ದುಗೊಳಿಸಿದೆ.

“ಫ್ಯಾಸಿಸ್ಟ್‌ ಬಿಜೆಪಿ ಡೌನ್”‌ ಎಂಬ ಘೋಷಣೆ ಕೂಗುವುದು ಅಪರಾಧವಲ್ಲ ಹಾಗೂ ಇದು ಕ್ಷುಲ್ಲಕ ವಿಚಾರ ಎಂದು ನ್ಯಾಯಾಲಯ ಹೇಳಿದೆ.

ಆರೋಪಿ ಲೂಯಿಸ್‌ ಸೋಫಿಯಾ ಓರ್ವ ಸಂಶೋಧನಾ ವಿದ್ವಾಂಸೆಯಾಗಿದ್ದು ತೂತುಕುಡಿ ವಿಮಾನ ನಿಲ್ದಾಣದಲ್ಲಿ ಹಾಗೂ ನಂತರ ಈಗಿನ ಪುದುಚ್ಚೇರಿ ಲೆಫ್ಟಿನೆಂಟ್‌ ಗವರ್ನರ್‌ ಆಗಿರುವ ತಮಿಳಿಸೈ ಅವರಿದ್ದ ವಿಮಾನದಲ್ಲಿ ಘೋಷಣೆ ಕೂಗಿದ್ದರು. ಸೋಫಿಯಾರನ್ನು ನಂತರ ಬಂಧಿಸಲಾಯಿತಾದರೂ ಮರುದಿನ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿತ್ತು.

2019ರಲ್ಲಿ ಸೋಫಿಯಾ ಅವರು ನ್ಯಾಯಾಲಯದ ಕದ ತಟ್ಟಿ ತಮ್ಮ ವಿರುದ್ಧ ತೂತುಕುಡಿ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ ರದ್ದುಗೊಳಿಸಬೇಕೆಂದು ಕೋರಿದ್ದರು.

ಸೆಕ್ಷನ್‌ 290 ಅಡಿ ಸಾರ್ವಜನಿಕ ಶಾಂತಿಗೆ ಭಂಗ ತರುವಂತಹ ಕೃತ್ಯವನ್ನೇನೂ ಸೋಫಿಯಾ ನಡೆಸಿಲ್ಲ ಎಂದು ಜಸ್ಟಿಸ್‌ ಪಿ ಧನಬಲ್‌ ಅವರಿರುವ ಮದ್ರಾಸ್‌ ಹೈಕೋರ್ಟಿನ ಮಧುರೈ ಪೀಠ ಹೇಳಿದೆ.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

6 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

8 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

8 hours ago