BREAKING NEWS

“ಫ್ಯಾಸಿಸ್ಟ್‌ ಬಿಜೆಪಿ ಡೌನ್” ಘೋಷಣೆ ಕೂಗುವುದು ಅಪರಾಧವಲ್ಲ: ಮದ್ರಾಸ್‌ ಹೈಕೋರ್ಟ್‌

ನವದೆಹಲಿ : ವಿಮಾನ ನಿಲ್ದಾಣವೊಂದರಲ್ಲಿ ಹಾಗೂ ಆಗಿನ ತಮಿಳುನಾಡು ಬಿಜೆಪಿ ಅಧ್ಯಕ್ಷೆ ತಮಿಳಿಸೈ ಸೌಂದರರಾಜನ್‌ ಅವರು ಪ್ರಯಾಣಿಸುತ್ತಿದ್ದ ವಿಮಾನವೊಂದರಲ್ಲಿ 2018ರಲ್ಲಿ ಬಿಜೆಪಿ ವಿರುದ್ಧ ಘೋಷಣೆ ಕೂಗಿದ್ದ ಸಂಶೋಧನಾ ವಿದ್ವಾಂಸೆಯ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಮದ್ರಾಸ್‌ ಹೈಕೋರ್ಟ್‌ ರದ್ದುಗೊಳಿಸಿದೆ.

“ಫ್ಯಾಸಿಸ್ಟ್‌ ಬಿಜೆಪಿ ಡೌನ್”‌ ಎಂಬ ಘೋಷಣೆ ಕೂಗುವುದು ಅಪರಾಧವಲ್ಲ ಹಾಗೂ ಇದು ಕ್ಷುಲ್ಲಕ ವಿಚಾರ ಎಂದು ನ್ಯಾಯಾಲಯ ಹೇಳಿದೆ.

ಆರೋಪಿ ಲೂಯಿಸ್‌ ಸೋಫಿಯಾ ಓರ್ವ ಸಂಶೋಧನಾ ವಿದ್ವಾಂಸೆಯಾಗಿದ್ದು ತೂತುಕುಡಿ ವಿಮಾನ ನಿಲ್ದಾಣದಲ್ಲಿ ಹಾಗೂ ನಂತರ ಈಗಿನ ಪುದುಚ್ಚೇರಿ ಲೆಫ್ಟಿನೆಂಟ್‌ ಗವರ್ನರ್‌ ಆಗಿರುವ ತಮಿಳಿಸೈ ಅವರಿದ್ದ ವಿಮಾನದಲ್ಲಿ ಘೋಷಣೆ ಕೂಗಿದ್ದರು. ಸೋಫಿಯಾರನ್ನು ನಂತರ ಬಂಧಿಸಲಾಯಿತಾದರೂ ಮರುದಿನ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿತ್ತು.

2019ರಲ್ಲಿ ಸೋಫಿಯಾ ಅವರು ನ್ಯಾಯಾಲಯದ ಕದ ತಟ್ಟಿ ತಮ್ಮ ವಿರುದ್ಧ ತೂತುಕುಡಿ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ ರದ್ದುಗೊಳಿಸಬೇಕೆಂದು ಕೋರಿದ್ದರು.

ಸೆಕ್ಷನ್‌ 290 ಅಡಿ ಸಾರ್ವಜನಿಕ ಶಾಂತಿಗೆ ಭಂಗ ತರುವಂತಹ ಕೃತ್ಯವನ್ನೇನೂ ಸೋಫಿಯಾ ನಡೆಸಿಲ್ಲ ಎಂದು ಜಸ್ಟಿಸ್‌ ಪಿ ಧನಬಲ್‌ ಅವರಿರುವ ಮದ್ರಾಸ್‌ ಹೈಕೋರ್ಟಿನ ಮಧುರೈ ಪೀಠ ಹೇಳಿದೆ.

andolanait

Recent Posts

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

3 hours ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

3 hours ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

3 hours ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

3 hours ago