BREAKING NEWS

“ಫ್ಯಾಸಿಸ್ಟ್‌ ಬಿಜೆಪಿ ಡೌನ್” ಘೋಷಣೆ ಕೂಗುವುದು ಅಪರಾಧವಲ್ಲ: ಮದ್ರಾಸ್‌ ಹೈಕೋರ್ಟ್‌

ನವದೆಹಲಿ : ವಿಮಾನ ನಿಲ್ದಾಣವೊಂದರಲ್ಲಿ ಹಾಗೂ ಆಗಿನ ತಮಿಳುನಾಡು ಬಿಜೆಪಿ ಅಧ್ಯಕ್ಷೆ ತಮಿಳಿಸೈ ಸೌಂದರರಾಜನ್‌ ಅವರು ಪ್ರಯಾಣಿಸುತ್ತಿದ್ದ ವಿಮಾನವೊಂದರಲ್ಲಿ 2018ರಲ್ಲಿ ಬಿಜೆಪಿ ವಿರುದ್ಧ ಘೋಷಣೆ ಕೂಗಿದ್ದ ಸಂಶೋಧನಾ ವಿದ್ವಾಂಸೆಯ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಮದ್ರಾಸ್‌ ಹೈಕೋರ್ಟ್‌ ರದ್ದುಗೊಳಿಸಿದೆ.

“ಫ್ಯಾಸಿಸ್ಟ್‌ ಬಿಜೆಪಿ ಡೌನ್”‌ ಎಂಬ ಘೋಷಣೆ ಕೂಗುವುದು ಅಪರಾಧವಲ್ಲ ಹಾಗೂ ಇದು ಕ್ಷುಲ್ಲಕ ವಿಚಾರ ಎಂದು ನ್ಯಾಯಾಲಯ ಹೇಳಿದೆ.

ಆರೋಪಿ ಲೂಯಿಸ್‌ ಸೋಫಿಯಾ ಓರ್ವ ಸಂಶೋಧನಾ ವಿದ್ವಾಂಸೆಯಾಗಿದ್ದು ತೂತುಕುಡಿ ವಿಮಾನ ನಿಲ್ದಾಣದಲ್ಲಿ ಹಾಗೂ ನಂತರ ಈಗಿನ ಪುದುಚ್ಚೇರಿ ಲೆಫ್ಟಿನೆಂಟ್‌ ಗವರ್ನರ್‌ ಆಗಿರುವ ತಮಿಳಿಸೈ ಅವರಿದ್ದ ವಿಮಾನದಲ್ಲಿ ಘೋಷಣೆ ಕೂಗಿದ್ದರು. ಸೋಫಿಯಾರನ್ನು ನಂತರ ಬಂಧಿಸಲಾಯಿತಾದರೂ ಮರುದಿನ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿತ್ತು.

2019ರಲ್ಲಿ ಸೋಫಿಯಾ ಅವರು ನ್ಯಾಯಾಲಯದ ಕದ ತಟ್ಟಿ ತಮ್ಮ ವಿರುದ್ಧ ತೂತುಕುಡಿ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ ರದ್ದುಗೊಳಿಸಬೇಕೆಂದು ಕೋರಿದ್ದರು.

ಸೆಕ್ಷನ್‌ 290 ಅಡಿ ಸಾರ್ವಜನಿಕ ಶಾಂತಿಗೆ ಭಂಗ ತರುವಂತಹ ಕೃತ್ಯವನ್ನೇನೂ ಸೋಫಿಯಾ ನಡೆಸಿಲ್ಲ ಎಂದು ಜಸ್ಟಿಸ್‌ ಪಿ ಧನಬಲ್‌ ಅವರಿರುವ ಮದ್ರಾಸ್‌ ಹೈಕೋರ್ಟಿನ ಮಧುರೈ ಪೀಠ ಹೇಳಿದೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

6 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

6 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

7 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

9 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

13 hours ago