ನವದೆಹಲಿ : ವಿಮಾನ ನಿಲ್ದಾಣವೊಂದರಲ್ಲಿ ಹಾಗೂ ಆಗಿನ ತಮಿಳುನಾಡು ಬಿಜೆಪಿ ಅಧ್ಯಕ್ಷೆ ತಮಿಳಿಸೈ ಸೌಂದರರಾಜನ್ ಅವರು ಪ್ರಯಾಣಿಸುತ್ತಿದ್ದ ವಿಮಾನವೊಂದರಲ್ಲಿ 2018ರಲ್ಲಿ ಬಿಜೆಪಿ ವಿರುದ್ಧ ಘೋಷಣೆ ಕೂಗಿದ್ದ ಸಂಶೋಧನಾ ವಿದ್ವಾಂಸೆಯ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಮದ್ರಾಸ್ ಹೈಕೋರ್ಟ್ ರದ್ದುಗೊಳಿಸಿದೆ.
“ಫ್ಯಾಸಿಸ್ಟ್ ಬಿಜೆಪಿ ಡೌನ್” ಎಂಬ ಘೋಷಣೆ ಕೂಗುವುದು ಅಪರಾಧವಲ್ಲ ಹಾಗೂ ಇದು ಕ್ಷುಲ್ಲಕ ವಿಚಾರ ಎಂದು ನ್ಯಾಯಾಲಯ ಹೇಳಿದೆ.
ಆರೋಪಿ ಲೂಯಿಸ್ ಸೋಫಿಯಾ ಓರ್ವ ಸಂಶೋಧನಾ ವಿದ್ವಾಂಸೆಯಾಗಿದ್ದು ತೂತುಕುಡಿ ವಿಮಾನ ನಿಲ್ದಾಣದಲ್ಲಿ ಹಾಗೂ ನಂತರ ಈಗಿನ ಪುದುಚ್ಚೇರಿ ಲೆಫ್ಟಿನೆಂಟ್ ಗವರ್ನರ್ ಆಗಿರುವ ತಮಿಳಿಸೈ ಅವರಿದ್ದ ವಿಮಾನದಲ್ಲಿ ಘೋಷಣೆ ಕೂಗಿದ್ದರು. ಸೋಫಿಯಾರನ್ನು ನಂತರ ಬಂಧಿಸಲಾಯಿತಾದರೂ ಮರುದಿನ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿತ್ತು.
2019ರಲ್ಲಿ ಸೋಫಿಯಾ ಅವರು ನ್ಯಾಯಾಲಯದ ಕದ ತಟ್ಟಿ ತಮ್ಮ ವಿರುದ್ಧ ತೂತುಕುಡಿ ಪೊಲೀಸರು ದಾಖಲಿಸಿದ್ದ ಎಫ್ಐಆರ್ ರದ್ದುಗೊಳಿಸಬೇಕೆಂದು ಕೋರಿದ್ದರು.
ಸೆಕ್ಷನ್ 290 ಅಡಿ ಸಾರ್ವಜನಿಕ ಶಾಂತಿಗೆ ಭಂಗ ತರುವಂತಹ ಕೃತ್ಯವನ್ನೇನೂ ಸೋಫಿಯಾ ನಡೆಸಿಲ್ಲ ಎಂದು ಜಸ್ಟಿಸ್ ಪಿ ಧನಬಲ್ ಅವರಿರುವ ಮದ್ರಾಸ್ ಹೈಕೋರ್ಟಿನ ಮಧುರೈ ಪೀಠ ಹೇಳಿದೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…