BREAKING NEWS

ಪೆನ್‌ಡ್ರೈವ್‌ ತೋರಿಸಿ ಜೇಬಲ್ಲಿ ಇಟ್ಟುಕೊಳ್ಳೋದು ಶೋಭೆ ತರಲ್ಲ: ವಿಶ್ವನಾಥ್‌ ಕಿಡಿ

ಮೈಸೂರು: ಪೆನ್‌ಡ್ರೈವ್‌ ತೋರಿಸಿ ಜೇಬಿನಲ್ಲಿ ಇಟ್ಟುಕೊಳ್ಳುವುದು ಶೋಭೆ ತರುವುದಿಲ್ಲ. ಇದು ಒಂದು ರೀತಿ ಮಿಮಿಕ್ರಿ ಎಂದು ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಕಿಡಿಕಾರಿದ್ದಾರೆ.

ಈ ಮೂಲಕ ಪೆನ್‌ಡ್ರೈವ್‌ ತೋರಿಸಿ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆಯ ಆರೋಪ ಮಾಡಿದ್ದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಎಚ್‌ಡಿ ಕುಮಾರಸ್ವಾಮಿ ಓರ್ವ ಹಿರಿಯ ನಾಯಕ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರು ಹಾಗೂ ಮಾಜಿ ಪ್ರಧಾನಿಗಳ ಮಗ. ಅವರು ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ. ದಾಖಲೆ ಇದ್ದರೆ ತೋರಿಸಲಿ. ಇಲ್ಲ ಅಂದ್ರೇ ಇದು ಒಂತರ ಬ್ಲಾಕ್‌ ಮೇಲಿಂಗ್‌. ಪೆನ್‌ಡ್ರೈವ್ ತೋರಿಸಿ ಜೇಬಿನಲ್ಲಿ ಇಟ್ಟುಕೊಳ್ಳುವುದು ಶೋಭೆ ತರುವುದಿಲ್ಲ ಎಂದು ಕಿಡಿಕಾರಿದರು.

ಹೊರಗಿನಿಂದ ಬಂದವರಿಂದ ಪಕ್ಷ ಹಾಳಾಗಿದೆ ಎಂಬ ಹೇಳಿಕೆಯನ್ನು ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಹಿಂಪಡೆದ ವಿಚಾರದ ಬಗ್ಗೆ ಮಾತನಾಡಿ, ಹಾಳಾದವರು ಆ 17 ಜನರು, ಸುಖ ಪಟ್ಟವರು ಅವರು. ಕೆಎಸ್‌ ಈಶ್ವರಪ್ಪ ಲೂಟಿ ಮಾಡಿ ಮಂತ್ರಿಗಿರಿ ಕಳೆದುಕೊಂಡರು ಎಂದು ಎಚ್‌ ವಿಶ್ವನಾಥ್‌ ಆಕ್ರೋಶ ವ್ಯಕ್ತಪಡಿಸಿದರು.

ಲೋಕಸಭೆಗೆ ಬಿಜೆಪಿ – ಜೆಡಿಎಸ್‌ ಮೈತ್ರಿ ಫಿಕ್ಸ್‌! : ಇನ್ನು, ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಈಗಾಗಲೇ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪನವರು ಶಹಬ್ಬಾಸ್ ಕುಮಾರಸ್ವಾಮಿ ಎಂದು ಹೇಳಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯನ್ನ ಎರಡು ಪಕ್ಷಗಳು ಒಟ್ಟಾಗಿ ಎದುರಿಸುತ್ತವೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದರು.

ಸಂವಿಧಾನದ ವ್ಯವಸ್ಥೆಯಲ್ಲಿ ವಿರೋಧ ಪಕ್ಷದ ನಾಯಕರು ಇಲ್ಲದೆ ಇರುವುದು ದುರಂತ. ಮೇಲ್ಮನೆಯಲ್ಲಿಯೂ ಇಲ್ಲ, ಕೆಳ ಮನೆಯಲ್ಲಿಯೂ ಇಲ್ಲ. ನಮಗೆ ಯೋಗ್ಯತೆ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸ್ಥಾನವನ್ನು ಎಚ್‌ಡಿ ಕುಮಾರಸ್ವಾಮಿಗೆ ಬಿಟ್ಟುಕೊಟ್ಟಿದ್ದಾರೆ ಎಂದು ತಿಳಿಸಿದರು.

ಇದು ಸರ್ವಜನ, ಸಮಸ್ಪರ್ಷಿ ಬಜೆಟ್‌! : ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ದಾಖಲೆಯ ಬಜೆಟ್‌ ಬಗ್ಗೆ ಮಾತನಾಡಿ, ಇದು ಸರ್ವ ಜನ, ಸಮ‌ ಸ್ಪರ್ಷಿ ಬಜೆಟ್. ಸುಸಂಸ್ಕೃತ ಸಮಾಜ ಕ್ಕೆ ಉತ್ತಮ ಬಜೆಟ್ ಆಗಿದೆ. ಅಕ್ಷರ, ಅನ್ನ, ಆರೋಗ್ಯಕ್ಕೆ ಒತ್ತು ನೀಡಿದ್ದಾರೆ. ಇದರ ಜೊತೆ ಸಮಾಜ ಕಲ್ಯಾಣ, ಮಹಿಳೆಯರ ಸ್ವಾವಲಂಭನೆಗೆ ಒತ್ತು ನೀಡಲಾಗಿದೆ. ಶಿಕ್ಷಣ ಕ್ಷೇತ್ರಕ್ಕೂ ಅನುದಾನ ನೀಡಲಾಗಿದೆ. ಸಾಮಾನ್ಯ ಜನಕ್ಕೆ ಮೂಲಸೌಕರ್ಯ ನೀಡಿದೆ ಎಂದರು.

ಈ ಬಜೆಟ್‌ನಲ್ಲಿ ಎಲ್ಲ ಜಾತಿ, ಜನಾಂಗ, ಭಾಷಿಕರಿಗೆ ಬೇಸಿಕ್ ಬ್ರೆಡ್ ನೀಡಿದೆ. ಕನ್ನಡ ಪುಸ್ತಕ ಖರೀದಿಗೆ ಅನುದಾನ ನೀಡಿದೆ. ಇದು ತಾಜಾ ಅಪ್ಪಟ ಕನ್ನಡ ಸರ್ಕಾರ ಆಗಿದೆ. ಅಲೆಮಾರಿ ಜನಾಂಗದವರಿಗೆ 100 ಕೋಟಿ ರೂ. ಅನುದಾನ ನೀಡಿದೆ. ಬುಡಕಟ್ಟು ವರ್ಗದ 13 ಪಂಗಡಗಳಿಗೂ ಹಣ ನೀಡಲಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆ‌ ನೀಡಿದ್ದಾರೆ. ಐದು ಗ್ಯಾರಂಟಿಗಳಿಗೆ ಜಾತಿ ಇಲ್ಲ, ಧರ್ಮ ಇಲ್ಲ, ರಾಜಕೀಯ ಇಲ್ಲ. ಉಳ್ಳವರು ಈ ಯೋಜನೆಗಳನ್ನು ನಿರಾಕರಿಸಬೇಕು. ಆದರೆ, ನಮ್ಮಲ್ಲಿ ಕೋಟ್ಯಂತರ ದುಡ್ಡು ಇದ್ದರು ಸರಥಿ ಸಾಲಿನಲ್ಲಿ ನಿಂತು ಕೊಳ್ಳುತ್ತಾರೆ ಎಂದ ಅವರು, ಈ ಬಜೆಟ್ ಅನುಷ್ಠಾನ ಮುಖ್ಯ, ಪಂಚಾಯಿತಿಗಳಲ್ಲಿ ಮಂತ್ರಿಗಳು ಕುಳಿತುಕೊಳ್ಳಬೇಕು. ಅನುಷ್ಠಾನ ಕೂಡ ಒಂದು ರೀತಿಯ ಸವಾಲು ಎಂದರು.

andolanait

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

10 mins ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

3 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

6 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

9 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

9 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

9 hours ago