ಮೈಸೂರು: ಪೆನ್ಡ್ರೈವ್ ತೋರಿಸಿ ಜೇಬಿನಲ್ಲಿ ಇಟ್ಟುಕೊಳ್ಳುವುದು ಶೋಭೆ ತರುವುದಿಲ್ಲ. ಇದು ಒಂದು ರೀತಿ ಮಿಮಿಕ್ರಿ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಕಿಡಿಕಾರಿದ್ದಾರೆ.
ಈ ಮೂಲಕ ಪೆನ್ಡ್ರೈವ್ ತೋರಿಸಿ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆಯ ಆರೋಪ ಮಾಡಿದ್ದ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಎಚ್ಡಿ ಕುಮಾರಸ್ವಾಮಿ ಓರ್ವ ಹಿರಿಯ ನಾಯಕ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರು ಹಾಗೂ ಮಾಜಿ ಪ್ರಧಾನಿಗಳ ಮಗ. ಅವರು ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ. ದಾಖಲೆ ಇದ್ದರೆ ತೋರಿಸಲಿ. ಇಲ್ಲ ಅಂದ್ರೇ ಇದು ಒಂತರ ಬ್ಲಾಕ್ ಮೇಲಿಂಗ್. ಪೆನ್ಡ್ರೈವ್ ತೋರಿಸಿ ಜೇಬಿನಲ್ಲಿ ಇಟ್ಟುಕೊಳ್ಳುವುದು ಶೋಭೆ ತರುವುದಿಲ್ಲ ಎಂದು ಕಿಡಿಕಾರಿದರು.
ಹೊರಗಿನಿಂದ ಬಂದವರಿಂದ ಪಕ್ಷ ಹಾಳಾಗಿದೆ ಎಂಬ ಹೇಳಿಕೆಯನ್ನು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹಿಂಪಡೆದ ವಿಚಾರದ ಬಗ್ಗೆ ಮಾತನಾಡಿ, ಹಾಳಾದವರು ಆ 17 ಜನರು, ಸುಖ ಪಟ್ಟವರು ಅವರು. ಕೆಎಸ್ ಈಶ್ವರಪ್ಪ ಲೂಟಿ ಮಾಡಿ ಮಂತ್ರಿಗಿರಿ ಕಳೆದುಕೊಂಡರು ಎಂದು ಎಚ್ ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದರು.
ಲೋಕಸಭೆಗೆ ಬಿಜೆಪಿ – ಜೆಡಿಎಸ್ ಮೈತ್ರಿ ಫಿಕ್ಸ್! : ಇನ್ನು, ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಈಗಾಗಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರು ಶಹಬ್ಬಾಸ್ ಕುಮಾರಸ್ವಾಮಿ ಎಂದು ಹೇಳಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯನ್ನ ಎರಡು ಪಕ್ಷಗಳು ಒಟ್ಟಾಗಿ ಎದುರಿಸುತ್ತವೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದರು.
ಸಂವಿಧಾನದ ವ್ಯವಸ್ಥೆಯಲ್ಲಿ ವಿರೋಧ ಪಕ್ಷದ ನಾಯಕರು ಇಲ್ಲದೆ ಇರುವುದು ದುರಂತ. ಮೇಲ್ಮನೆಯಲ್ಲಿಯೂ ಇಲ್ಲ, ಕೆಳ ಮನೆಯಲ್ಲಿಯೂ ಇಲ್ಲ. ನಮಗೆ ಯೋಗ್ಯತೆ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸ್ಥಾನವನ್ನು ಎಚ್ಡಿ ಕುಮಾರಸ್ವಾಮಿಗೆ ಬಿಟ್ಟುಕೊಟ್ಟಿದ್ದಾರೆ ಎಂದು ತಿಳಿಸಿದರು.
ಇದು ಸರ್ವಜನ, ಸಮಸ್ಪರ್ಷಿ ಬಜೆಟ್! : ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ದಾಖಲೆಯ ಬಜೆಟ್ ಬಗ್ಗೆ ಮಾತನಾಡಿ, ಇದು ಸರ್ವ ಜನ, ಸಮ ಸ್ಪರ್ಷಿ ಬಜೆಟ್. ಸುಸಂಸ್ಕೃತ ಸಮಾಜ ಕ್ಕೆ ಉತ್ತಮ ಬಜೆಟ್ ಆಗಿದೆ. ಅಕ್ಷರ, ಅನ್ನ, ಆರೋಗ್ಯಕ್ಕೆ ಒತ್ತು ನೀಡಿದ್ದಾರೆ. ಇದರ ಜೊತೆ ಸಮಾಜ ಕಲ್ಯಾಣ, ಮಹಿಳೆಯರ ಸ್ವಾವಲಂಭನೆಗೆ ಒತ್ತು ನೀಡಲಾಗಿದೆ. ಶಿಕ್ಷಣ ಕ್ಷೇತ್ರಕ್ಕೂ ಅನುದಾನ ನೀಡಲಾಗಿದೆ. ಸಾಮಾನ್ಯ ಜನಕ್ಕೆ ಮೂಲಸೌಕರ್ಯ ನೀಡಿದೆ ಎಂದರು.
ಈ ಬಜೆಟ್ನಲ್ಲಿ ಎಲ್ಲ ಜಾತಿ, ಜನಾಂಗ, ಭಾಷಿಕರಿಗೆ ಬೇಸಿಕ್ ಬ್ರೆಡ್ ನೀಡಿದೆ. ಕನ್ನಡ ಪುಸ್ತಕ ಖರೀದಿಗೆ ಅನುದಾನ ನೀಡಿದೆ. ಇದು ತಾಜಾ ಅಪ್ಪಟ ಕನ್ನಡ ಸರ್ಕಾರ ಆಗಿದೆ. ಅಲೆಮಾರಿ ಜನಾಂಗದವರಿಗೆ 100 ಕೋಟಿ ರೂ. ಅನುದಾನ ನೀಡಿದೆ. ಬುಡಕಟ್ಟು ವರ್ಗದ 13 ಪಂಗಡಗಳಿಗೂ ಹಣ ನೀಡಲಾಗಿದೆ ಎಂದು ಹೇಳಿದರು.
ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆ ನೀಡಿದ್ದಾರೆ. ಐದು ಗ್ಯಾರಂಟಿಗಳಿಗೆ ಜಾತಿ ಇಲ್ಲ, ಧರ್ಮ ಇಲ್ಲ, ರಾಜಕೀಯ ಇಲ್ಲ. ಉಳ್ಳವರು ಈ ಯೋಜನೆಗಳನ್ನು ನಿರಾಕರಿಸಬೇಕು. ಆದರೆ, ನಮ್ಮಲ್ಲಿ ಕೋಟ್ಯಂತರ ದುಡ್ಡು ಇದ್ದರು ಸರಥಿ ಸಾಲಿನಲ್ಲಿ ನಿಂತು ಕೊಳ್ಳುತ್ತಾರೆ ಎಂದ ಅವರು, ಈ ಬಜೆಟ್ ಅನುಷ್ಠಾನ ಮುಖ್ಯ, ಪಂಚಾಯಿತಿಗಳಲ್ಲಿ ಮಂತ್ರಿಗಳು ಕುಳಿತುಕೊಳ್ಳಬೇಕು. ಅನುಷ್ಠಾನ ಕೂಡ ಒಂದು ರೀತಿಯ ಸವಾಲು ಎಂದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…