BREAKING NEWS

ಪೆನ್‌ಡ್ರೈವ್‌ ತೋರಿಸಿ ಜೇಬಲ್ಲಿ ಇಟ್ಟುಕೊಳ್ಳೋದು ಶೋಭೆ ತರಲ್ಲ: ವಿಶ್ವನಾಥ್‌ ಕಿಡಿ

ಮೈಸೂರು: ಪೆನ್‌ಡ್ರೈವ್‌ ತೋರಿಸಿ ಜೇಬಿನಲ್ಲಿ ಇಟ್ಟುಕೊಳ್ಳುವುದು ಶೋಭೆ ತರುವುದಿಲ್ಲ. ಇದು ಒಂದು ರೀತಿ ಮಿಮಿಕ್ರಿ ಎಂದು ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಕಿಡಿಕಾರಿದ್ದಾರೆ.

ಈ ಮೂಲಕ ಪೆನ್‌ಡ್ರೈವ್‌ ತೋರಿಸಿ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆಯ ಆರೋಪ ಮಾಡಿದ್ದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಎಚ್‌ಡಿ ಕುಮಾರಸ್ವಾಮಿ ಓರ್ವ ಹಿರಿಯ ನಾಯಕ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರು ಹಾಗೂ ಮಾಜಿ ಪ್ರಧಾನಿಗಳ ಮಗ. ಅವರು ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ. ದಾಖಲೆ ಇದ್ದರೆ ತೋರಿಸಲಿ. ಇಲ್ಲ ಅಂದ್ರೇ ಇದು ಒಂತರ ಬ್ಲಾಕ್‌ ಮೇಲಿಂಗ್‌. ಪೆನ್‌ಡ್ರೈವ್ ತೋರಿಸಿ ಜೇಬಿನಲ್ಲಿ ಇಟ್ಟುಕೊಳ್ಳುವುದು ಶೋಭೆ ತರುವುದಿಲ್ಲ ಎಂದು ಕಿಡಿಕಾರಿದರು.

ಹೊರಗಿನಿಂದ ಬಂದವರಿಂದ ಪಕ್ಷ ಹಾಳಾಗಿದೆ ಎಂಬ ಹೇಳಿಕೆಯನ್ನು ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಹಿಂಪಡೆದ ವಿಚಾರದ ಬಗ್ಗೆ ಮಾತನಾಡಿ, ಹಾಳಾದವರು ಆ 17 ಜನರು, ಸುಖ ಪಟ್ಟವರು ಅವರು. ಕೆಎಸ್‌ ಈಶ್ವರಪ್ಪ ಲೂಟಿ ಮಾಡಿ ಮಂತ್ರಿಗಿರಿ ಕಳೆದುಕೊಂಡರು ಎಂದು ಎಚ್‌ ವಿಶ್ವನಾಥ್‌ ಆಕ್ರೋಶ ವ್ಯಕ್ತಪಡಿಸಿದರು.

ಲೋಕಸಭೆಗೆ ಬಿಜೆಪಿ – ಜೆಡಿಎಸ್‌ ಮೈತ್ರಿ ಫಿಕ್ಸ್‌! : ಇನ್ನು, ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಈಗಾಗಲೇ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪನವರು ಶಹಬ್ಬಾಸ್ ಕುಮಾರಸ್ವಾಮಿ ಎಂದು ಹೇಳಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯನ್ನ ಎರಡು ಪಕ್ಷಗಳು ಒಟ್ಟಾಗಿ ಎದುರಿಸುತ್ತವೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದರು.

ಸಂವಿಧಾನದ ವ್ಯವಸ್ಥೆಯಲ್ಲಿ ವಿರೋಧ ಪಕ್ಷದ ನಾಯಕರು ಇಲ್ಲದೆ ಇರುವುದು ದುರಂತ. ಮೇಲ್ಮನೆಯಲ್ಲಿಯೂ ಇಲ್ಲ, ಕೆಳ ಮನೆಯಲ್ಲಿಯೂ ಇಲ್ಲ. ನಮಗೆ ಯೋಗ್ಯತೆ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸ್ಥಾನವನ್ನು ಎಚ್‌ಡಿ ಕುಮಾರಸ್ವಾಮಿಗೆ ಬಿಟ್ಟುಕೊಟ್ಟಿದ್ದಾರೆ ಎಂದು ತಿಳಿಸಿದರು.

ಇದು ಸರ್ವಜನ, ಸಮಸ್ಪರ್ಷಿ ಬಜೆಟ್‌! : ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ದಾಖಲೆಯ ಬಜೆಟ್‌ ಬಗ್ಗೆ ಮಾತನಾಡಿ, ಇದು ಸರ್ವ ಜನ, ಸಮ‌ ಸ್ಪರ್ಷಿ ಬಜೆಟ್. ಸುಸಂಸ್ಕೃತ ಸಮಾಜ ಕ್ಕೆ ಉತ್ತಮ ಬಜೆಟ್ ಆಗಿದೆ. ಅಕ್ಷರ, ಅನ್ನ, ಆರೋಗ್ಯಕ್ಕೆ ಒತ್ತು ನೀಡಿದ್ದಾರೆ. ಇದರ ಜೊತೆ ಸಮಾಜ ಕಲ್ಯಾಣ, ಮಹಿಳೆಯರ ಸ್ವಾವಲಂಭನೆಗೆ ಒತ್ತು ನೀಡಲಾಗಿದೆ. ಶಿಕ್ಷಣ ಕ್ಷೇತ್ರಕ್ಕೂ ಅನುದಾನ ನೀಡಲಾಗಿದೆ. ಸಾಮಾನ್ಯ ಜನಕ್ಕೆ ಮೂಲಸೌಕರ್ಯ ನೀಡಿದೆ ಎಂದರು.

ಈ ಬಜೆಟ್‌ನಲ್ಲಿ ಎಲ್ಲ ಜಾತಿ, ಜನಾಂಗ, ಭಾಷಿಕರಿಗೆ ಬೇಸಿಕ್ ಬ್ರೆಡ್ ನೀಡಿದೆ. ಕನ್ನಡ ಪುಸ್ತಕ ಖರೀದಿಗೆ ಅನುದಾನ ನೀಡಿದೆ. ಇದು ತಾಜಾ ಅಪ್ಪಟ ಕನ್ನಡ ಸರ್ಕಾರ ಆಗಿದೆ. ಅಲೆಮಾರಿ ಜನಾಂಗದವರಿಗೆ 100 ಕೋಟಿ ರೂ. ಅನುದಾನ ನೀಡಿದೆ. ಬುಡಕಟ್ಟು ವರ್ಗದ 13 ಪಂಗಡಗಳಿಗೂ ಹಣ ನೀಡಲಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆ‌ ನೀಡಿದ್ದಾರೆ. ಐದು ಗ್ಯಾರಂಟಿಗಳಿಗೆ ಜಾತಿ ಇಲ್ಲ, ಧರ್ಮ ಇಲ್ಲ, ರಾಜಕೀಯ ಇಲ್ಲ. ಉಳ್ಳವರು ಈ ಯೋಜನೆಗಳನ್ನು ನಿರಾಕರಿಸಬೇಕು. ಆದರೆ, ನಮ್ಮಲ್ಲಿ ಕೋಟ್ಯಂತರ ದುಡ್ಡು ಇದ್ದರು ಸರಥಿ ಸಾಲಿನಲ್ಲಿ ನಿಂತು ಕೊಳ್ಳುತ್ತಾರೆ ಎಂದ ಅವರು, ಈ ಬಜೆಟ್ ಅನುಷ್ಠಾನ ಮುಖ್ಯ, ಪಂಚಾಯಿತಿಗಳಲ್ಲಿ ಮಂತ್ರಿಗಳು ಕುಳಿತುಕೊಳ್ಳಬೇಕು. ಅನುಷ್ಠಾನ ಕೂಡ ಒಂದು ರೀತಿಯ ಸವಾಲು ಎಂದರು.

andolanait

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

4 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

4 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

5 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

5 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

17 hours ago