ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಸಮ್ಮಿಲನವಾಗಿದೆ.
ನಗರದ ಜಯಲಕ್ಷ್ಮೀ ಪುರಂನ ಶ್ರೀನಿವಾಸ್ ಪ್ರಸಾದ್ ಅವರ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಆ ಮೂಲಕ ಹಲವು ವರ್ಷಗಳಿಂದ ದೂರವಿದ್ದ ದೋಸ್ತಿಗಳು ಮತ್ತೆ ಒಂದಾಗಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನಕ್ಕೆ ಕಾರಣವಾಗಿದೆ.
ರಾಜಕೀಯ ವೈಮನಸ್ಸಿಂದ ದೂರ ಉಳಿದಿದ್ದ ಹಳೇ ಮೈಸೂರು ಭಾಗದ ಪ್ರಭಾವಿ ರಾಜಕಾರಣಿಗಳು ಮುನಿಸು ಮರೆತು ಒಂದಾಗಿದ್ದಾರೆ. ಈ ಸೌಹಾರ್ದಯುತ ಭೇಟಿಯ ವೇಳೆ ಸಿಎಂ ಸಿದ್ದರಾಮಯ್ಯ ಅವರು ಪ್ರಸಾದ್ ಅವರ ಆರೋಗ್ಯ ವಿಚಾರಿಸಿದ್ದಾರೆ.
ಶ್ರೀನಿವಾಸ್ ಪ್ರಸಾದ್ ಮನೆಗೆ ಭೇಟಿ ನೀಡಲು ನಿರಾಕರಿಸಿದ್ದ ಸಿಎಂ, ಮುಂದಿನ ದಿನಗಳಲ್ಲಿ ದುಬಾರಿ ಬೆಲೆ ತೆತ್ತಬೇಕಾಗುತ್ತದೆ ಎಂಬುದನ್ನು ಅರಿತು ದಿಢೀರ್ ಭೇಟಿ ನೀಡಿದ್ದಾರೆ. ಪ್ರಸಾದ್ ಅವರ ಪ್ರಭಾವ ಇವೆಲ್ಲಕ್ಕೂ ಕಾರಣವಾಗಿದೆ.
ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಭೇಟಿ ಬಳಿಕ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಪ್ರಸಾದ್ ಅವರು ಕಾಂಗ್ರೆಸ್ನಲ್ಲಿದ್ದವರು. ಕಾಂಗ್ರೆಸ್ ಬಗ್ಗೆ ಸಿಂಪಥಿ ಇರಲಿ ಎಂದು ಹೇಳಿದ್ದೇನೆ ವಿನಃ ರಾಜಕೀಯ ಚರ್ಚೆಗಳು ನಡೆದಿಲ್ಲ. ಅವರು ರಾಜಕೀಯ ನಿವೃತ್ತಿ ಹೊಂದಿದ್ದು, ಹೀಗಾಗಿ ಹೆಚ್ಚು ಮಾತನಾಡಿಲ್ಲ. ರಾಜಕೀಯವಾಗಿ ಅವರು ಬಿಜೆಪಿಗೆ ಸೇರಿದ್ದರು ಅಷ್ಟೇ. ನಾನು ಅವರ ಆರೋಗ್ಯ ವಿಚಾರಿಸಲು ಬಂದಿದ್ದೆ ಅಷ್ಟೇ ಎಂದು ಸಿಎಂ ಹೇಳಿದರು.
ಜೊತೆಯಲ್ಲಿ ಶಾಸಕರಾದ ಎ.ಆರ್ ಕೃಷ್ಣಮೂರ್ತಿ, ಹರೀಶ್ ಗೌಡ ಸೇರಿದಂತೆ ಇತರರು ಹಾಜರಿದ್ದರು.
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…
ಬೆಳಗಾವಿ: ವಿಧಾನಸಭೆಯಲ್ಲಿ ಇಂದು ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕ ಮಂಡನೆ ಆಗಿದೆ. ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ…
ಹಾಸನ: ಸೈಕಲ್ನಲ್ಲಿ ಆಟವಾಡುತ್ತಿದ್ದ ವೇಳೆ ಆಯತಪ್ಪಿ ನೀರಿನ ಸಂಪ್ಗೆ ಬಿದ್ದು 4 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹಾಸನದ ಅಣಚಿಹಳ್ಳಿ…
ಬೆಂಗಳೂರು: ರಾಜ್ಯಾದ್ಯಂತ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತೊಮ್ಮೆ ಗಂಭೀರ ಸಂಕಷ್ಟದ ಅಂಚಿಗೆ ತಲುಪಿದೆ. ನಾಲ್ಕು ನಿಗಮಗಳ ಸಾರಿಗೆ ನೌಕರರು ಮತ್ತೆ…