ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಸಮ್ಮಿಲನವಾಗಿದೆ.
ನಗರದ ಜಯಲಕ್ಷ್ಮೀ ಪುರಂನ ಶ್ರೀನಿವಾಸ್ ಪ್ರಸಾದ್ ಅವರ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಆ ಮೂಲಕ ಹಲವು ವರ್ಷಗಳಿಂದ ದೂರವಿದ್ದ ದೋಸ್ತಿಗಳು ಮತ್ತೆ ಒಂದಾಗಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನಕ್ಕೆ ಕಾರಣವಾಗಿದೆ.
ರಾಜಕೀಯ ವೈಮನಸ್ಸಿಂದ ದೂರ ಉಳಿದಿದ್ದ ಹಳೇ ಮೈಸೂರು ಭಾಗದ ಪ್ರಭಾವಿ ರಾಜಕಾರಣಿಗಳು ಮುನಿಸು ಮರೆತು ಒಂದಾಗಿದ್ದಾರೆ. ಈ ಸೌಹಾರ್ದಯುತ ಭೇಟಿಯ ವೇಳೆ ಸಿಎಂ ಸಿದ್ದರಾಮಯ್ಯ ಅವರು ಪ್ರಸಾದ್ ಅವರ ಆರೋಗ್ಯ ವಿಚಾರಿಸಿದ್ದಾರೆ.
ಶ್ರೀನಿವಾಸ್ ಪ್ರಸಾದ್ ಮನೆಗೆ ಭೇಟಿ ನೀಡಲು ನಿರಾಕರಿಸಿದ್ದ ಸಿಎಂ, ಮುಂದಿನ ದಿನಗಳಲ್ಲಿ ದುಬಾರಿ ಬೆಲೆ ತೆತ್ತಬೇಕಾಗುತ್ತದೆ ಎಂಬುದನ್ನು ಅರಿತು ದಿಢೀರ್ ಭೇಟಿ ನೀಡಿದ್ದಾರೆ. ಪ್ರಸಾದ್ ಅವರ ಪ್ರಭಾವ ಇವೆಲ್ಲಕ್ಕೂ ಕಾರಣವಾಗಿದೆ.
ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಭೇಟಿ ಬಳಿಕ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಪ್ರಸಾದ್ ಅವರು ಕಾಂಗ್ರೆಸ್ನಲ್ಲಿದ್ದವರು. ಕಾಂಗ್ರೆಸ್ ಬಗ್ಗೆ ಸಿಂಪಥಿ ಇರಲಿ ಎಂದು ಹೇಳಿದ್ದೇನೆ ವಿನಃ ರಾಜಕೀಯ ಚರ್ಚೆಗಳು ನಡೆದಿಲ್ಲ. ಅವರು ರಾಜಕೀಯ ನಿವೃತ್ತಿ ಹೊಂದಿದ್ದು, ಹೀಗಾಗಿ ಹೆಚ್ಚು ಮಾತನಾಡಿಲ್ಲ. ರಾಜಕೀಯವಾಗಿ ಅವರು ಬಿಜೆಪಿಗೆ ಸೇರಿದ್ದರು ಅಷ್ಟೇ. ನಾನು ಅವರ ಆರೋಗ್ಯ ವಿಚಾರಿಸಲು ಬಂದಿದ್ದೆ ಅಷ್ಟೇ ಎಂದು ಸಿಎಂ ಹೇಳಿದರು.
ಜೊತೆಯಲ್ಲಿ ಶಾಸಕರಾದ ಎ.ಆರ್ ಕೃಷ್ಣಮೂರ್ತಿ, ಹರೀಶ್ ಗೌಡ ಸೇರಿದಂತೆ ಇತರರು ಹಾಜರಿದ್ದರು.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…