ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಸಮ್ಮಿಲನವಾಗಿದೆ.
ನಗರದ ಜಯಲಕ್ಷ್ಮೀ ಪುರಂನ ಶ್ರೀನಿವಾಸ್ ಪ್ರಸಾದ್ ಅವರ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಆ ಮೂಲಕ ಹಲವು ವರ್ಷಗಳಿಂದ ದೂರವಿದ್ದ ದೋಸ್ತಿಗಳು ಮತ್ತೆ ಒಂದಾಗಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನಕ್ಕೆ ಕಾರಣವಾಗಿದೆ.
ರಾಜಕೀಯ ವೈಮನಸ್ಸಿಂದ ದೂರ ಉಳಿದಿದ್ದ ಹಳೇ ಮೈಸೂರು ಭಾಗದ ಪ್ರಭಾವಿ ರಾಜಕಾರಣಿಗಳು ಮುನಿಸು ಮರೆತು ಒಂದಾಗಿದ್ದಾರೆ. ಈ ಸೌಹಾರ್ದಯುತ ಭೇಟಿಯ ವೇಳೆ ಸಿಎಂ ಸಿದ್ದರಾಮಯ್ಯ ಅವರು ಪ್ರಸಾದ್ ಅವರ ಆರೋಗ್ಯ ವಿಚಾರಿಸಿದ್ದಾರೆ.
ಶ್ರೀನಿವಾಸ್ ಪ್ರಸಾದ್ ಮನೆಗೆ ಭೇಟಿ ನೀಡಲು ನಿರಾಕರಿಸಿದ್ದ ಸಿಎಂ, ಮುಂದಿನ ದಿನಗಳಲ್ಲಿ ದುಬಾರಿ ಬೆಲೆ ತೆತ್ತಬೇಕಾಗುತ್ತದೆ ಎಂಬುದನ್ನು ಅರಿತು ದಿಢೀರ್ ಭೇಟಿ ನೀಡಿದ್ದಾರೆ. ಪ್ರಸಾದ್ ಅವರ ಪ್ರಭಾವ ಇವೆಲ್ಲಕ್ಕೂ ಕಾರಣವಾಗಿದೆ.
ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಭೇಟಿ ಬಳಿಕ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಪ್ರಸಾದ್ ಅವರು ಕಾಂಗ್ರೆಸ್ನಲ್ಲಿದ್ದವರು. ಕಾಂಗ್ರೆಸ್ ಬಗ್ಗೆ ಸಿಂಪಥಿ ಇರಲಿ ಎಂದು ಹೇಳಿದ್ದೇನೆ ವಿನಃ ರಾಜಕೀಯ ಚರ್ಚೆಗಳು ನಡೆದಿಲ್ಲ. ಅವರು ರಾಜಕೀಯ ನಿವೃತ್ತಿ ಹೊಂದಿದ್ದು, ಹೀಗಾಗಿ ಹೆಚ್ಚು ಮಾತನಾಡಿಲ್ಲ. ರಾಜಕೀಯವಾಗಿ ಅವರು ಬಿಜೆಪಿಗೆ ಸೇರಿದ್ದರು ಅಷ್ಟೇ. ನಾನು ಅವರ ಆರೋಗ್ಯ ವಿಚಾರಿಸಲು ಬಂದಿದ್ದೆ ಅಷ್ಟೇ ಎಂದು ಸಿಎಂ ಹೇಳಿದರು.
ಜೊತೆಯಲ್ಲಿ ಶಾಸಕರಾದ ಎ.ಆರ್ ಕೃಷ್ಣಮೂರ್ತಿ, ಹರೀಶ್ ಗೌಡ ಸೇರಿದಂತೆ ಇತರರು ಹಾಜರಿದ್ದರು.
ಗುರುವಿಗೆ ಕೃತಜ್ಞತೆ ಸಲ್ಲಿಸುವ ಶಿಷ್ಯರ ಈ ಕಾರ್ಯ ಯುವ ಪೀಳಿಗೆಗೆ ಮಾದರಿಯಾಗಿದೆ. ಚಂದ್ರಶೇಖರ್ ಮೂರ್ತಿ ಕೆ.ಎಸ್. ಹಾರ್ಮೋನಿಯಂ ವಾದಕ, ಗೀತ…
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…