BREAKING NEWS

ಇಂದು ಮತ್ತೆ ದೆಹಲಿಯತ್ತ ಸಿದ್ದರಾಮಯ್ಯ, ಡಿಕೆಶಿ : ಸಚಿವರ ಪಟ್ಟಿ ಅಂತಿಮಕ್ಕೆ ಸರ್ಕಸ್

ಬೆಂಗಳೂರು : ಸಚಿವರ ಪಟ್ಟಿ ಅಂತಿಮಕ್ಕೆ ಸರ್ಕಸ್ ನಡೆಯುತ್ತಿದ್ದು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಂದು ಮತ್ತೆ ದೆಹಲಿಗೆ ತೆರಳಲಿದ್ದಾರೆ.

ಸಚಿವರ ಆಯ್ಕೆಗೆ ಇಂದು ದೆಹಲಿಯಲ್ಲಿ ನಾಯಕರ ಕಸರತ್ತು ನಡೆಸಲಿದ್ದಾರೆ. ಸಂಪುಟ ರಚನೆಯ ಬಗ್ಗೆ ಹೈವೋಲ್ಟೇಜ್ ಮೀಟಿಂಗ್ ಇದ್ದು, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಹೈಕಮಾಂಡ್ ಜೊತೆ ಚರ್ಚೆ ಮಾಡಲಿದ್ದಾರೆ.

ಕರ್ನಾಟಕ ಸಿಎಂ ಗಾದಿಗಾಗಿ ಕಳೆದ 4-5 ದಿನಗಳಿಂದ ದೆಹಲಿಯಲ್ಲಿ ಭಾರೀ ಹೈಡ್ರಾಮ ನಡೆದಿತ್ತು. ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರೂ ಪಟ್ಟು ಹಿಡಿದಿದ್ದರು. ಹೈಕಮಾಂಡ್ ಎಷ್ಟು ಮನವೊಲಿಸಿದರೂ ಬಗ್ಗಿರಲಿಲ್ಲ. ಕೆಲ ಷರತ್ತುಗಳೊಂದಿಗೆ ಕೊನೆಗೂ ಸಿದ್ದರಾಮಯ್ಯ ಅವರನ್ನೇ ಸಿಎಂ ಮಾಡಲು ಡಿಕೆಶಿ ಒಪ್ಪಿಗೆ ಸೂಚಿಸಿದರು. ತಾವು ಡಿಸಿಎಂ ಪಟ್ಟ ಪಡೆದರು.

ಅತ್ತ ಸಿದ್ದರಾಮಯ್ಯ ಸಿಎಂ ಎಂಬುದು ಖಚಿತವಾಗುತ್ತಿದ್ದಂತೆ ಇತ್ತ ಡಾ. ಪರಮೇಶ್ವರ್ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲರ ಮುಂದೆ ಸರ್ಕಾರ ರಚನೆ ಕುರಿತು ಮಾಹಿತಿ ನೀಡಿದರು. ಇದೇ ಮೇ 20 ರಂದು ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ನಾಯಕರು ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳನ್ನೂ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ.

lokesh

Recent Posts

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

1 hour ago

ಅಯೋಧ್ಯೆ ರಾಮಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್‌

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್‌ ಕೋಡ್‌ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…

1 hour ago

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

11 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

16 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

16 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

17 hours ago