BREAKING NEWS

ಸಿದ್ದರಾಮಯ್ಯ ಸಿಎಂ ಸ್ಥಾನ ಬೇಡ ಎಂದರೆ, ಪರಮೇಶ್ವರ್ ಆಗಲಿ: ಸಚಿವ ಕೆ.ಎನ್ ರಾಜಣ್ಣ

ತುಮಕೂರು : ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಬೇಡ ಎಂದರೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿ ಆಗಲಿ ಎಂದು ಕೆ.ಎನ್.ರಾಜಣ್ಣ ಹೇಳಿದ್ದಾರೆ.

ತುಮಕೂರಿನಲ್ಲಿ ಹಮ್ಮಿಕೊಂಡಿದ್ದ ನೂತನ ಪೊಲೀಸ್ ಸಮುಚ್ಚಯ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ಜಿ.ಪರಮೇಶ್ವರ್ ಗೆ ಮುಖ್ಯಮಂತ್ರಿ ಆಗುವ ಅವಕಾಶವಿದೆ ಎಂದು ಹೇಳಿದ್ದಾರೆ.

ಪರಮೇಶ್ವರ್ ಈಗ ಗೃಹ ಸಚಿವರಾಗಿದ್ದಾರೆ. ಮುಂದೆ ಏನು ಬೇಕಾದರೂ ಆಗಬಹುದು. ಪರಮೇಶ್ವರ್ ಅವರೇ ನಿಮಗೆ ಅದೃಷ್ಟವಿದೆ ಅಂತ ಹಿಂದೊಮ್ಮೆ ಹೇಳಿದ್ದೆ. ಯಾಕೆ ಅಂದರೆ ಅವರಿಗೆ ಅದೃಷ್ಟ ಇದೆ ಎಂದು ನಾನು ಭಾವಿಸಿದ್ದೇನೆ ಎಂದು ತಿಳಿಸಿದ್ದಾರೆ.

ನಮ್ಮ ಜಿಲ್ಲೆಯಿಂದ ಒಬ್ಬ ಮುಖ್ಯಮಂತ್ರಿ ಆಗುತ್ತಾರೆ ಅಂದರೆ, ನಾವೆಲ್ಲಾ ಸಂತೋಷಪಡುತ್ತೇವೆ. ನಾವೆಲ್ಲಾ ಮುಖ್ಯಮಂತ್ರಿ ಆದಂತೆ ಎಂದು ಭಾವಿಸುತ್ತೇನೆ ಎಂದು ಮುಂದಿನ ಭವಿಷ್ಯ ನುಡಿದಿದ್ದಾರೆ.

ಇದೂವರೆಗೆ ನಾವೆಲ್ಲಾ ಸಿದ್ದರಾಮಯ್ಯ ಪರ ಇದ್ದೆವು. ನಾವು, ಪರಮೇಶ್ವರ್ ಇಬ್ಬರು ಅವರ ಪರವಿರುತ್ತೇವೆ. ಸಿದ್ದರಾಮಯ್ಯ ಹೊರತು ಪಡಿಸಿದರೆ ಪರಮೇಶ್ವರ್ ಸಿಎಂ ಆಗಬೇಕು ಅಂತ ಬಯಸುತ್ತೇವೆ ಎಂದು ತಿಳಿಸಿದ್ದಾರೆ.

ಎಐಸಿಸಿ ನಾಯಕರು ನಮಗೆ ಹೇಳಿದ್ದಾರೆ ಏನು ಮಾತನಾಡಬಾರದು ಅಂತ. ನಾನು ಪರಮೇಶ್ವರ್ ಒಟ್ಟಿಗೆ ಸಭೆಯಲ್ಲಿ ಕಾಣಿಸಿಕೊಂಡು ತುಂಬಾ ದಿನವಾಗಿತ್ತು.‌ ಹಾಗಾಗಿ ನನ್ನ ಮನಸಿನ ಭಾವನೆ ಹೇಳಿದ್ದೇನೆ. ನಾನು ಯಾರಿಗೂ ಹೆದರಲ್ಲ, ಈಗ ಮಾತನಾಡಿದ್ದು ಆಗೊಯ್ತು, ಮುಂದೆ ಮಾತನಾಡಲ್ಲ ಅಂತ ಹೇಳ್ತೀವಿ. ನಾನಂತೂ ಮುಂದೆ ಚುನಾವಣೆಗೆ ನಿಲ್ಲೋದಿಲ್ಲ ಎಂದು ಮುಂದಿನ ನಿರ್ಧಾರವನ್ನು ಪ್ರಕಟಿಸಿದ್ದಾರೆ.

andolanait

Recent Posts

ಪೊಲೀಸ್‌ ದಾಳಿ : ಮೈಸೂರಲ್ಲಿ ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳ ಪತ್ತೆ

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…

13 mins ago

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

19 mins ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

51 mins ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

2 hours ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

2 hours ago

ಕುಸಿದ ಚಿನ್ನ, ಬೆಳ್ಳಿ ಬೆಲೆ

ಬೆಂಗಳೂರು : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮಹಾಕುಸಿತ ಮುಂದುವರಿದಿದೆ. ಶುಕ್ರವಾರ ಗ್ರಾಮ್‌ಗೆ 800 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ…

2 hours ago