BREAKING NEWS

ಸಿದ್ದರಾಮಯ್ಯ ಸಿಎಂ ಸ್ಥಾನ ಬೇಡ ಎಂದರೆ, ಪರಮೇಶ್ವರ್ ಆಗಲಿ: ಸಚಿವ ಕೆ.ಎನ್ ರಾಜಣ್ಣ

ತುಮಕೂರು : ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಬೇಡ ಎಂದರೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿ ಆಗಲಿ ಎಂದು ಕೆ.ಎನ್.ರಾಜಣ್ಣ ಹೇಳಿದ್ದಾರೆ.

ತುಮಕೂರಿನಲ್ಲಿ ಹಮ್ಮಿಕೊಂಡಿದ್ದ ನೂತನ ಪೊಲೀಸ್ ಸಮುಚ್ಚಯ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ಜಿ.ಪರಮೇಶ್ವರ್ ಗೆ ಮುಖ್ಯಮಂತ್ರಿ ಆಗುವ ಅವಕಾಶವಿದೆ ಎಂದು ಹೇಳಿದ್ದಾರೆ.

ಪರಮೇಶ್ವರ್ ಈಗ ಗೃಹ ಸಚಿವರಾಗಿದ್ದಾರೆ. ಮುಂದೆ ಏನು ಬೇಕಾದರೂ ಆಗಬಹುದು. ಪರಮೇಶ್ವರ್ ಅವರೇ ನಿಮಗೆ ಅದೃಷ್ಟವಿದೆ ಅಂತ ಹಿಂದೊಮ್ಮೆ ಹೇಳಿದ್ದೆ. ಯಾಕೆ ಅಂದರೆ ಅವರಿಗೆ ಅದೃಷ್ಟ ಇದೆ ಎಂದು ನಾನು ಭಾವಿಸಿದ್ದೇನೆ ಎಂದು ತಿಳಿಸಿದ್ದಾರೆ.

ನಮ್ಮ ಜಿಲ್ಲೆಯಿಂದ ಒಬ್ಬ ಮುಖ್ಯಮಂತ್ರಿ ಆಗುತ್ತಾರೆ ಅಂದರೆ, ನಾವೆಲ್ಲಾ ಸಂತೋಷಪಡುತ್ತೇವೆ. ನಾವೆಲ್ಲಾ ಮುಖ್ಯಮಂತ್ರಿ ಆದಂತೆ ಎಂದು ಭಾವಿಸುತ್ತೇನೆ ಎಂದು ಮುಂದಿನ ಭವಿಷ್ಯ ನುಡಿದಿದ್ದಾರೆ.

ಇದೂವರೆಗೆ ನಾವೆಲ್ಲಾ ಸಿದ್ದರಾಮಯ್ಯ ಪರ ಇದ್ದೆವು. ನಾವು, ಪರಮೇಶ್ವರ್ ಇಬ್ಬರು ಅವರ ಪರವಿರುತ್ತೇವೆ. ಸಿದ್ದರಾಮಯ್ಯ ಹೊರತು ಪಡಿಸಿದರೆ ಪರಮೇಶ್ವರ್ ಸಿಎಂ ಆಗಬೇಕು ಅಂತ ಬಯಸುತ್ತೇವೆ ಎಂದು ತಿಳಿಸಿದ್ದಾರೆ.

ಎಐಸಿಸಿ ನಾಯಕರು ನಮಗೆ ಹೇಳಿದ್ದಾರೆ ಏನು ಮಾತನಾಡಬಾರದು ಅಂತ. ನಾನು ಪರಮೇಶ್ವರ್ ಒಟ್ಟಿಗೆ ಸಭೆಯಲ್ಲಿ ಕಾಣಿಸಿಕೊಂಡು ತುಂಬಾ ದಿನವಾಗಿತ್ತು.‌ ಹಾಗಾಗಿ ನನ್ನ ಮನಸಿನ ಭಾವನೆ ಹೇಳಿದ್ದೇನೆ. ನಾನು ಯಾರಿಗೂ ಹೆದರಲ್ಲ, ಈಗ ಮಾತನಾಡಿದ್ದು ಆಗೊಯ್ತು, ಮುಂದೆ ಮಾತನಾಡಲ್ಲ ಅಂತ ಹೇಳ್ತೀವಿ. ನಾನಂತೂ ಮುಂದೆ ಚುನಾವಣೆಗೆ ನಿಲ್ಲೋದಿಲ್ಲ ಎಂದು ಮುಂದಿನ ನಿರ್ಧಾರವನ್ನು ಪ್ರಕಟಿಸಿದ್ದಾರೆ.

andolanait

Recent Posts

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್‌…

34 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಮುಚ್ಚುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…

39 mins ago

ಮೈಸೂರು ಅರಮನೆ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿತ

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…

1 hour ago

ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು ಪಿತಾಮಹರು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…

1 hour ago

ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿ ಬಂಧನ

ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…

2 hours ago

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…

2 hours ago