BREAKING NEWS

ಸಿದ್ದರಾಮಯ್ಯ ಸಿಎಂ ಸ್ಥಾನ ಬೇಡ ಎಂದರೆ, ಪರಮೇಶ್ವರ್ ಆಗಲಿ: ಸಚಿವ ಕೆ.ಎನ್ ರಾಜಣ್ಣ

ತುಮಕೂರು : ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಬೇಡ ಎಂದರೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿ ಆಗಲಿ ಎಂದು ಕೆ.ಎನ್.ರಾಜಣ್ಣ ಹೇಳಿದ್ದಾರೆ.

ತುಮಕೂರಿನಲ್ಲಿ ಹಮ್ಮಿಕೊಂಡಿದ್ದ ನೂತನ ಪೊಲೀಸ್ ಸಮುಚ್ಚಯ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ಜಿ.ಪರಮೇಶ್ವರ್ ಗೆ ಮುಖ್ಯಮಂತ್ರಿ ಆಗುವ ಅವಕಾಶವಿದೆ ಎಂದು ಹೇಳಿದ್ದಾರೆ.

ಪರಮೇಶ್ವರ್ ಈಗ ಗೃಹ ಸಚಿವರಾಗಿದ್ದಾರೆ. ಮುಂದೆ ಏನು ಬೇಕಾದರೂ ಆಗಬಹುದು. ಪರಮೇಶ್ವರ್ ಅವರೇ ನಿಮಗೆ ಅದೃಷ್ಟವಿದೆ ಅಂತ ಹಿಂದೊಮ್ಮೆ ಹೇಳಿದ್ದೆ. ಯಾಕೆ ಅಂದರೆ ಅವರಿಗೆ ಅದೃಷ್ಟ ಇದೆ ಎಂದು ನಾನು ಭಾವಿಸಿದ್ದೇನೆ ಎಂದು ತಿಳಿಸಿದ್ದಾರೆ.

ನಮ್ಮ ಜಿಲ್ಲೆಯಿಂದ ಒಬ್ಬ ಮುಖ್ಯಮಂತ್ರಿ ಆಗುತ್ತಾರೆ ಅಂದರೆ, ನಾವೆಲ್ಲಾ ಸಂತೋಷಪಡುತ್ತೇವೆ. ನಾವೆಲ್ಲಾ ಮುಖ್ಯಮಂತ್ರಿ ಆದಂತೆ ಎಂದು ಭಾವಿಸುತ್ತೇನೆ ಎಂದು ಮುಂದಿನ ಭವಿಷ್ಯ ನುಡಿದಿದ್ದಾರೆ.

ಇದೂವರೆಗೆ ನಾವೆಲ್ಲಾ ಸಿದ್ದರಾಮಯ್ಯ ಪರ ಇದ್ದೆವು. ನಾವು, ಪರಮೇಶ್ವರ್ ಇಬ್ಬರು ಅವರ ಪರವಿರುತ್ತೇವೆ. ಸಿದ್ದರಾಮಯ್ಯ ಹೊರತು ಪಡಿಸಿದರೆ ಪರಮೇಶ್ವರ್ ಸಿಎಂ ಆಗಬೇಕು ಅಂತ ಬಯಸುತ್ತೇವೆ ಎಂದು ತಿಳಿಸಿದ್ದಾರೆ.

ಎಐಸಿಸಿ ನಾಯಕರು ನಮಗೆ ಹೇಳಿದ್ದಾರೆ ಏನು ಮಾತನಾಡಬಾರದು ಅಂತ. ನಾನು ಪರಮೇಶ್ವರ್ ಒಟ್ಟಿಗೆ ಸಭೆಯಲ್ಲಿ ಕಾಣಿಸಿಕೊಂಡು ತುಂಬಾ ದಿನವಾಗಿತ್ತು.‌ ಹಾಗಾಗಿ ನನ್ನ ಮನಸಿನ ಭಾವನೆ ಹೇಳಿದ್ದೇನೆ. ನಾನು ಯಾರಿಗೂ ಹೆದರಲ್ಲ, ಈಗ ಮಾತನಾಡಿದ್ದು ಆಗೊಯ್ತು, ಮುಂದೆ ಮಾತನಾಡಲ್ಲ ಅಂತ ಹೇಳ್ತೀವಿ. ನಾನಂತೂ ಮುಂದೆ ಚುನಾವಣೆಗೆ ನಿಲ್ಲೋದಿಲ್ಲ ಎಂದು ಮುಂದಿನ ನಿರ್ಧಾರವನ್ನು ಪ್ರಕಟಿಸಿದ್ದಾರೆ.

andolanait

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

15 mins ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

44 mins ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

2 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

3 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

3 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

10 hours ago