ಬೆಂಗಳೂರು: ವಾಸ್ತು ಸರಿ ಇಲ್ಲ ಎಂಬ ಕಾರಣಕ್ಕೆ ಮುಚ್ಚಲಾಗಿದ್ದ ಸಿಎಂ ಕಚೇರಿಯ ದ್ವಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತೆರೆಸಿದ್ದಾರೆ.
ಅನ್ನಭಾಗ್ಯ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಇಂದು ವಿಧಾನಸೌಧಕ್ಕೆ ಆಗಮಿಸಿದ ಸಿದ್ದರಾಮಯ್ಯ, ವಾಸ್ತು ಸರಿ ಇಲ್ಲ ಎನ್ನುವ ಕಾರಣದಿಂದ ಬಂದ್ ಮಾಡಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರವನ್ನು ತಕ್ಷಣವೇ ತೆರೆಸಿದರು.
ಸಭೆಗೆ ಬರುತ್ತಿದ್ದ ಅವರು ದಕ್ಷಿಣ ದ್ವಾರ ಬಂದ್ ಆಗಿರುವುದನ್ನು ಗಮನಿಸಿದರು. ವಾಸ್ತು ಕಾರಣದಿಂದ ಬಂದ್ ಮಾಡಲಾಗಿದೆ ಎನ್ನುವ ಉತ್ತರ ಅಧಿಕಾರಿಗಳಿಂದ ಬಂದ ಬಳಿಕ ಸಿಎಂ ಆ ದ್ವಾರದಲ್ಲೇ ನಿಂತರು. ಪಶ್ಚಿಮ ದ್ವಾರದಿಂದ ಸಿಬ್ಬಂದಿ ಒಳಗೆ ಹೋಗಿ ದಕ್ಷಿಣದ ದ್ವಾರವನ್ನು ತೆರೆದ ಬಳಿಕ ಅದೇ ದ್ವಾರದ ಮೂಲಕವೇ ತಮ್ಮ ಕಚೇರಿಗೆ ಪ್ರವೇಶಿಸಿದರು.
ಆರೋಗ್ಯಕರ ಮನಸ್ಸು, ಸ್ವಚ್ಛ ಹೃದಯ, ಜನಪರ ಕಾಳಜಿ, ಒಳ್ಳೆಯ ಗಾಳಿ ಬೆಳಕು ಬರುವಂತಿದ್ದರೆ ಅದೇ ಉತ್ತಮ ವಾಸ್ತು ಎಂದು ಅಧಿಕಾರಿಗಳ ಜತೆ ನಮ್ಮ ನಿಲುವನ್ನು ಹಂಚಿಕೊಂಡರು. ಸಭೆ ಮುಗಿದ ಬಳಿಕ ದಕ್ಷಿಣ ದ್ವಾರದ ಮೂಲಕವೇ ಸಿಎಂ ಹೊರಗೆ ಬಂದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…