BREAKING NEWS

ಗಟ್ಟಿ ಮುಟ್ಟಾಗಿದ್ದೇನೆ ಎಂದು ಟ್ವೀಟ್​ ಮಾಡಿ ಅಭಿಮಾನಿಗಳಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

ವಿಜಯನಗರ : ಸಿದ್ದರಾಮಯ್ಯ ಇಂದು ಕೂಡ್ಲಿಗಿ, ಹರಪನಹಳ್ಳಿ, ಹಗರಿಬೊಮ್ಮನ ಹಳ್ಳಿ, ಹೊಸಪೇಟೆ ವಿಧಾನ ಸಭೆ ಕ್ಷೇತ್ರಗಳಲ್ಲಿ ಮತಯಾಚನೆಗೆ ತೆರಳಿದ್ದು ಈ ಸಂದರ್ಭ ಬಿಸಿಲಿನ ಝಳಕ್ಕೆ ಕುಸಿದು ಬಿದ್ದಿದ್ದರು. ಈ ಬಗ್ಗೆ ಆತಂಕಿತರಾದ ಅಭಿಮಾನಿಗಳಿಗೆ ಸಿದ್ದರಾಮಯ್ಯ ಟ್ವೀಟ್​ ಮೂಲಕ ಭಯಪಡುವ ಅಗತ್ಯ ಇಲ್ಲ ಎನ್ನುವುದನ್ನು ವಿವರಿಸಿದ್ದಾರೆ.

ಬೆಳಗ್ಗೆ ಕೂಡ್ಲಿಗಿ, ಮಧ್ಯಾನ್ಹ ಹರಪನಹಳ್ಳಿ, ಸಂಜೆ ನಾಲ್ಕು ಗಂಟೆಗೆ ಹಗರಿಬೊಮ್ಮನ ಹಳ್ಳಿ, ರಾತ್ರಿ 7 ಕ್ಕೆ ಹೊಸಪೇಟೆಯಲ್ಲಿ ಅದ್ದೂರಿ ಪ್ರಚಾರ ಸಿದ್ದರಾಮಯ್ಯ ನಡೆಸಲಿದ್ದರು. ಈ ಹಿನ್ನೆಲೆಯಲ್ಲಿ ಕೂಡ್ಲಿಗಿಗೆ ಸಿದ್ದರಾಮಯ್ಯ ಬಳ್ಳಾರಿ ರಸ್ತೆಯಲ್ಲಿರೋ ಹೆಲಿಪ್ಯಾಡ್​ನಲ್ಲಿ ಬಂದಿಳಿದ ಮಾಜಿ ಸಿದ್ದರಾಮಯ್ಯ ಬಂದಿಳಿದಿದ್ದರು. ಕೂಡ್ಲಿಗಿಯಲ್ಲಿ ಬಿಸಿಲಿನ ತಾಪಕ್ಕೆ ಕ್ಷಣಮಾತ್ರದಲ್ಲಿ ಸಿದ್ದರಾಮಯ್ಯ ಕುಸಿದು ಬಿದ್ದಿದ್ದಾರೆ. ಕೂಡ್ಲಿಗಿಯ ಹೆಲಿಪ್ಯಾಡ್ ಬಳಿ ಕಾರಿನ ಬಾಗಿಲಿನ ಬಳಿ ಏಕಾಏಕಿ ಸಿದ್ದರಾಮಯ್ಯ ಕುಸಿದು ಬೀಳುತ್ತಿದ್ದಂತೆಯೇ ಕೈ ಹಿಡಿದ ವೈದ್ಯ ಗ್ಲೂಕೋಸ್ , ನೀರು ಕುಡಿಸಿದ್ದಾರೆ.

ಇದೀಗ ಸಿದ್ದರಾಮಯ್ಯ ಈ ಘಟನೆ ಬಗ್ಗೆ ಟ್ವೀಟ್​ ಮಾಡಿದ್ದು “ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ. ನಿತ್ಯ ಅಡ್ಡಾಡುವ ಕಾರು ಬದಲಾಗಿರುವ ಕಾರಣ ಸೈಡ್ ಸ್ಟೆಪ್ ಇಲ್ಲದ ಕಾರಿನಲ್ಲಿ ಕಾಲು ಜಾರಿ ಹಿಂದಕ್ಕೆ ಮುಗ್ಗರಿಸಿದ್ದೆ. ಈಗ ಆರಾಮಾಗಿದ್ದೇನೆ. ಇದನ್ನು ಅತಿರಂಜಿತ ರೀತಿಯಲ್ಲಿ ವರದಿಮಾಡಿ ಜನ ಗಾಬರಿ ಪಡುವಂತೆ ಮಾಡಬೇಡಿ ಎಂದು ಮಾಧ್ಯಮ ಮಿತ್ರರಲ್ಲಿ ವಿನಂತಿ” ಎಂದು ಬರೆದುಕೊಂಡಿದ್ದಾರೆ.

https://twitter.com/siddaramaiah/status/1652210201829801984?t=yGoknktQtFyESwYrfW9LzQ&s=08

lokesh

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

3 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

3 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

4 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

4 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

16 hours ago