BREAKING NEWS

ಗಟ್ಟಿ ಮುಟ್ಟಾಗಿದ್ದೇನೆ ಎಂದು ಟ್ವೀಟ್​ ಮಾಡಿ ಅಭಿಮಾನಿಗಳಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

ವಿಜಯನಗರ : ಸಿದ್ದರಾಮಯ್ಯ ಇಂದು ಕೂಡ್ಲಿಗಿ, ಹರಪನಹಳ್ಳಿ, ಹಗರಿಬೊಮ್ಮನ ಹಳ್ಳಿ, ಹೊಸಪೇಟೆ ವಿಧಾನ ಸಭೆ ಕ್ಷೇತ್ರಗಳಲ್ಲಿ ಮತಯಾಚನೆಗೆ ತೆರಳಿದ್ದು ಈ ಸಂದರ್ಭ ಬಿಸಿಲಿನ ಝಳಕ್ಕೆ ಕುಸಿದು ಬಿದ್ದಿದ್ದರು. ಈ ಬಗ್ಗೆ ಆತಂಕಿತರಾದ ಅಭಿಮಾನಿಗಳಿಗೆ ಸಿದ್ದರಾಮಯ್ಯ ಟ್ವೀಟ್​ ಮೂಲಕ ಭಯಪಡುವ ಅಗತ್ಯ ಇಲ್ಲ ಎನ್ನುವುದನ್ನು ವಿವರಿಸಿದ್ದಾರೆ.

ಬೆಳಗ್ಗೆ ಕೂಡ್ಲಿಗಿ, ಮಧ್ಯಾನ್ಹ ಹರಪನಹಳ್ಳಿ, ಸಂಜೆ ನಾಲ್ಕು ಗಂಟೆಗೆ ಹಗರಿಬೊಮ್ಮನ ಹಳ್ಳಿ, ರಾತ್ರಿ 7 ಕ್ಕೆ ಹೊಸಪೇಟೆಯಲ್ಲಿ ಅದ್ದೂರಿ ಪ್ರಚಾರ ಸಿದ್ದರಾಮಯ್ಯ ನಡೆಸಲಿದ್ದರು. ಈ ಹಿನ್ನೆಲೆಯಲ್ಲಿ ಕೂಡ್ಲಿಗಿಗೆ ಸಿದ್ದರಾಮಯ್ಯ ಬಳ್ಳಾರಿ ರಸ್ತೆಯಲ್ಲಿರೋ ಹೆಲಿಪ್ಯಾಡ್​ನಲ್ಲಿ ಬಂದಿಳಿದ ಮಾಜಿ ಸಿದ್ದರಾಮಯ್ಯ ಬಂದಿಳಿದಿದ್ದರು. ಕೂಡ್ಲಿಗಿಯಲ್ಲಿ ಬಿಸಿಲಿನ ತಾಪಕ್ಕೆ ಕ್ಷಣಮಾತ್ರದಲ್ಲಿ ಸಿದ್ದರಾಮಯ್ಯ ಕುಸಿದು ಬಿದ್ದಿದ್ದಾರೆ. ಕೂಡ್ಲಿಗಿಯ ಹೆಲಿಪ್ಯಾಡ್ ಬಳಿ ಕಾರಿನ ಬಾಗಿಲಿನ ಬಳಿ ಏಕಾಏಕಿ ಸಿದ್ದರಾಮಯ್ಯ ಕುಸಿದು ಬೀಳುತ್ತಿದ್ದಂತೆಯೇ ಕೈ ಹಿಡಿದ ವೈದ್ಯ ಗ್ಲೂಕೋಸ್ , ನೀರು ಕುಡಿಸಿದ್ದಾರೆ.

ಇದೀಗ ಸಿದ್ದರಾಮಯ್ಯ ಈ ಘಟನೆ ಬಗ್ಗೆ ಟ್ವೀಟ್​ ಮಾಡಿದ್ದು “ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ. ನಿತ್ಯ ಅಡ್ಡಾಡುವ ಕಾರು ಬದಲಾಗಿರುವ ಕಾರಣ ಸೈಡ್ ಸ್ಟೆಪ್ ಇಲ್ಲದ ಕಾರಿನಲ್ಲಿ ಕಾಲು ಜಾರಿ ಹಿಂದಕ್ಕೆ ಮುಗ್ಗರಿಸಿದ್ದೆ. ಈಗ ಆರಾಮಾಗಿದ್ದೇನೆ. ಇದನ್ನು ಅತಿರಂಜಿತ ರೀತಿಯಲ್ಲಿ ವರದಿಮಾಡಿ ಜನ ಗಾಬರಿ ಪಡುವಂತೆ ಮಾಡಬೇಡಿ ಎಂದು ಮಾಧ್ಯಮ ಮಿತ್ರರಲ್ಲಿ ವಿನಂತಿ” ಎಂದು ಬರೆದುಕೊಂಡಿದ್ದಾರೆ.

https://twitter.com/siddaramaiah/status/1652210201829801984?t=yGoknktQtFyESwYrfW9LzQ&s=08

lokesh

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

9 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

13 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

14 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

14 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

19 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

19 hours ago