ವಿಜಯನಗರ : ಸಿದ್ದರಾಮಯ್ಯ ಇಂದು ಕೂಡ್ಲಿಗಿ, ಹರಪನಹಳ್ಳಿ, ಹಗರಿಬೊಮ್ಮನ ಹಳ್ಳಿ, ಹೊಸಪೇಟೆ ವಿಧಾನ ಸಭೆ ಕ್ಷೇತ್ರಗಳಲ್ಲಿ ಮತಯಾಚನೆಗೆ ತೆರಳಿದ್ದು ಈ ಸಂದರ್ಭ ಬಿಸಿಲಿನ ಝಳಕ್ಕೆ ಕುಸಿದು ಬಿದ್ದಿದ್ದರು. ಈ ಬಗ್ಗೆ ಆತಂಕಿತರಾದ ಅಭಿಮಾನಿಗಳಿಗೆ ಸಿದ್ದರಾಮಯ್ಯ ಟ್ವೀಟ್ ಮೂಲಕ ಭಯಪಡುವ ಅಗತ್ಯ ಇಲ್ಲ ಎನ್ನುವುದನ್ನು ವಿವರಿಸಿದ್ದಾರೆ.
ಬೆಳಗ್ಗೆ ಕೂಡ್ಲಿಗಿ, ಮಧ್ಯಾನ್ಹ ಹರಪನಹಳ್ಳಿ, ಸಂಜೆ ನಾಲ್ಕು ಗಂಟೆಗೆ ಹಗರಿಬೊಮ್ಮನ ಹಳ್ಳಿ, ರಾತ್ರಿ 7 ಕ್ಕೆ ಹೊಸಪೇಟೆಯಲ್ಲಿ ಅದ್ದೂರಿ ಪ್ರಚಾರ ಸಿದ್ದರಾಮಯ್ಯ ನಡೆಸಲಿದ್ದರು. ಈ ಹಿನ್ನೆಲೆಯಲ್ಲಿ ಕೂಡ್ಲಿಗಿಗೆ ಸಿದ್ದರಾಮಯ್ಯ ಬಳ್ಳಾರಿ ರಸ್ತೆಯಲ್ಲಿರೋ ಹೆಲಿಪ್ಯಾಡ್ನಲ್ಲಿ ಬಂದಿಳಿದ ಮಾಜಿ ಸಿದ್ದರಾಮಯ್ಯ ಬಂದಿಳಿದಿದ್ದರು. ಕೂಡ್ಲಿಗಿಯಲ್ಲಿ ಬಿಸಿಲಿನ ತಾಪಕ್ಕೆ ಕ್ಷಣಮಾತ್ರದಲ್ಲಿ ಸಿದ್ದರಾಮಯ್ಯ ಕುಸಿದು ಬಿದ್ದಿದ್ದಾರೆ. ಕೂಡ್ಲಿಗಿಯ ಹೆಲಿಪ್ಯಾಡ್ ಬಳಿ ಕಾರಿನ ಬಾಗಿಲಿನ ಬಳಿ ಏಕಾಏಕಿ ಸಿದ್ದರಾಮಯ್ಯ ಕುಸಿದು ಬೀಳುತ್ತಿದ್ದಂತೆಯೇ ಕೈ ಹಿಡಿದ ವೈದ್ಯ ಗ್ಲೂಕೋಸ್ , ನೀರು ಕುಡಿಸಿದ್ದಾರೆ.
ಇದೀಗ ಸಿದ್ದರಾಮಯ್ಯ ಈ ಘಟನೆ ಬಗ್ಗೆ ಟ್ವೀಟ್ ಮಾಡಿದ್ದು “ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ. ನಿತ್ಯ ಅಡ್ಡಾಡುವ ಕಾರು ಬದಲಾಗಿರುವ ಕಾರಣ ಸೈಡ್ ಸ್ಟೆಪ್ ಇಲ್ಲದ ಕಾರಿನಲ್ಲಿ ಕಾಲು ಜಾರಿ ಹಿಂದಕ್ಕೆ ಮುಗ್ಗರಿಸಿದ್ದೆ. ಈಗ ಆರಾಮಾಗಿದ್ದೇನೆ. ಇದನ್ನು ಅತಿರಂಜಿತ ರೀತಿಯಲ್ಲಿ ವರದಿಮಾಡಿ ಜನ ಗಾಬರಿ ಪಡುವಂತೆ ಮಾಡಬೇಡಿ ಎಂದು ಮಾಧ್ಯಮ ಮಿತ್ರರಲ್ಲಿ ವಿನಂತಿ” ಎಂದು ಬರೆದುಕೊಂಡಿದ್ದಾರೆ.
https://twitter.com/siddaramaiah/status/1652210201829801984?t=yGoknktQtFyESwYrfW9LzQ&s=08
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…