BREAKING NEWS

ಸಿದ್ದರಾಮಯ್ಯ ಬೆಂಗಳೂರನ್ನೇ ಲೂಟಿ ಮಾಡಿದ್ದಾರೆ : ಸಿಎಂ ಬೊಮ್ಮಾಯಿ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಡಿಎ, ಇಂಧನ ಹಾಗೂ ನೀರಾವರಿಯಲ್ಲಿ ಅಕ್ರಮ ಮಾಡಿ, ಇಡೀ ಬೆಂಗಳೂರನ್ನೇ ಲೂಟಿ ಮಾಡಿದ್ದಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಆರೋಪಿಸಿದ್ದಾರೆ.

ನಗರದ ಯಲಂಹಕದಲ್ಲಿ ಚುನಾವಣಾ ಪ್ರಚಾರ ಹಾಗೂ ರೋಡ್ ಶೋದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ 8 ಸಾವಿರ ಕೋಟಿ ರೂ. ಅಕ್ರಮ ಮಾಡಿದ್ದಾರೆ. ಬಿಡಿಎ, ಇಂಧನ ಹಾಗೂ ನೀರಾವರಿಯಲ್ಲಿ ಅಕ್ರಮ ಮಾಡಿದ್ದಾರೆಂದು ಆರೋಪಿಸಿದರು.

ಸಿದ್ದರಾಮಯ್ಯನವರ ಆಡಳಿತದಲ್ಲಿ ಶಿಕ್ಷಕರ ನೇಮಕಾತಿ, ಪ್ರಶ್ನೆಪತ್ರಿಕೆ ಸೋರಿಕೆ, ರೀಡೂ ಮುಂತಾದಂತಹ ಹಗರಣಗಳು ನಡೆದಿವೆ. . 843 ಎಕರೆ ಭೂಮಿಯನ್ನು ಅಕ್ರಮವಾಗಿ ಸಾಹುಕಾರರಿಗೆ ಬಿಟ್ಟುಕೊಟ್ಟು 8 ಸಾವಿರ ಕೋಟಿ ರೂ. ಹಗರಣವನ್ನು ಯಾರಾದರೂ ಮಾಡಿದ್ದರೆ ಅದು ಸಿದ್ದರಾಮಯ್ಯನವರ ಸರ್ಕಾರ ಎಂಬುದನ್ನು ಸ್ಪಷ್ಟವಾಗಿ ಹೇಳುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷದ ಕುರಿತು ಮಾತನಾಡಿ, ಕಾಂಗ್ರೆಸ್ ಎಂದರೆ ಅನ್ಯಾಯ, ಭ್ರಷ್ಟಾಚಾರ, ಅನೀತಿ, ಅಧರ್ಮ. ಈ ಅನಿಷ್ಟ ಕಾಂಗ್ರೆಸ್ ಪಕ್ಷವನ್ನು ಶಾಶ್ವತವಾಗಿ ಕರ್ನಾಟಕದ ಆಡಳಿತದಿಂದ ದೂರವಿಡಬೇಕಾಗಿದೆ. ಕಾಂಗ್ರೆಸ್ ಮುಕ್ತ ಕರ್ನಾಟಕವನ್ನು ಮಾಡಬೇಕಾಗಿದೆ. ಕಾಂಗ್ರೆಸ್ ಎಂಬ ಹೆಸರನ್ನು ಶಾಶ್ವತವಾಗಿ ಈ ನೆಲದಿಂದ ಕಿತ್ತು ಹಾಕಬೇಕಾಗಿದೆ ಎಂದು ಕಿಡಿಕಾರಿದರು.
ಕಾಂಗ್ರೆಸ್‌ನವರು ಗ್ಯಾರಂಟಿ ಕಾರ್ಡ್ ಅನ್ನು ಕೊಟ್ಟಿದ್ದಾರೆ. ಅದಕ್ಕೆ ಯಾವುದೇ ಜೀವ ಇಲ್ಲ. ಅದನ್ನು ತೆಗೆದುಕೊಂಡು ಉಪ್ಪಿನಕಾಯಿ ಹಾಕಬೇಕು ಅಷ್ಟೇ ಬಿಟ್ಟರೆ, ಅದರಿಂದ ಬೇರೆ ಯಾವುದೇ ಉಪಯೋಗವಿಲ್ಲ. ಚುನಾವಣೆ ಮುಗಿಯುವವರೆಗೂ ಅದು ಗ್ಯಾರಂಟಿ, ಚುನಾವಣೆ ಮುಗಿದ ನಂತರ ಅದು ಗಳಗಂಟಿ ಎಂದು ವ್ಯಂಗ್ಯವಾಡಿದರು.

ಇದೇ ವೇಳೆ ಸಿದ್ದರಾಮಯ್ಯ ಅವರ ಲಿಂಗಾಯತರ ಕುರಿತ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಮಾಜಿ ಸಿಎಂ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಇಡೀ ಲಿಂಗಾಯತ ಸಮುದಾಯವೇ ಭ್ರಷ್ಟವಾಗಿದೆ ಎಂದು ಹೇಳಿರುವ ಅವರು, ಈ ಹಿಂದೆ ಬ್ರಾಹ್ಮಣ ಸಮುದಾಯವನ್ನು ಅಪಹಾಸ್ಯ ಮಾಡಿದ್ದರು. ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಲಿಂಗಾಯತ-ವೀರಶೈವ ಸಮಾಜ ಒಡೆಯಲು ಯತ್ನಿಸಿದ್ದರು. ಈ ಬಾರಿಯ ಚುನಾವಣೆಯಲ್ಲಿ ರಾಜ್ಯದ ಜನತೆ ಸಿದ್ದರಾಮಯ್ಯ ಅವರಿಗೆ ತಕ್ಕ ಪಾಠ ಕಲಿಸುತ್ತಾರೆಂದು ಹೇಳಿದರು.

lokesh

Recent Posts

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

3 mins ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

1 hour ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

2 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

3 hours ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

5 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

5 hours ago