BREAKING NEWS

ಸಿದ್ದರಾಮಯ್ಯ ಸಮಾಜ ಒಡೆಯುವ ಕೆಲಸ ಮಾಡಿಕೊಂಡು ಬಂದಿದ್ದಾರೆ : ಅಶ್ವತ್ಥ್ ನಾರಾಯಣ್‌

ಬೆಂಗಳೂರು : ಭಾಗ್ಯಗಳ ಹೆಸರಿನಲ್ಲಿ ಆಶ್ರಯ ಪಡೆದು ರಾಜಕಾರಣ ಮಾಡುತ್ತಿದ್ದಾರೆ. ಇವರಿಗೆ ಸ್ವಲ್ಪವಾದರೂ ಮಾನ ಮರ್ಯಾದೆ ಇದೆಯಾ, ನಾಚಿಕೆ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಬಗ್ಗೆ ಮಾತನಾಡುವ ಅರ್ಹತೆ, ಯೋಗ್ಯತೆ ಇಲ್ಲ. ಭ್ರಷ್ಟಾಚಾರ ಮಾಡಿಕೊಂಡು ಕುಳಿತಿರುವ ಕಾಂಗ್ರೆಸ್​​ಗೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದ್ದಾರೆ.

ಜನರ ಮೇಲೆ ಪ್ರೀತಿ ಇಟ್ಟುಕೊಂಡು ಕಾಂಗ್ರೆಸ್ ಗ್ಯಾರಂಟಿ ಕೊಟ್ಟಿದ್ದಲ್ಲ. ಅಧಿಕಾರ, ತಮ್ಮ ಸ್ವಾರ್ಥಕ್ಕಾಗಿ ಕಾಂಗ್ರೆಸ್​ನವರು ಗ್ಯಾರಂಟಿ ಕೊಟ್ಟಿದ್ದಾರೆ. ಕಾಂಗ್ರೆಸ್​ ಸರ್ಕಾರ ಬಂದ ಎರಡೇ ತಿಂಗಳಲ್ಲಿ ಜನ ಕೈಕೈ ಹಿಸುಕಿಕೊಳ್ಳುತ್ತಿದ್ದಾರೆ ಎಂದರು.

ಚುನಾವಣೆಯಲ್ಲಿ ಜನ ಉತ್ತರ ಕೊಡುತ್ತಾರೆ : ರಾಜ್ಯ ಕಾಂಗ್ರೆಸ್​ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಭಾಗ್ಯಗಳ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ಭಾಗ್ಯ ಪಡೆಯುತ್ತಿದ್ದಾರೆ. ಆಮಿಷವೊಡ್ಡಿ ಅಧಿಕಾರಕ್ಕೆ ಬಂದಿರುವವರ ಬಗ್ಗೆ ಯಾಕೆ ಮಾತನಾಡಬೇಕು. ಸಿದ್ದರಾಮಯ್ಯ ಸಮಾಜ ಒಡೆಯುವ ಕೆಲಸ ಮಾಡಿಕೊಂಡು ಬಂದಿದ್ದಾರೆ. ಇಂಥವರಿಂದ ಒಂದೇ ಒಂದು ಒಳ್ಳೆಯ ಕೆಲಸವನ್ನು ಬಯಸಲು ಸಾಧ್ಯವಿಲ್ಲ. ಇವರು ನಿರ್ನಾಮ ಆಗುವ ಹಾಗೇ ಚುನಾವಣೆಯಲ್ಲಿ ಜನ ಉತ್ತರ ಕೊಡುತ್ತಾರೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಮಾರ್ಗದರ್ಶಿಯಾಗಿರಲಿ. ಗುಣಮಟ್ಟದ ಶಿಕ್ಷಣ ಹಾಗೂ ಆಡಳಿತದಲ್ಲಿ ತಮ್ಮ ತಾಕತ್ ತೋರಿಸಬೇಕು. ಮೋಸದ ಭಾಗ್ಯದಿಂದ ಅಧಿಕಾರ ಪಡೆದುಕೊಂಡಿದ್ದಾರೆ ಎಂದು ಹರಿಹಾಯ್ದರು.

lokesh

Recent Posts

ಓದುಗರ ಪತ್ರ: ಜನರ ನಿರೀಕ್ಷೆಗಳಿಂದ ದೂರವಾಗುತ್ತಿರುವ ಶಾಸನಸಭೆಗಳು

ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…

33 seconds ago

ಓದುಗರ ಪತ್ರ: ಬೇಸರ ತರಿಸಿದ ಜನಪ್ರತಿನಿಧಿಗಳ ವರ್ತನೆ

ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…

3 mins ago

ಸೈನ್ಯ ಯುದ್ಧ ಮಾಡುತ್ತದೆ, ತೀರ್ಮಾನ ಸರ್ಕಾರ ಮಾಡಬೇಕು…!

ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…

6 mins ago

ಇಂದು ಶನಿವಾರಸಂತೆ ಬಸ್ ನಿಲ್ದಾಣ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…

13 mins ago

ಮಡಹಳ್ಳಿ ಬಳಿಯ ಅಕ್ರಮ ಕ್ರಷರ್‌ನಿಂದ ಜನತೆ ಹೈರಾಣ

ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…

19 mins ago

ಹೆಬ್ಬಾತು ಹಕ್ಕಿಗಳ ಸ್ವರ್ಗ ಹದಿನಾರು ಕೆರೆ!

ಮೈಸೂರು: ಸಾವಿರಾರು ಕಿ.ಮೀ. ದೂರದಿಂದ ವಲಸೆ ಬರುವ ಹಕ್ಕಿಗಳಿಗೆ ಅದರಲ್ಲೂ ವಿಶೇಷವಾಗಿ ಮಂಗೋಲಿಯಾದಿಂದ ಸಾವಿರಾರು ಕಿಲೋಮೀಟರ್ ದೂರ ವಲಸೆ ಬರುವ…

22 mins ago