BREAKING NEWS

ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ : ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ.

ಶಾಸಕ ಹರೀಶ್ ಪೂಂಜಾ ಅವರು ಕಾಂಗ್ರೆಸ್ ಪರ ಪ್ರಚಾರ ಮಾಡಿದ ಹಿಂದೂ ಕಾರ್ಯಕರ್ತರ ವಿರುದ್ಧ ಆಕ್ರೋಶ ಹೊರಹಾಕಿದರು. ಕಳೆದ ವಾರ ನಡೆದ ಸ್ಥಳೀಯ ಸಮಾರಂಭವೊಂದರಲ್ಲಿ ಮಾತನಾಡಿದ ಈ ಹೇಳಿಕೆಯ ಆಡಿಯೋ ಮತ್ತು ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಹಿಂದೂ ಕಾರ್ಯಕರ್ತ ಸತ್ಯಜಿತ್ ಸುರತ್ಕಲ್ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದರು.

’24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ ಸಿದ್ದರಾಮಯ್ಯನವರಿಗೆ ನೀವು ಮತ ​​ಕೇಳಿದ್ದೀರಿ. ಭಜರಂಗದಳದ ಮೇಲೆ ನಿಷೇಧ ಹೇರಲು ಮುಂದಾಗಿರುವ ಕಾಂಗ್ರೆಸ್‌ಗೆ ಮತ ಯಾಚಿಸಿದ್ದೀರಿ. ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಜನ ಕೇಳುತ್ತಿದ್ದಾರೆ’ ಎಂದು ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿದೆ. ಅವರ ವಿರುದ್ಧ ಪೊಲೀಸರಿಗೆ ದೂರು ನೀಡಲು ಕಾಂಗ್ರೆಸ್ ಕಾರ್ಯಕರ್ತರು ಸಿದ್ಧತೆ ನಡೆಸಿದ್ದಾರೆ.

2013 ರಿಂದ 2018ರ ಅವಧಿಯಲ್ಲಿ ಸಿದ್ದರಾಮಯ್ಯನವರ ಆಳ್ವಿಕೆಯಲ್ಲಿ ಕರಾವಳಿ ಕರ್ನಾಟಕ, ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರ ಸರಣಿ ಹತ್ಯೆಗಳು ನಡೆದಿವೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಪಿಎಫ್‌ಐ ಮತ್ತು ಎಸ್‌ಡಿಪಿಐ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸುವ ಮೂಲಕ ಆರೋಪಿಗಳನ್ನು ರಕ್ಷಿಸಿದೆ ಎಂದು ಬಿಜೆಪಿ ಆರೋಪಿಸಿದೆ.

ಬಿಜೆಪಿ ಇದನ್ನು 2018ರ ಚುನಾವಣಾ ವಿಷಯವಾಗಿಸಿತ್ತು ಮತ್ತು ಕರಾವಳಿ ಪ್ರದೇಶದಲ್ಲಿ ಚುನಾವಣೆಗಳನ್ನು ಗೆದ್ದಿತ್ತು.ಆಗ ಆರೋಪಿಗಳಿಗೆ ರಕ್ಷಣೆ ನೀಡುವುದನ್ನು ನಿರಾಕರಿಸಿದ್ದ ಸಿದ್ದರಾಮಯ್ಯ, ವೈಯುಕ್ತಿಕ ದ್ವೇಷದಿಂದ ಕೊಲೆ ನಡೆದಿದೆ ಎಂದು ಸಮರ್ಥಿಸಿಕೊಂಡಿದ್ದರು. ಕೋಮುಗಲಭೆಯಲ್ಲಿ ಹತ್ಯೆಯಾಗಿದ್ದಾನೆ ಎನ್ನಲಾದ ಹಿಂದೂ ಯುವಕ ಪರೇಶ್ ಮೇಸ್ತಾ ಆಕಸ್ಮಿಕವಾಗಿ ಸಾವಿಗೀಡಾಗಿದ್ದಾನೆ ಎಂಬುದು ಸಿಬಿಐ ತನಿಖೆಯಿಂದ ತಿಳಿದುಬಂದಿದೆ. ಈ ತನಿಖಾ ವರದಿಯು ಚುನಾವಣಾ ಸಮಯದಲ್ಲಿ ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದೆ.

lokesh

Recent Posts

ಓದುಗರ ಪತ್ರ: ಯುವಜನರ ದಾರಿತಪ್ಪಿಸುವ ಸರ್ಕಾರದ ಕುಟಿಲ ನೀತಿ

ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ…

3 hours ago

ಓದುಗರ ಪತ್ರ: ಸ್ವಾಗತಾರ್ಹ ನಡೆ!

ಸ್ವಾಗತಾರ್ಹ ನಡೆ! ಜಾತಿ ಮೀರಿ ಪ್ರೀತಿಸಿದರೆ ಕುಂದಲ್ಲವದು ಮರ್ಯಾದೆಗೆ ಬದಲಿಗೆ ಹೆಚ್ಚುವುದು ಮರ್ಯಾದೆ ಗೌರವ! ಜಾತಿ ಕಟ್ಟಳೆ ಮುರಿವ ಸಮತೆಯ…

3 hours ago

ಓದುಗರ ಪತ್ರ: ನಿರ್ಲಕ್ಷ್ಯಕ್ಕೆ ಒಳಗಾದ ಬ್ಯಾರಿಕೇಡ್‌ಗಳು

ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್‌ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ…

3 hours ago

ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹ

ಲೊಕ್ಕನಹಳ್ಳಿ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ; ಅಧಿಕಾರಿಗಳ ವಿರುದ್ಧ ಆಕ್ರೋಶ  ಹನೂರು: ಒಂದೆಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು…

3 hours ago

ಕೊಡಗಿನಲ್ಲಿ ಶೇ.80ರಷ್ಟು ಭತ್ತ ಕಟಾವು ಕಾರ್ಯ ಪೂರ್ಣ

ನವೀನ್ ಡಿಸೋಜ ೧೮,೫೦೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆದಿರುವ ರೈತರು; ಹವಾಮಾನ ವೈಪರೀತ್ಯದ ನಡುವೆಯೂ ಕಟಾವು ಕಾರ್ಯ ಚುರುಕು ಮಡಿಕೇರಿ:…

3 hours ago

ಮಳೆಯಿಂದ ತಗ್ಗಿದ ಚಳಿ, ಒಕ್ಕಣೆಗೆ ಪರದಾಟ!

ಚಾಮರಾಜನಗರ: ತೀವ್ರ ಚಳಿಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆ ಕಳೆದ ೨-೩ ದಿನಗಳಿಂದ ಎದುರಾಗಿರುವ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ…

3 hours ago