ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲು ಹಣ ನೀಡುವ ನಿರ್ಧರಿಸಿರುವ ಕಾಂಗ್ರೆಸ್ ಸರ್ಕಾರ ಒಂದು ವಚನಭ್ರಷ್ಟ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.
ನಗರದ ಬಿಜೆಪಿ ಕಚೇರಿ ಮುಂದೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಟೀಲ್, ಚುನಾವಣಾ ಸಮಯದಲ್ಲಿ ಪ್ರತಿ ಕುಟುಂಬದ ಸದಸ್ಯನಿಗೆ ತಲಾ 10 ಕೇಜಿಯಂತೆ ಅಕ್ಕಿ ನೀಡುವ ಗ್ಯಾರಂಟಿಯನ್ನು ಸಿದ್ದರಾಮಯ್ಯ ನೀಡಿದ್ದರು. ಅಂದರೆ, ಕೇಂದ್ರ ಸರ್ಕಾರ ನೀಡುವ 5 ಕೇಜಿ ಅಕ್ಕಿ ಸೇರಿ ಪ್ರತಿ ಸದಸ್ಯನಿಗೆ 15 ಕೇಜಿ ಅಕ್ಕಿ ಸಿಗಬೇಕಿತ್ತು. ಆದರೆ ಸರ್ಕಾರ 5 ಕೇಜಿಗಷ್ಟೇ ಹಣ ನೀಡುವುದಾಗಿ ಹೇಳಿದೆ.
ಸರ್ಕಾರ 15 ಕೆಜಿ ಅಕ್ಕಿ ಅಥವಾ 10 ಕೆಜಿ ಅಕ್ಕಿ ಕೊಳ್ಳಲು ತಗಲುವ ಮೊತ್ತದಷ್ಟು ಹಣ ನೀಡದಿದ್ದರೆ ವಿಧಾನ ಸೌಧ ಒಳಗೆ ಮತ್ತು ಹೊರಗಡೆ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ ನೀಡಿದ್ದಾರೆ.
ಸ್ಯಾಂಡಲ್ವುಡ್ನಲ್ಲಿ ಇಂದು ಕ್ರಿಸ್ಮಸ್ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್,…
ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…
ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.…
ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್ ಹಾಗೂ ಖಾಸಗಿ ಬಸ್ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ…
ಬೆಂಗಳೂರು: ಮಧ್ಯರಾತ್ರಿಯಿಂದಲೇ ಎಲ್ಲೆಡೆ ಕ್ರಿಸ್ಮಸ್ ಸಡಗರ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕ್ರಿಸ್ಮಸ್ ಹಬ್ಬವು ನಂಬಿಕೆಯೆಂಬ…