Mysore
26
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಸಿದ್ದರಾಮಯ್ಯ ಭೇಟಿ ಮಾಡಿದ ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್‌ ಚೌಹಾಣ್‌

ಬೆಂಗಳೂರು: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್‌ ಸೋಮವಾರ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.

ಸಿದ್ಧರಾಮಯ್ಯ ಅವರು ನಿನ್ನೆಯಷ್ಟೇ ಮಹಾರಾಷ್ಟ್ರದ ಗಡಿ ಜಿಲ್ಲೆಗಳಿಗೆ ಭೇಟಿ ನೀಡಿ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಳೆದ ಎರಡು ದಿನಗಳಿಂದಲೂ ಬೆಂಗಳೂರಿನಲ್ಲಿರುವ ಅಶೋಕ್ ಚೌವ್ಹಾಣ್ ನಿನ್ನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು. ಇಂದು ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಚೌವ್ಹಾಣ್ ಕಾಂಗ್ರೆಸ್ ಪರವಾಗಿ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಪ್ರಚಾರ ನಡೆಸಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!