BREAKING NEWS

ದೇವೇಗೌಡರನ್ನು ಸಿದ್ದರಾಮಯ್ಯ ಹೆದರಿಸಿಟ್ಟುಕೊಂಡಿದ್ದರು: ಎಚ್‌ಡಿಕೆ

ಬೆಂಗಳೂರು: ಜೆಡಿಎಸ್‌ನಲ್ಲಿದ್ದಾಗ ಸಿದ್ದರಾಮಯ್ಯ ಪಾಳೇಗಾರಿಕೆ ಮಾಡುತ್ತಾ ದೇವೇಗೌಡರನ್ನು ಹೆದರಿಸಿಟ್ಟುಕೊಂಡಿದ್ದರು. ಈಗ ಕಾಂಗ್ರೆಸ್‌ ಬಿಟ್ಟು ಬೇರೆ ಪಕ್ಷ ಕಟ್ಟಿ ಎರಡು ಸ್ಥಾನ ಗೆಲ್ಲಿಸಲಿ ಎಂದು ಜೆಡಿಎಸ್‌ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.

ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬ್ಯಾನರ್‌ನಲ್ಲಿ ತಮ್ಮ ಭಾವಚಿತ್ರ ಇಲ್ಲ ಎಂಬ ಕಾರಣಕ್ಕೆ ಕಾರ್ಯಕ್ರಮಕ್ಕೆ ಬಂದಿರಲಿಲ್ಲ. ಇಕ್ಬಾಲ್‌ ಅನ್ಸಾರಿ ಅವರನ್ನು ಮಂತ್ರಿ ಮಾಡಬೇಡಿ‌ ಅಂತ ಗಲಾಟೆ ಮಾಡಿದ್ದರು. ಸಭೆಯಿಂದ ಟವಲ್ ಕೊಡವಿಕೊಂಡು ಎದ್ದು ಹೋಗಿದ್ದರು. ಹೋಗುವಾಗ ಎಂಟು ಶಾಸಕರನ್ನು ಕರೆದುಕೊಂಡು ಹೋಗಿದ್ದರು. ಅವರಲ್ಲಿ ಎಷ್ಟು ಜನರನ್ನು ಗೆಲ್ಲಿಸಿಕೊಂಡರು? ಅವರಿಗೆ ಈ ಬಾರಿ ಜನರ ಮೂಲಕ ಉತ್ತರ ಕೊಡಿಸುತ್ತೇನೆ’ ಎಂದರು.

ಕಾಂಗ್ರೆಸ್‌–ಬಿಜೆಪಿ ಒಟ್ಟಾಗಿ ಜೆಡಿಎಸ್ ವಿರುದ್ಧ ಷಡ್ಯಂತ್ರ ರೂಪಿಸುತ್ತಿವೆ. ಒಳ ಒಪ್ಪಂದ ಮಾಡಿಕೊಂಡು ಪರಸ್ಪರ ಎ ಟೀಂ, ಬಿ ಟೀಂಗಳಂತೆ ಕೆಲಸ ಮಾಡುತ್ತಿವೆ. ಹೈದರಾಬಾದ್‌ನಲ್ಲಿ ಕಾಂಗ್ರೆಸ್‌ ನಾಯಕರ ಜತೆ ಜೆಡಿಎಸ್‌ ಮಾತುಕತೆ ಮಾಡಿದೆ ಎಂದು ಮುಖ್ಯಮಂತ್ರಿ ಹೇಳುತ್ತಾರೆ. ಬಿಜೆಪಿ ಜತೆ ಒಳ ಒಪ್ಪಂದವಾಗಿದೆ ಎಂದು ಮೈಸೂರಿನಲ್ಲಿ ಸಿದ್ದರಾಮಯ್ಯ ಹೇಳಿಕೆ ನೀಡುತ್ತಾರೆ. ಎರಡೂ ಪಕ್ಷಗಳಿಗೆ ಬೇರೆ ವಿಷಯ ಇಲ್ಲವೇ ಎಂದು ಪ್ರಶ್ನಿಸಿದರು.

‘ಗೌಡರ ಕುಟುಂಬವೇ ಅಂತಿಮ’

ಬೆಂಗಳೂರು: ‘ಜೆಡಿಎಸ್‌ ಪಕ್ಷದಲ್ಲಿ ಎಚ್‌.ಡಿ. ದೇವೇಗೌಡರ ಕುಟುಂಬವೇ ಅಂತಿಮ. ಅಲ್ಲಿ ಸ್ವತಂತ್ರ ಅಭಿಪ್ರಾಯಕ್ಕೆ ಅವಕಾಶವಿಲ್ಲ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

‘ಆ ಪಕ್ಷದಲ್ಲಿ ದೇವೇಗೌಡರು, ಕುಮಾರಸ್ವಾಮಿ ಹೇಳಿದಂತೆ ಎಲ್ಲರೂ ಕೇಳಬೇಕು. ಸ್ವತಂತ್ರವಾಗಿ ಮಾತನಾಡಲು ಪ್ರಯತ್ನಿಸಿದರೆ ಪಕ್ಷದಿಂದ ಹೊರಹಾಕುತ್ತಾರೆ. ಅವರ ಕುಟುಂಬದ ವಿರುದ್ಧ ಮಾತನಾಡಿದರೆ ಪಕ್ಷದಲ್ಲಿ ಉಳಿಯಲು ಬಿಡುವುದಿಲ್ಲ. ಸ್ವತಂತ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕಾಗಿ ನನ್ನನ್ನು ಹೊರಹಾಕಿದಂತೆ ಈಗ ಗುಬ್ಬಿ ಮಾಜಿ ಶಾಸಕ ಎಸ್‌.ಆರ್‌. ಶ್ರೀನಿವಾಸ್‌ ಅವರನ್ನೂ ಹೊರ ಕಳುಹಿಸಿದ್ದಾರೆ’ ಎಂದರು.

andolanait

Recent Posts

ಓದುಗರ ಪತ್ರ: ಹಿರಿಯ ನಾಗರಿಕರಿಗೆ ರೈಲ್ವೆ ರಿಯಾಯಿತಿ

ಸೌಲಭ್ಯ ಮತ್ತೆ ಮುಂದುವರಿಯಲಿ ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ರೂ.೪೪೯.೧೩ ಕೋಟಿ ರೂಪಾಯಿಗೂ ಹೆಚ್ಚು…

3 mins ago

ಓದುಗರ ಪತ್ರ: ಮರುಪರಿಶೀಲನೆ ಅತ್ಯಗತ್ಯ

ಇತ್ತೀಚಿನ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ( ಎಫ್. ಸಿ. ಆರ್. ಎ) ತಿದ್ದುಪಡಿಗಳು ಕೇವಲ ನಿಯಮಗಳಲ್ಲ, ಅವು ದಶಕಗಳಿಂದ…

5 mins ago

ಬಸ್‌ನಲ್ಲಿ ಚಿನ್ನಾಭರಣ ಕಳವು

೧೮ ಲಕ್ಷ ರೂ. ಮೌಲ್ಯದ ಒಡವೆಗಳ ಅಪಹರಣ ಮೈಸೂರು: ನಗರ ಸಾರಿಗೆ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿದ್ದ ಸುಮಾರು ೧೮…

13 mins ago

ಮೈಸೂರು ಡಿಸಿ ಬಂಧನಕ್ಕೆ ವಾರಂಟ್

ಪಾಲನೆಯಾಗದ ಕೋರ್ಟ್ ಆದೇಶ: ಡಿಸಿಗೆ ನೋಟಿಸ್ ಮೈಸೂರು: ಭೂ ವ್ಯಾಜ್ಯ ಪ್ರಕರಣವೊಂದಕ್ಕೆ ಸಂಬಂಽಸಿದಂತೆ ನ್ಯಾಯಾಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ…

17 mins ago

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

13 hours ago