BREAKING NEWS

ದೇವೇಗೌಡರನ್ನು ಸಿದ್ದರಾಮಯ್ಯ ಹೆದರಿಸಿಟ್ಟುಕೊಂಡಿದ್ದರು: ಎಚ್‌ಡಿಕೆ

ಬೆಂಗಳೂರು: ಜೆಡಿಎಸ್‌ನಲ್ಲಿದ್ದಾಗ ಸಿದ್ದರಾಮಯ್ಯ ಪಾಳೇಗಾರಿಕೆ ಮಾಡುತ್ತಾ ದೇವೇಗೌಡರನ್ನು ಹೆದರಿಸಿಟ್ಟುಕೊಂಡಿದ್ದರು. ಈಗ ಕಾಂಗ್ರೆಸ್‌ ಬಿಟ್ಟು ಬೇರೆ ಪಕ್ಷ ಕಟ್ಟಿ ಎರಡು ಸ್ಥಾನ ಗೆಲ್ಲಿಸಲಿ ಎಂದು ಜೆಡಿಎಸ್‌ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.

ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬ್ಯಾನರ್‌ನಲ್ಲಿ ತಮ್ಮ ಭಾವಚಿತ್ರ ಇಲ್ಲ ಎಂಬ ಕಾರಣಕ್ಕೆ ಕಾರ್ಯಕ್ರಮಕ್ಕೆ ಬಂದಿರಲಿಲ್ಲ. ಇಕ್ಬಾಲ್‌ ಅನ್ಸಾರಿ ಅವರನ್ನು ಮಂತ್ರಿ ಮಾಡಬೇಡಿ‌ ಅಂತ ಗಲಾಟೆ ಮಾಡಿದ್ದರು. ಸಭೆಯಿಂದ ಟವಲ್ ಕೊಡವಿಕೊಂಡು ಎದ್ದು ಹೋಗಿದ್ದರು. ಹೋಗುವಾಗ ಎಂಟು ಶಾಸಕರನ್ನು ಕರೆದುಕೊಂಡು ಹೋಗಿದ್ದರು. ಅವರಲ್ಲಿ ಎಷ್ಟು ಜನರನ್ನು ಗೆಲ್ಲಿಸಿಕೊಂಡರು? ಅವರಿಗೆ ಈ ಬಾರಿ ಜನರ ಮೂಲಕ ಉತ್ತರ ಕೊಡಿಸುತ್ತೇನೆ’ ಎಂದರು.

ಕಾಂಗ್ರೆಸ್‌–ಬಿಜೆಪಿ ಒಟ್ಟಾಗಿ ಜೆಡಿಎಸ್ ವಿರುದ್ಧ ಷಡ್ಯಂತ್ರ ರೂಪಿಸುತ್ತಿವೆ. ಒಳ ಒಪ್ಪಂದ ಮಾಡಿಕೊಂಡು ಪರಸ್ಪರ ಎ ಟೀಂ, ಬಿ ಟೀಂಗಳಂತೆ ಕೆಲಸ ಮಾಡುತ್ತಿವೆ. ಹೈದರಾಬಾದ್‌ನಲ್ಲಿ ಕಾಂಗ್ರೆಸ್‌ ನಾಯಕರ ಜತೆ ಜೆಡಿಎಸ್‌ ಮಾತುಕತೆ ಮಾಡಿದೆ ಎಂದು ಮುಖ್ಯಮಂತ್ರಿ ಹೇಳುತ್ತಾರೆ. ಬಿಜೆಪಿ ಜತೆ ಒಳ ಒಪ್ಪಂದವಾಗಿದೆ ಎಂದು ಮೈಸೂರಿನಲ್ಲಿ ಸಿದ್ದರಾಮಯ್ಯ ಹೇಳಿಕೆ ನೀಡುತ್ತಾರೆ. ಎರಡೂ ಪಕ್ಷಗಳಿಗೆ ಬೇರೆ ವಿಷಯ ಇಲ್ಲವೇ ಎಂದು ಪ್ರಶ್ನಿಸಿದರು.

‘ಗೌಡರ ಕುಟುಂಬವೇ ಅಂತಿಮ’

ಬೆಂಗಳೂರು: ‘ಜೆಡಿಎಸ್‌ ಪಕ್ಷದಲ್ಲಿ ಎಚ್‌.ಡಿ. ದೇವೇಗೌಡರ ಕುಟುಂಬವೇ ಅಂತಿಮ. ಅಲ್ಲಿ ಸ್ವತಂತ್ರ ಅಭಿಪ್ರಾಯಕ್ಕೆ ಅವಕಾಶವಿಲ್ಲ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

‘ಆ ಪಕ್ಷದಲ್ಲಿ ದೇವೇಗೌಡರು, ಕುಮಾರಸ್ವಾಮಿ ಹೇಳಿದಂತೆ ಎಲ್ಲರೂ ಕೇಳಬೇಕು. ಸ್ವತಂತ್ರವಾಗಿ ಮಾತನಾಡಲು ಪ್ರಯತ್ನಿಸಿದರೆ ಪಕ್ಷದಿಂದ ಹೊರಹಾಕುತ್ತಾರೆ. ಅವರ ಕುಟುಂಬದ ವಿರುದ್ಧ ಮಾತನಾಡಿದರೆ ಪಕ್ಷದಲ್ಲಿ ಉಳಿಯಲು ಬಿಡುವುದಿಲ್ಲ. ಸ್ವತಂತ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕಾಗಿ ನನ್ನನ್ನು ಹೊರಹಾಕಿದಂತೆ ಈಗ ಗುಬ್ಬಿ ಮಾಜಿ ಶಾಸಕ ಎಸ್‌.ಆರ್‌. ಶ್ರೀನಿವಾಸ್‌ ಅವರನ್ನೂ ಹೊರ ಕಳುಹಿಸಿದ್ದಾರೆ’ ಎಂದರು.

andolanait

Recent Posts

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

3 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

3 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

3 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

3 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

6 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

6 hours ago