ಬೆಂಗಳೂರು: ಜೆಡಿಎಸ್ನಲ್ಲಿದ್ದಾಗ ಸಿದ್ದರಾಮಯ್ಯ ಪಾಳೇಗಾರಿಕೆ ಮಾಡುತ್ತಾ ದೇವೇಗೌಡರನ್ನು ಹೆದರಿಸಿಟ್ಟುಕೊಂಡಿದ್ದರು. ಈಗ ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷ ಕಟ್ಟಿ ಎರಡು ಸ್ಥಾನ ಗೆಲ್ಲಿಸಲಿ ಎಂದು ಜೆಡಿಎಸ್ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.
ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬ್ಯಾನರ್ನಲ್ಲಿ ತಮ್ಮ ಭಾವಚಿತ್ರ ಇಲ್ಲ ಎಂಬ ಕಾರಣಕ್ಕೆ ಕಾರ್ಯಕ್ರಮಕ್ಕೆ ಬಂದಿರಲಿಲ್ಲ. ಇಕ್ಬಾಲ್ ಅನ್ಸಾರಿ ಅವರನ್ನು ಮಂತ್ರಿ ಮಾಡಬೇಡಿ ಅಂತ ಗಲಾಟೆ ಮಾಡಿದ್ದರು. ಸಭೆಯಿಂದ ಟವಲ್ ಕೊಡವಿಕೊಂಡು ಎದ್ದು ಹೋಗಿದ್ದರು. ಹೋಗುವಾಗ ಎಂಟು ಶಾಸಕರನ್ನು ಕರೆದುಕೊಂಡು ಹೋಗಿದ್ದರು. ಅವರಲ್ಲಿ ಎಷ್ಟು ಜನರನ್ನು ಗೆಲ್ಲಿಸಿಕೊಂಡರು? ಅವರಿಗೆ ಈ ಬಾರಿ ಜನರ ಮೂಲಕ ಉತ್ತರ ಕೊಡಿಸುತ್ತೇನೆ’ ಎಂದರು.
ಕಾಂಗ್ರೆಸ್–ಬಿಜೆಪಿ ಒಟ್ಟಾಗಿ ಜೆಡಿಎಸ್ ವಿರುದ್ಧ ಷಡ್ಯಂತ್ರ ರೂಪಿಸುತ್ತಿವೆ. ಒಳ ಒಪ್ಪಂದ ಮಾಡಿಕೊಂಡು ಪರಸ್ಪರ ಎ ಟೀಂ, ಬಿ ಟೀಂಗಳಂತೆ ಕೆಲಸ ಮಾಡುತ್ತಿವೆ. ಹೈದರಾಬಾದ್ನಲ್ಲಿ ಕಾಂಗ್ರೆಸ್ ನಾಯಕರ ಜತೆ ಜೆಡಿಎಸ್ ಮಾತುಕತೆ ಮಾಡಿದೆ ಎಂದು ಮುಖ್ಯಮಂತ್ರಿ ಹೇಳುತ್ತಾರೆ. ಬಿಜೆಪಿ ಜತೆ ಒಳ ಒಪ್ಪಂದವಾಗಿದೆ ಎಂದು ಮೈಸೂರಿನಲ್ಲಿ ಸಿದ್ದರಾಮಯ್ಯ ಹೇಳಿಕೆ ನೀಡುತ್ತಾರೆ. ಎರಡೂ ಪಕ್ಷಗಳಿಗೆ ಬೇರೆ ವಿಷಯ ಇಲ್ಲವೇ ಎಂದು ಪ್ರಶ್ನಿಸಿದರು.
‘ಗೌಡರ ಕುಟುಂಬವೇ ಅಂತಿಮ’
ಬೆಂಗಳೂರು: ‘ಜೆಡಿಎಸ್ ಪಕ್ಷದಲ್ಲಿ ಎಚ್.ಡಿ. ದೇವೇಗೌಡರ ಕುಟುಂಬವೇ ಅಂತಿಮ. ಅಲ್ಲಿ ಸ್ವತಂತ್ರ ಅಭಿಪ್ರಾಯಕ್ಕೆ ಅವಕಾಶವಿಲ್ಲ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
‘ಆ ಪಕ್ಷದಲ್ಲಿ ದೇವೇಗೌಡರು, ಕುಮಾರಸ್ವಾಮಿ ಹೇಳಿದಂತೆ ಎಲ್ಲರೂ ಕೇಳಬೇಕು. ಸ್ವತಂತ್ರವಾಗಿ ಮಾತನಾಡಲು ಪ್ರಯತ್ನಿಸಿದರೆ ಪಕ್ಷದಿಂದ ಹೊರಹಾಕುತ್ತಾರೆ. ಅವರ ಕುಟುಂಬದ ವಿರುದ್ಧ ಮಾತನಾಡಿದರೆ ಪಕ್ಷದಲ್ಲಿ ಉಳಿಯಲು ಬಿಡುವುದಿಲ್ಲ. ಸ್ವತಂತ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕಾಗಿ ನನ್ನನ್ನು ಹೊರಹಾಕಿದಂತೆ ಈಗ ಗುಬ್ಬಿ ಮಾಜಿ ಶಾಸಕ ಎಸ್.ಆರ್. ಶ್ರೀನಿವಾಸ್ ಅವರನ್ನೂ ಹೊರ ಕಳುಹಿಸಿದ್ದಾರೆ’ ಎಂದರು.
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…
ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…