ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿರುವ ಪ್ರಸಂಗ ನಡೆದಿದೆ. ಮಹಿಳಾ ಕಾರ್ಯಕರ್ತೆಯನ್ನು ತಳ್ಳಿದ್ದಕ್ಕೆ ಕೋಪಗೊಂಡ ಸಿದ್ದರಾಮಯ್ಯ, ದಾವಣಗೆರೆ ಜಿಲ್ಲೆ ಹರಿಹರ ಮೂಲದ ಕಾರ್ಯಕರ್ತನಿಗೆ ಕಪಾಳಕ್ಕೆ ಹೊಡೆದಿದ್ದಾರೆ. ಈ ಬಾರಿಯೂ ಸಹ ಶಾಸಕ ರಾಮಪ್ಪ ಅವರಿಗೆ ಟಿಕೆಟ್ ನೀಡಬೇಕೆಂದು ದಾವಣಗೆರೆ ಜಿಲ್ಲೆ ಹರಿಹರ ಮೂಲದ ಕಾರ್ಯಕರ್ತರು ಇಂದು (ಮಾರ್ಚ್ 24) ಬೆಂಗಳೂರಿನ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಆಗ್ರಹಿಸಿದರು. ಈ ವೇಳೆ ತಳ್ಳಾಟ ನೂಕಾಟದಿಂದ ಸಿಟ್ಟಿಗೆದ್ದ ಸಿದ್ದರಾಮಯ್ಯ, ಕಾರ್ಯಕರ್ತನ ಕೆನ್ನೆಗೆ ಬಾರಿಸಿದ್ದಾರೆ. ಇದೀಗ ಈ ವಿಡಿಯೋ ಫುಲ್ ವೈರಲ್ ಆಗಿದೆ.ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಶಾಸಕ ರಾಮಪ್ಪ ಮತ್ತೆ ಅದೇ ಕ್ಷೇತ್ರದಿಂದ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ. ಇದರಿಂದ ಅವರ ಬೆಂಬಲಿಗರು ಇಂದು ಬೆಂಗಳೂರಿನ ಸಿದ್ದರಾಮಯ್ಯನವರ ನಿವಾಸಕ್ಕೆ ತೆರಳಿ ತಮ್ಮ ನಾಯಕನಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದ್ದಾರೆ. ಈ ವೇಳೆ ರಾಮಪ್ಪ ಬೆಂಬಲಿಗರನ್ನು ಸಮಾಧಾನಗೊಳಿಸಲು ಯತ್ನಿಸಿದ ಸಿದ್ದರಾಮಯ್ಯ, ಟಿಕೆಟ್ ಆಮೇಲೆ ನೋಡೋಣ, ಸರ್ವೆ ರಿಪೋರ್ಟ್ ಬರಲಿ ಎಂದಿದ್ದಾರೆ.ಆದರೂ ಸುಮ್ಮನಾಗದ ಶಾಸಕ ರಾಮಪ್ಪ ಅಭಿಮಾನಿಗಳು ಸಿದ್ದರಾಮಯ್ಯ ಅವರನ್ಜು ಸುತ್ತುವರೆದರು. ಈ ವೇಳೆ ತಳ್ಳಾಟ ಹಾಗೂ ನೂಕಾಟ ಉಂಟಾಗಿದೆ. ತಮ್ಮ ನಾಯಕನಿಗೇ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದರು. ಇದರಿಂದ ಭಾರೀ ತಳ್ಳಾಟ ಹಾಗೂ ನೂಕಾಟ ಉಂಟಾಗಿದ್ದು, ಈ ಸಂದರ್ಭದಲ್ಲಿ ಮಹಿಳಾ ಕಾರ್ಯಕರ್ತೆಯನ್ನು ತಳ್ಳಿದ್ದಕ್ಕೆ ಕೋಪಗೊಂಡ ಸಿದ್ದರಾಮಯ್ಯ, ಕಾರ್ಯಕರ್ತನೋರ್ವನ ಕಾಪಾಳಕ್ಕೆ ಹೊಡೆದಿದ್ದಾರೆ.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…