ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿರುವ ಪ್ರಸಂಗ ನಡೆದಿದೆ. ಮಹಿಳಾ ಕಾರ್ಯಕರ್ತೆಯನ್ನು ತಳ್ಳಿದ್ದಕ್ಕೆ ಕೋಪಗೊಂಡ ಸಿದ್ದರಾಮಯ್ಯ, ದಾವಣಗೆರೆ ಜಿಲ್ಲೆ ಹರಿಹರ ಮೂಲದ ಕಾರ್ಯಕರ್ತನಿಗೆ ಕಪಾಳಕ್ಕೆ ಹೊಡೆದಿದ್ದಾರೆ. ಈ ಬಾರಿಯೂ ಸಹ ಶಾಸಕ ರಾಮಪ್ಪ ಅವರಿಗೆ ಟಿಕೆಟ್ ನೀಡಬೇಕೆಂದು ದಾವಣಗೆರೆ ಜಿಲ್ಲೆ ಹರಿಹರ ಮೂಲದ ಕಾರ್ಯಕರ್ತರು ಇಂದು (ಮಾರ್ಚ್ 24) ಬೆಂಗಳೂರಿನ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಆಗ್ರಹಿಸಿದರು. ಈ ವೇಳೆ ತಳ್ಳಾಟ ನೂಕಾಟದಿಂದ ಸಿಟ್ಟಿಗೆದ್ದ ಸಿದ್ದರಾಮಯ್ಯ, ಕಾರ್ಯಕರ್ತನ ಕೆನ್ನೆಗೆ ಬಾರಿಸಿದ್ದಾರೆ. ಇದೀಗ ಈ ವಿಡಿಯೋ ಫುಲ್ ವೈರಲ್ ಆಗಿದೆ.ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಶಾಸಕ ರಾಮಪ್ಪ ಮತ್ತೆ ಅದೇ ಕ್ಷೇತ್ರದಿಂದ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ. ಇದರಿಂದ ಅವರ ಬೆಂಬಲಿಗರು ಇಂದು ಬೆಂಗಳೂರಿನ ಸಿದ್ದರಾಮಯ್ಯನವರ ನಿವಾಸಕ್ಕೆ ತೆರಳಿ ತಮ್ಮ ನಾಯಕನಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದ್ದಾರೆ. ಈ ವೇಳೆ ರಾಮಪ್ಪ ಬೆಂಬಲಿಗರನ್ನು ಸಮಾಧಾನಗೊಳಿಸಲು ಯತ್ನಿಸಿದ ಸಿದ್ದರಾಮಯ್ಯ, ಟಿಕೆಟ್ ಆಮೇಲೆ ನೋಡೋಣ, ಸರ್ವೆ ರಿಪೋರ್ಟ್ ಬರಲಿ ಎಂದಿದ್ದಾರೆ.ಆದರೂ ಸುಮ್ಮನಾಗದ ಶಾಸಕ ರಾಮಪ್ಪ ಅಭಿಮಾನಿಗಳು ಸಿದ್ದರಾಮಯ್ಯ ಅವರನ್ಜು ಸುತ್ತುವರೆದರು. ಈ ವೇಳೆ ತಳ್ಳಾಟ ಹಾಗೂ ನೂಕಾಟ ಉಂಟಾಗಿದೆ. ತಮ್ಮ ನಾಯಕನಿಗೇ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದರು. ಇದರಿಂದ ಭಾರೀ ತಳ್ಳಾಟ ಹಾಗೂ ನೂಕಾಟ ಉಂಟಾಗಿದ್ದು, ಈ ಸಂದರ್ಭದಲ್ಲಿ ಮಹಿಳಾ ಕಾರ್ಯಕರ್ತೆಯನ್ನು ತಳ್ಳಿದ್ದಕ್ಕೆ ಕೋಪಗೊಂಡ ಸಿದ್ದರಾಮಯ್ಯ, ಕಾರ್ಯಕರ್ತನೋರ್ವನ ಕಾಪಾಳಕ್ಕೆ ಹೊಡೆದಿದ್ದಾರೆ.
ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…
ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…
ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…