BREAKING NEWS

ಮಹಿಳಾ ಕಾರ್ಯಕರ್ತೆಯನ್ನು ತಳ್ಳಿದ ಕಾರ್ಯಕರ್ತನಿಗೆ ಸಿದ್ದರಾಮಯ್ಯ ಕಪಾಳಮೋಕ್ಷ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿರುವ ಪ್ರಸಂಗ ನಡೆದಿದೆ. ಮಹಿಳಾ ಕಾರ್ಯಕರ್ತೆಯನ್ನು ತಳ್ಳಿದ್ದಕ್ಕೆ ಕೋಪಗೊಂಡ ಸಿದ್ದರಾಮಯ್ಯ, ದಾವಣಗೆರೆ ಜಿಲ್ಲೆ ಹರಿಹರ ಮೂಲದ ಕಾರ್ಯಕರ್ತನಿಗೆ ಕಪಾಳಕ್ಕೆ ಹೊಡೆದಿದ್ದಾರೆ. ಈ ಬಾರಿಯೂ ಸಹ ಶಾಸಕ ರಾಮಪ್ಪ ಅವರಿಗೆ ಟಿಕೆಟ್ ನೀಡಬೇಕೆಂದು ದಾವಣಗೆರೆ ಜಿಲ್ಲೆ ಹರಿಹರ ಮೂಲದ ಕಾರ್ಯಕರ್ತರು ಇಂದು (ಮಾರ್ಚ್ 24) ಬೆಂಗಳೂರಿನ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಆಗ್ರಹಿಸಿದರು. ಈ ವೇಳೆ ತಳ್ಳಾಟ ನೂಕಾಟದಿಂದ ಸಿಟ್ಟಿಗೆದ್ದ ಸಿದ್ದರಾಮಯ್ಯ, ಕಾರ್ಯಕರ್ತನ ಕೆನ್ನೆಗೆ ಬಾರಿಸಿದ್ದಾರೆ. ಇದೀಗ ಈ ವಿಡಿಯೋ ಫುಲ್ ವೈರಲ್ ಆಗಿದೆ.ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಶಾಸಕ ರಾಮಪ್ಪ ಮತ್ತೆ ಅದೇ ಕ್ಷೇತ್ರದಿಂದ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ. ಇದರಿಂದ ಅವರ ಬೆಂಬಲಿಗರು ಇಂದು ಬೆಂಗಳೂರಿನ ಸಿದ್ದರಾಮಯ್ಯನವರ ನಿವಾಸಕ್ಕೆ ತೆರಳಿ ತಮ್ಮ ನಾಯಕನಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದ್ದಾರೆ. ಈ ವೇಳೆ ರಾಮಪ್ಪ ಬೆಂಬಲಿಗರನ್ನು ಸಮಾಧಾನಗೊಳಿಸಲು ಯತ್ನಿಸಿದ ಸಿದ್ದರಾಮಯ್ಯ, ಟಿಕೆಟ್ ಆಮೇಲೆ ನೋಡೋಣ, ಸರ್ವೆ ರಿಪೋರ್ಟ್ ಬರಲಿ ಎಂದಿದ್ದಾರೆ.ಆದರೂ ಸುಮ್ಮನಾಗದ ಶಾಸಕ ರಾಮಪ್ಪ ಅಭಿಮಾನಿಗಳು ಸಿದ್ದರಾಮಯ್ಯ ಅವರನ್ಜು ಸುತ್ತುವರೆದರು. ಈ ವೇಳೆ ತಳ್ಳಾಟ ಹಾಗೂ ನೂಕಾಟ ಉಂಟಾಗಿದೆ. ತಮ್ಮ ನಾಯಕನಿಗೇ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದರು. ಇದರಿಂದ ಭಾರೀ ತಳ್ಳಾಟ ಹಾಗೂ ನೂಕಾಟ ಉಂಟಾಗಿದ್ದು, ಈ ಸಂದರ್ಭದಲ್ಲಿ ಮಹಿಳಾ ಕಾರ್ಯಕರ್ತೆಯನ್ನು ತಳ್ಳಿದ್ದಕ್ಕೆ ಕೋಪಗೊಂಡ ಸಿದ್ದರಾಮಯ್ಯ, ಕಾರ್ಯಕರ್ತನೋರ್ವನ ಕಾಪಾಳಕ್ಕೆ ಹೊಡೆದಿದ್ದಾರೆ.

lokesh

Recent Posts

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

4 mins ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

1 hour ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

2 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

3 hours ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

5 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

5 hours ago