BREAKING NEWS

ವಿಶೇಷ ಅನುದಾನ ಬಿಡುಗಡೆ ಕೋರಿ ನಿರ್ಮಲಾ ಸೀತಾರಾಮನ್​​ಗೆ ಪತ್ರ ಬರೆದ ಸಿದ್ದರಾಮಯ್ಯ

ಬೆಂಗಳೂರು : 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ವಿಶೇಷ ಅನುದಾನ ಮತ್ತು ರಾಜ್ಯದ ವಿಶೇಷ ಅನುದಾನ ಬಿಡುಗಡೆ ಕುರಿತಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

15ನೇ ಹಣಕಾಸು ಆಯೋಗದ 2020 – 21 ರ ಪ್ರಕಾರ ವಿಶೇಷ ಅನುದಾನವಾಗಿ 5,495 ಕೋಟಿ ರೂ. ಶಿಫಾರಸು ಆಗಿತ್ತು. ಆದರೆ ರಾಜ್ಯಕ್ಕೆ ಯಾವುದೇ ವಿಶೇಷ ಅನುದಾನ ಬಿಡುಗಡೆಯಾಗಿಲ್ಲ. ಹಾಗಾಗಿ ಕೂಡಲೇ ವಿಶೇಷ ಅನುದಾನ ಬಿಡುಗಡೆ ಮಾಡಬೇಕೆಂದು ಪತ್ರದ ಮೂಲಕ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

2021-26 ಹಣಕಾಸು ಆಯೋಗ 6 ಸಾವಿರ ಕೋಟಿ ರೂ. ಬೆಂಗಳೂರಿನ ನೀರಾವರಿ ಕಾಮಗಾರಿ ಹಾಗೂ ಪೆರಿಪೆಲರ್ ರಸ್ತೆ ನಿರ್ಮಾಣಕ್ಕೆ ನೀಡಿತ್ತು. ಆದರೆ ಯಾವುದೇ ಅನುದಾನ ಕರ್ನಾಟಕ ಸರ್ಕಾರಕ್ಕೆ ನೀಡಿಲ್ಲ. ಇದರಿಂದ ರಾಜ್ಯದ ಹಣಕಾಸು ಸ್ಥಿತಿಗೆ ಹಿನ್ನಡೆ ಆಗಿದೆ. ರಾಜ್ಯದ ಹಣಕಾಸು ಸ್ಥಿತಿಯನ್ನು ಅರ್ಥಮಾಡಿಕೊಂಡು ವಿಶೇಷ ಅನುದಾನ ಮತ್ತು ನಿರ್ದಿಷ್ಟ ಅನುದಾನ ಮೊದಲ ಆದ್ಯತೆ ನೀಡಬೇಕೆಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

ಈ ಹಿಂದೆ 14 ನೇ ಹಣಕಾಸು ಆಯೋಗವು ಶಿಫಾರಸು ಮಾಡಿದ ಶೇಕಡಾ 4.71 ತೆರಿಗೆ ಹಂಚಿಕೆಯಲ್ಲಿ ಕರ್ನಾಟಕದ ಪಾಲನ್ನು 3.647 ಪ್ರತಿಶತಕ್ಕೆ ಇಳಿಸಲಾಗಿದೆ. ಆಯೋಗವು ನಿಗದಿ ಪಡಿಸಿದ್ದ ಆದಾಯದ ಮಾನದಂಡಗಳನ್ನು ಕರ್ನಾಟಕವು ಕಳೆದುಕೊಂಡಿದೆ. 2011-12ರಲ್ಲಿ ರಾಜ್ಯದ ಜಿಎಸ್​ಡಿಪಿಯನ್ನು 30 ಪ್ರತಿಶತದಷ್ಟು ಹೆಚ್ಚಿಸಲಾಗಿದ್ದು, ಎಲ್ಲಾ ರಾಜ್ಯಗಳು ಸೇರಿದಂತೆ 9 ಪ್ರತಿಶತಕ್ಕಿಂತ ಕಡಿಮೆ ಸರಾಸರಿ ಹೆಚ್ಚಳವಾಗಿದೆ.

2011-12ರಲ್ಲಿ ಐಟಿ ಸಂಬಂಧಿತ ಸೇವೆಗಳಲ್ಲಿ ರಾಜ್ಯದ ಜಿಎಸ್‌ಡಿಪಿಯನ್ನು ಗಣನೀಯವಾಗಿ ಹೆಚ್ಚಳವಾಗಿದೆಯಾದರೂ ಐಟಿ ಸೇವೆಗಳ ರಫ್ತು ಶೂನ್ಯ ದರವನ್ನು ಹೊಂದಿರುವುದರಿಂದ ರಾಜ್ಯದ ತೆರಿಗೆಗಳಿಗೆ ಈ ಸೇವೆಗಳು ಯಾವುದೆ ಸಹಕಾರಿಯಾಗಿಲ್ಲ. 14 ನೇ ಹಣಕಾಸು ಆಯೋಗದ ಶಿಫಾರಸಿಗೆ ಹೋಲಿಸಿದರೆ 15 ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ತೆರಿಗೆ ಹಂಚಿಕೆ ಪಾಲು ಕಡಿಮೆಯಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯಕ್ಕೆ ಒಟ್ಟು ತೆರಿಗೆ ಹಂಚಿಕೆಯಲ್ಲಿ 37,011 ಕೋಟಿ ರೂ. ಕಡಿಮೆ ಮಾಡಿದೆ.

15ನೇ ಹಣಕಾಸು ಆಯೋಗದ 2020 – 21 ರ ಪ್ರಕಾರ ವಿಶೇಷ ಅನುದಾನವಾಗಿ ಕರ್ನಾಟಕಕ್ಕೆ 5,495 ಕೋಟಿ ರೂ. ಶಿಫಾರಸು ಆಗಿತ್ತು. ಆದರೆ ಕೇಂದ್ರ ಸರ್ಕಾರ ಆಯೋಗದ ಶಿಫಾರಸನ್ನು ಪರಿಗಣಿಸಿಲ್ಲ. ರಾಜ್ಯದ ಸಂಪನ್ಮೂಲಗಳು ಮತ್ತು ಕೇಂದ್ರ ಸರ್ಕಾರದ ಹಣಕಾಸಿನ ಬದ್ಧತೆಗಳನ್ನು ಗಮನದಲ್ಲಿಟ್ಟುಕೊಂಡು, ವಿಶೇಷ ಅನುದಾನಗಳ ಶಿಫಾರಸನ್ನು ಸೂಕ್ತವಾಗಿ ಪರಿಗಣಿಸಲಾಗುವುದು ಎಂದು ಹೇಳಿದೆ.

ಆದರೆ, ಕರ್ನಾಟಕ ರಾಜ್ಯಕ್ಕೆ ಇದುವರೆಗೆ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ ಮತ್ತು ತೆರಿಗೆ ಹಂಚಿಕೆಯಲ್ಲಿ ತೀವ್ರ ಕಡಿತ ಮಾಡಲಾಗಿದೆ. ಈಗಾಗಲೇ ಸಂಕಷ್ಟದಲ್ಲಿರುವ ರಾಜ್ಯದ ಹಣಕಾಸಿನ ಸ್ಥಿತಿಗೆ ಇದು ದೊಡ್ಡ ಹಿನ್ನಡೆಯಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ಪತ್ರದಲ್ಲಿ ಉಲ್ಲೇಖಸಿದ್ದಾರೆ.

andolanait

Recent Posts

ಓದುಗರ ಪತ್ರ: ಚಾ.ಬೆಟ್ಟ: ಮೂಲ ಸ್ವರೂಪಕ್ಕೆ ಧಕ್ಕೆಯಾಗದಿರಲಿ

ಚಾಮುಂಡಿ ಬೆಟ್ಟದಲ್ಲಿ ಪ್ರಸಾದ ಯೋಜನೆಯಡಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಮೈಸೂರು ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹಾಗೂ ಪ್ರಜ್ಞಾವಂತ…

1 hour ago

ಓದುಗರ ಪತ್ರ: ಕೆಎಚ್‌ಬಿ ಬಡಾವಣೆಗೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರು ತಾಲ್ಲೂಕಿನ ಧನಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕೆಂಚಲಗೂಡು ಗ್ರಾಮದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ)ಯಿಂದ ನಿರ್ಮಿಸಿರುವ ಬಡಾವಣೆಯಲ್ಲಿ ನೀರು,…

1 hour ago

ಓದುಗರ ಪತ್ರ: ಬೈಕ್ ಟ್ಯಾಕ್ಸಿ ಚಾಲಕರು ನಿಯಮ ಪಾಲಿಸಲಿ

ಮೈಸೂರಿನಲ್ಲಿ ಬಸ್ ನಿಲ್ದಾಣ, ರೈಲು ನಿಲ್ದಾಣ ಮೊದಲಾದ ಕಡೆಗೆ ತೆರಳುವವರು, ಅದರಲ್ಲೂ ಮುಖ್ಯವಾಗಿ ಒಬ್ಬರೇ ಪ್ರಯಾಣಿಸುವವರು ಹೆಚ್ಚಾಗಿ ಇತ್ತೀಚಿನ ದಿನಗಳಲ್ಲಿ…

1 hour ago

ಓದುಗರ ಪತ್ರ: ‘ಉದಯರವಿ’ಯನ್ನು ಸ್ಮಾರಕವನ್ನಾಗಿ ರೂಪಿಸಿ

ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ‘ಉದಯರವಿ’ ಮನೆಯನ್ನು ಸ್ಮಾರಕವನ್ನಾಗಿ ಮಾಡಬೇಕೆಂದು ಸಾಹಿತ್ಯಾಸಕ್ತರು ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದರೂ ಸಂಬಂಧಪಟ್ಟವರು…

1 hour ago

ಪ್ರೊ.ಆರ್.ಎಂ.ಚಿಂತಾಮಣಿ ಅವರ ವಾರದ ಅಂಕಣ: ಸಮರ್ಥ ಕಾಯ್ದೆ ಪಾಲನಾ ವ್ಯವಸ್ಥೆ ಮುಖ್ಯ

ಪ್ರೊ.ಆರ್.ಎಂ.ಚಿಂತಾಮಣಿ ನುರಿತ ಹಣಕಾಸು ಆಡಳಿತಗಾರ ಮತ್ತು ದೇಶದ ಹಣಕಾಸು ಮತ್ತು ಬಂಡವಾಳ ಪೇಟೆಗಳ ಬೆಳವಣಿಗೆ ಮತ್ತು ನಿಯಂತ್ರಣದ ಉನ್ನತಾಧಿಕಾರವುಳ್ಳ ಭಾರತೀಯ…

1 hour ago

ಕಾಫಿ ಬೆಳೆಗಾರರ ನಿದ್ದೆಗೆಡಿಸಿದ ದರ ಕುಸಿತ

ಲಕ್ಷ್ಮಿಕಾಂತ್ ಕೊಮಾರಪ್ಪ ಹತ್ತಾರು ಸಮಸ್ಯೆಗಳ ನಡುವೆಯೂ ಕಾಫಿ ಬೆಳೆದಿದ್ದವರಿಗೆ ನಷ್ಟದ ಭೀತಿ; ಮತ್ತಷ್ಟು ದರ ಕುಸಿತಗೊಳ್ಳುವ ಸಾಧ್ಯತೆ ಸೋಮವಾರಪೇಟೆ: ಕಾರ್ಮಿಕರ ಕೊರತೆ,…

1 hour ago