BREAKING NEWS

ವಿಶೇಷ ಅನುದಾನ ಬಿಡುಗಡೆ ಕೋರಿ ನಿರ್ಮಲಾ ಸೀತಾರಾಮನ್​​ಗೆ ಪತ್ರ ಬರೆದ ಸಿದ್ದರಾಮಯ್ಯ

ಬೆಂಗಳೂರು : 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ವಿಶೇಷ ಅನುದಾನ ಮತ್ತು ರಾಜ್ಯದ ವಿಶೇಷ ಅನುದಾನ ಬಿಡುಗಡೆ ಕುರಿತಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

15ನೇ ಹಣಕಾಸು ಆಯೋಗದ 2020 – 21 ರ ಪ್ರಕಾರ ವಿಶೇಷ ಅನುದಾನವಾಗಿ 5,495 ಕೋಟಿ ರೂ. ಶಿಫಾರಸು ಆಗಿತ್ತು. ಆದರೆ ರಾಜ್ಯಕ್ಕೆ ಯಾವುದೇ ವಿಶೇಷ ಅನುದಾನ ಬಿಡುಗಡೆಯಾಗಿಲ್ಲ. ಹಾಗಾಗಿ ಕೂಡಲೇ ವಿಶೇಷ ಅನುದಾನ ಬಿಡುಗಡೆ ಮಾಡಬೇಕೆಂದು ಪತ್ರದ ಮೂಲಕ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

2021-26 ಹಣಕಾಸು ಆಯೋಗ 6 ಸಾವಿರ ಕೋಟಿ ರೂ. ಬೆಂಗಳೂರಿನ ನೀರಾವರಿ ಕಾಮಗಾರಿ ಹಾಗೂ ಪೆರಿಪೆಲರ್ ರಸ್ತೆ ನಿರ್ಮಾಣಕ್ಕೆ ನೀಡಿತ್ತು. ಆದರೆ ಯಾವುದೇ ಅನುದಾನ ಕರ್ನಾಟಕ ಸರ್ಕಾರಕ್ಕೆ ನೀಡಿಲ್ಲ. ಇದರಿಂದ ರಾಜ್ಯದ ಹಣಕಾಸು ಸ್ಥಿತಿಗೆ ಹಿನ್ನಡೆ ಆಗಿದೆ. ರಾಜ್ಯದ ಹಣಕಾಸು ಸ್ಥಿತಿಯನ್ನು ಅರ್ಥಮಾಡಿಕೊಂಡು ವಿಶೇಷ ಅನುದಾನ ಮತ್ತು ನಿರ್ದಿಷ್ಟ ಅನುದಾನ ಮೊದಲ ಆದ್ಯತೆ ನೀಡಬೇಕೆಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

ಈ ಹಿಂದೆ 14 ನೇ ಹಣಕಾಸು ಆಯೋಗವು ಶಿಫಾರಸು ಮಾಡಿದ ಶೇಕಡಾ 4.71 ತೆರಿಗೆ ಹಂಚಿಕೆಯಲ್ಲಿ ಕರ್ನಾಟಕದ ಪಾಲನ್ನು 3.647 ಪ್ರತಿಶತಕ್ಕೆ ಇಳಿಸಲಾಗಿದೆ. ಆಯೋಗವು ನಿಗದಿ ಪಡಿಸಿದ್ದ ಆದಾಯದ ಮಾನದಂಡಗಳನ್ನು ಕರ್ನಾಟಕವು ಕಳೆದುಕೊಂಡಿದೆ. 2011-12ರಲ್ಲಿ ರಾಜ್ಯದ ಜಿಎಸ್​ಡಿಪಿಯನ್ನು 30 ಪ್ರತಿಶತದಷ್ಟು ಹೆಚ್ಚಿಸಲಾಗಿದ್ದು, ಎಲ್ಲಾ ರಾಜ್ಯಗಳು ಸೇರಿದಂತೆ 9 ಪ್ರತಿಶತಕ್ಕಿಂತ ಕಡಿಮೆ ಸರಾಸರಿ ಹೆಚ್ಚಳವಾಗಿದೆ.

2011-12ರಲ್ಲಿ ಐಟಿ ಸಂಬಂಧಿತ ಸೇವೆಗಳಲ್ಲಿ ರಾಜ್ಯದ ಜಿಎಸ್‌ಡಿಪಿಯನ್ನು ಗಣನೀಯವಾಗಿ ಹೆಚ್ಚಳವಾಗಿದೆಯಾದರೂ ಐಟಿ ಸೇವೆಗಳ ರಫ್ತು ಶೂನ್ಯ ದರವನ್ನು ಹೊಂದಿರುವುದರಿಂದ ರಾಜ್ಯದ ತೆರಿಗೆಗಳಿಗೆ ಈ ಸೇವೆಗಳು ಯಾವುದೆ ಸಹಕಾರಿಯಾಗಿಲ್ಲ. 14 ನೇ ಹಣಕಾಸು ಆಯೋಗದ ಶಿಫಾರಸಿಗೆ ಹೋಲಿಸಿದರೆ 15 ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ತೆರಿಗೆ ಹಂಚಿಕೆ ಪಾಲು ಕಡಿಮೆಯಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯಕ್ಕೆ ಒಟ್ಟು ತೆರಿಗೆ ಹಂಚಿಕೆಯಲ್ಲಿ 37,011 ಕೋಟಿ ರೂ. ಕಡಿಮೆ ಮಾಡಿದೆ.

15ನೇ ಹಣಕಾಸು ಆಯೋಗದ 2020 – 21 ರ ಪ್ರಕಾರ ವಿಶೇಷ ಅನುದಾನವಾಗಿ ಕರ್ನಾಟಕಕ್ಕೆ 5,495 ಕೋಟಿ ರೂ. ಶಿಫಾರಸು ಆಗಿತ್ತು. ಆದರೆ ಕೇಂದ್ರ ಸರ್ಕಾರ ಆಯೋಗದ ಶಿಫಾರಸನ್ನು ಪರಿಗಣಿಸಿಲ್ಲ. ರಾಜ್ಯದ ಸಂಪನ್ಮೂಲಗಳು ಮತ್ತು ಕೇಂದ್ರ ಸರ್ಕಾರದ ಹಣಕಾಸಿನ ಬದ್ಧತೆಗಳನ್ನು ಗಮನದಲ್ಲಿಟ್ಟುಕೊಂಡು, ವಿಶೇಷ ಅನುದಾನಗಳ ಶಿಫಾರಸನ್ನು ಸೂಕ್ತವಾಗಿ ಪರಿಗಣಿಸಲಾಗುವುದು ಎಂದು ಹೇಳಿದೆ.

ಆದರೆ, ಕರ್ನಾಟಕ ರಾಜ್ಯಕ್ಕೆ ಇದುವರೆಗೆ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ ಮತ್ತು ತೆರಿಗೆ ಹಂಚಿಕೆಯಲ್ಲಿ ತೀವ್ರ ಕಡಿತ ಮಾಡಲಾಗಿದೆ. ಈಗಾಗಲೇ ಸಂಕಷ್ಟದಲ್ಲಿರುವ ರಾಜ್ಯದ ಹಣಕಾಸಿನ ಸ್ಥಿತಿಗೆ ಇದು ದೊಡ್ಡ ಹಿನ್ನಡೆಯಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ಪತ್ರದಲ್ಲಿ ಉಲ್ಲೇಖಸಿದ್ದಾರೆ.

andolanait

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

12 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

14 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

15 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

15 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

18 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago