ಮದ್ದೂರು: ಹಿಜಾಬ್ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಧಾರ ಶೋಭೆ ತರುವಂತದ್ದಲ್ಲ ಎಂದು ಉಡುಪಿಯ ಪೇಜಾವರ ಮಠದ ಪೀಠಾಧಿಪತಿಗಳಾದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಗಳು ಭಾನುವಾರ ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಜಾಬ್ ನಿಷೇಧ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಧಾರ ಸಮಾಜದಲ್ಲಿ ಶೋಭೆ ತರುವುದಿಲ್ಲ. ಇದರಿಂದ ಸಮಾಜದಲ್ಲಿ ಪರಸ್ಪರ ಸಂಘರ್ಷಕ್ಕೆ ಕಾರಣವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಆಳುವ ಸರ್ಕಾರಗಳು ಕಾನೂನು ಮಾಡುವಾಗ ಅದು ಎಲ್ಲರಿಗೂ ಅನ್ವಯವಾಗುವಂತೆ ಇರಬೇಕು. ಕೇವಲ ಒಂದು ಸಮಾಜವನ್ನು ಗುರಿಯಾಗಿಟ್ಟುಕೊಂಡು ಕಾನೂನು ರೂಪಿಸುವುದು ಸರಿಯಲ್ಲ ಎಂದು ಕಿಡಿಕಾರಿದರು.
ಆಯೋಧ್ಯೆ ನಿರ್ಮಾಣಕ್ಕೆ ಕಾರ್ಯ ಚಟುವಟಿಕೆ ನಿಲ್ಲಿಸಬೇಡಿ: ಅಯೋಧ್ಯೆಯ ರಾಮಮಂದಿರ ನಿರ್ಮಾಣದ ನಂತರ ನಮ್ಮ ಕಾರ್ಯ ಚಟುವಟಿಕೆ ಇಷ್ಟಕ್ಕೆ ಮುಗಿಯಬಾರದು. ದೇಶದಲ್ಲಿ ಆರ್ಥಿಕವಾಗಿ ಹಿಂದುಳಿದ ಪ್ರತಿಯೊಬ್ಬರಿಗೂ ಸೂರು ಕಲ್ಪಿಸುವುದು ನಮ್ಮ ಗುರಿಯಾಗಬೇಕು ಎನ್ನುವುದು ನಮ್ಮ ಅಪೇಕ್ಷೆಯಾಗಿದೆ. ಇದಕ್ಕೆ ಆರ್ಥಿಕವಾಗಿ ಸದೃಢರಾದವರು ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…