BREAKING NEWS

ಸಿದ್ದರಾಮಯ್ಯನವರದ್ದು ಅನ್ನಭಾಗ್ಯ ಅಲ್ಲ ಕನ್ನಭಾಗ್ಯ: ಬಿಜೆಪಿ ವ್ಯಂಗ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು ಅನ್ನಭಾಗ್ಯ ಅಲ್ಲ ಕನ್ನಭಾಗ್ಯ ಎಂದು ವ್ಯಂಗ್ಯವಾಡಿರುವ ಬಿಜೆಪಿ, ಚುನಾವಣೆ ವೇಳೆ 10 ಕೆಜಿ ಅಕ್ಕಿ ನೀಡುವ ಆಶ್ವಾಸನೆ ನೀದಿದ್ದ ಕಾಂಗ್ರೆಸ್ ಇದೀಗ ನಾಡಿನ ಜನತೆಗೆ ನಂಬಿಕೆ ದ್ರೋಹ ಎಸಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ನಾವು ಇಂದಿನಿಂದ ‘ಅನ್ನಭಾಗ್ಯ’ ಯೋಜನೆಯಡಿ ಬಡಕುಟುಂಬದ ಪ್ರತಿ ವ್ಯಕ್ತಿಗೆ ತಲಾ 5 ಕೆ.ಜಿ ಅಕ್ಕಿ ಹಾಗೂ ರೂ. 170 ನೀಡಲಿದ್ದೇವೆ ಎಂಬ ಸಿದ್ದರಾಮಯ್ಯ ಅವರ ಟ್ವೀಟ್ ಗೆ ವಿರುದ್ಧವಾಗಿ ಸರಣಿ ಪ್ರತಿ ಟ್ವೀಟ್ ಮಾಡಿರುವ ಬಿಜೆಪಿ, ಕೈ ಪೈಳಯ ನಿಜಕ್ಕೂ ನುಡಿದಂತೆ ನಡೆದಿದ್ದರೇ, 10 ಕೆಜಿ ಅಕ್ಕಿಯ ಮಾರುಕಟ್ಟೆ ದರವನ್ನೇ ಜನತೆಗೆ ನೀಡಬೇಕಾಗಿತ್ತು ಎಂದು ಪ್ರತಿಪಾದಿಸಿದೆ. ಇಷ್ಟು ಮಾತ್ರವಲ್ಲದೆ ನುಡಿದ್ದದೇ ಒಂದು ನಡೆದದ್ದು ಮತ್ತೊಂದು, ಅಕ್ಕಿಮುಕ್ತ ಕರ್ನಾಟಕ ಎಂಬಿತ್ಯಾದಿ ಒಕ್ಕಣೆಗಳೊಂದಿಗೆ ಕಾಲೆಳೆದಿದ್ದಾರೆ.

‘ಹಸಿವು ಮುಕ್ತ ಭಾರತ’ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ. ಪ್ರತಿಯೊಬ್ಬ ಭಾರತೀಯರು ಹಸಿವಿನಿಂದ ಪರಿತಪಿಸಬಾರದು ಎಂಬ ಕಾರಣಕ್ಕೆ ‘ಗರೀಬ್ ಕಲ್ಯಾಣ್ ‘ ಯೋಜನೆಯಡಿ ಪ್ರತಿ ತಿಂಗಳು, ಪಡಿತರದಾರರಿಗೆ 5 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ. ಆದರೆ, ಆ 5 ಕೆಜಿ ಅಕ್ಕಿಗೆ ತಮ್ಮ ಲೇಬಲ್ ಅನ್ನು ಸಿದ್ದರಾಮಯ್ಯ ಅವರ ಸರ್ಕಾರ ಈ ಹಿಂದೆ ಅಂಟಿಸಿ, ಮೂಲ ಕೊಡುಗೆದಾರರ ಹೆಸರನ್ನು ಮರೆಮಾಚಿತ್ತು ಎಂದು ಆರೋಪಿಸಿದೆ.

ಈ ಬಾರಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ 10 ಕೆಜಿ ಅಕ್ಕಿಯ ಆಶ್ವಾಸನೆ ನೀಡಿದ್ದ, ಕಾಂಗ್ರೆಸ್ ಈಗ ನಾಡಿನ ಜನತೆಗೆ ನಂಬಿಕೆ ದ್ರೋಹ ಎಸಗಿ, 5 ಕೆಜಿ ಅಕ್ಕಿಯ ಕನಿಷ್ಠ ದರವನ್ನು ನೀಡುತ್ತಿರುವುದನ್ನೇ ಮಹಾನ್ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿದೆ. ಕಾಂಗ್ರೆಸ್ ನಿಜಕ್ಕೂ ನುಡಿದಂತೆ ನಡೆದಿದ್ದರೇ, 10 ಕೆಜಿ ಅಕ್ಕಿಯ ಮಾರುಕಟ್ಟೆ ದರವನ್ನು ಜನತೆಗೆ ನೀಡಬೇಕಾಗಿತ್ತು.

ಆದರೆ, ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಅಕ್ಕಿಯನ್ನು ತನ್ನದು ಎಂದು ಹೇಳಿಕೊಂಡು, ಉಳಿದ 5 ಕೆಜಿ ಅಕ್ಕಿಯ ಕನಿಷ್ಠ ದರವನ್ನು ಜನತೆಗೆ ನೀಡುತ್ತಿರುವುದು ಅಕ್ಷಮ್ಯ ಅಪರಾಧವಾಗಿದೆ. ನಿಜಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಜನಪರ ಕಾಳಜಿ ಇದ್ದರೆ, ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಅಕ್ಕಿಯನ್ನು ಹೊರತುಪಡಿಸಿ, ಉಳಿದ 10 ಕೆಜಿ ಅಕ್ಕಿಯ ಮಾರುಕಟ್ಟೆ ದರವನ್ನು ಫಲಾನುಭವಿಗಳಿಗೆ ವರ್ಗಾಯಿಸಬೇಕು. ಆದರೆ, ಇದೆಲ್ಲವನ್ನೂ ಬಿಟ್ಟು ಕೇವಲ ತೋರಿಕೆಗೆ, ಫಲಾನುಭವಿಗಳಿಗೆ ಹಣ ವರ್ಗಾಯಿಸುತ್ತೇವೆಂಬುದನ್ನು ನಾವು ಖಂಡಿಸುತ್ತೇವೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಟ್ವೀಟ್ ನಲ್ಲಿ ಹೇಳಿದ್ದು….

ಹಸಿವಿನ ಬೇನೆ ನಾಡಿನ ಬಡಜನರನ್ನು ಬಾಧಿಸದಿರಲಿ ಎಂಬ ಸದುದ್ದೇಶದೊಂದಿಗೆ ನಾವು ಇಂದಿನಿಂದ ‘ಅನ್ನಭಾಗ್ಯ’ ಯೋಜನೆಯಡಿ ಬಡಕುಟುಂಬದ ಪ್ರತಿ ವ್ಯಕ್ತಿಗೆ ತಲಾ 5 ಕೆ.ಜಿ ಅಕ್ಕಿ ಹಾಗೂ ರೂ. 170 ನೀಡಲಿದ್ದೇವೆ. ಹೆಚ್ಚುವರಿ 5 ಕೆ.ಜಿ ಅಕ್ಕಿಯ ಬದಲಿಗೆ ನೀಡುವ ಹಣವನ್ನು ಆಹಾರ ಪದಾರ್ಥಗಳ ಖರೀದಿಗೆ ಮಾತ್ರ ಬಳಕೆ ಮಾಡಬೇಕೆಂದು ನಾಡ ಬಾಂಧವರಲ್ಲಿ ಮನವಿ ಮಾಡುತ್ತೇನೆ. ಹಸಿವಿನ ಸಂಕಟ ಅನುಭವಿಸಿದವರಿಗೆ ಮಾತ್ರ ಅರಿವಿರಲು ಸಾಧ್ಯ. ಹಸಿವುಮುಕ್ತ ಕರ್ನಾಟಕ ನಿರ್ಮಾಣದ ನಮ್ಮ ಪ್ರಯತ್ನಕ್ಕೆ ನಿಮ್ಮ ಸಹಕಾರವಿರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟರ್ ನಲ್ಲಿ ವಿನಂತಿ ಮಾಡಿದ್ದರು. ಅವರ ಈ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

12 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

12 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

12 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

12 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

12 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

12 hours ago