BREAKING NEWS

ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ ‘ಸಿದ್ದಕಲೆ’ ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ: ಎಚ್‌ಡಿಕೆ ಟೀಕೆ

ಬೆಂಗಳೂರು : ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ ‘ಸಿದ್ದಕಲೆ’ ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು,  ನಕಲಿ ಪತ್ರ ಎಂದಾದರೆ ರಾಜ್ಯಪಾಲರ ಕಾರ್ಯಾಲಯ ನಕಲಿ ಪತ್ರದ ಮೇರೆಗೆ ಕ್ರಮ ಜರುಗಿಸಿ ಎಂದು ಷರಾ ಬರೆದಿದೆಯೇ? ಸುಳ್ಳಿನ ಪತ್ರಕ್ಕೆ ಮಾನ್ಯ ರಾಜ್ಯಪಾಲರು ಸ್ಪಂದಿಸಿದ್ದಾರೆಯೇ? ರಾಜಧರ್ಮದ ಪ್ರವಚನಕಾರರೇ ರಾಜಭವನದ ಪಾವಿತ್ರ್ಯವನ್ನೇ ಶಂಕಿಸುವುದು ತರವೇ? ಸ್ವಯಂ ಘೋಷಿತ ನಕಲಿ ಸಂವಿಧಾನ ತಜ್ಞನಿಗೆ ಇದು ಭೂಷಣವಲ್ಲ ಎಂದಿದ್ದಾರೆ.

ಕಂಡೋರ ಭುಜದ ಮೇಲೆ ಬಂದೂಕಿಟ್ಟು ಇನ್ನೊಬ್ಬರ ರಾಜಕೀಯ ಜೀವನ ಎತ್ತಿಬಿಡುವ ನಿಮ್ಮಂಥ ‘ಎತ್ತುವಳಿ ಗಿರಾಕಿ’ಗೆ ನಕಲಿಪತ್ರಗಳ ಸೃಷ್ಟಿ ಬೆಣ್ಣೆ ಕಡಿದಷ್ಟೇ ಸಲೀಸು. ಮತ್ತೊಬ್ಬರ ಶ್ರಮದ ಬೆವರೇ ನಿಮ್ಮ ಸ್ವಾರ್ಥ ರಾಜಕಾರಣಕ್ಕೆ ಹವಿಸ್ಸು ಎಂದು ಕುಮಾರಸ್ವಾಮಿ ಪರೋಕ್ಷವಾಗಿ ಸಿದ್ದರಾಮಯ್ಯ ಅವರನ್ನು  ಟೀಕಿಸಿದ್ದಾರೆ.

ನಿಮ್ಮ ಸಚಿವರ ವಿರುದ್ಧ ನಿಮ್ಮ ಕಾಂಗ್ರೆಸ್  ಶಾಸಕರೇ ಬರೆದ ಪತ್ರವನ್ನೇ ನಕಲಿ ಎಂದು ಬಿಂಬಿಸಿದ ‘ನಕಲಿರಾಮ’ನ ಉಪ್ಪುಹುಳಿ ಖಾರದ ಬಗ್ಗೆ ನನಗೆ ಗೊತ್ತಿಲ್ಲದ್ದೇನಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಉಗಿದು ಉಪ್ಪಾಕಿದ ಮೇಲೆ ಆ ನಕಲಿ ಪತ್ರ ‘ಅಸಲಿ’ಯಾದ ಕಥೆಯ ಹಕೀಕತ್ತು ಏನಿರಬಹುದು ಸಿಎಂ ಸಾಹೇಬರೇ? ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ರಾಜಕೀಯ ಬದುಕಿಗೆ ಬ್ಲ್ಯಾಕ್’ಮೇಲೇ ಬಂಡವಾಳ. ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ‘ಅಪ್ಪಯ್ಯ ಮತ್ತು ಅತೀಂದ್ರನ ಆಟಾಟೋಪ’ ಕಂಡು ಹೌಹಾರಿದವರು ಯಾರು? ವರ್ಗಾವಣೆ ಪಟ್ಟಿಗೆ ಅಲ್ಲಿ ಬಿದ್ದ ಟಿಕ್ಕುಗಳ ಲೆಕ್ಕ ಹೇಳಬೇಕಾ ಟಿಕ್ ಟಿಕ್ ಸಿದ್ದರಾಮಯ್ಯ? ಎಂದು ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

andolanait

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

1 min ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

33 mins ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

1 hour ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

4 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

4 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

5 hours ago