ಬೆಂಗಳೂರು : ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ ‘ಸಿದ್ದಕಲೆ’ ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ನಕಲಿ ಪತ್ರ ಎಂದಾದರೆ ರಾಜ್ಯಪಾಲರ ಕಾರ್ಯಾಲಯ ನಕಲಿ ಪತ್ರದ ಮೇರೆಗೆ ಕ್ರಮ ಜರುಗಿಸಿ ಎಂದು ಷರಾ ಬರೆದಿದೆಯೇ? ಸುಳ್ಳಿನ ಪತ್ರಕ್ಕೆ ಮಾನ್ಯ ರಾಜ್ಯಪಾಲರು ಸ್ಪಂದಿಸಿದ್ದಾರೆಯೇ? ರಾಜಧರ್ಮದ ಪ್ರವಚನಕಾರರೇ ರಾಜಭವನದ ಪಾವಿತ್ರ್ಯವನ್ನೇ ಶಂಕಿಸುವುದು ತರವೇ? ಸ್ವಯಂ ಘೋಷಿತ ನಕಲಿ ಸಂವಿಧಾನ ತಜ್ಞನಿಗೆ ಇದು ಭೂಷಣವಲ್ಲ ಎಂದಿದ್ದಾರೆ.
ಕಂಡೋರ ಭುಜದ ಮೇಲೆ ಬಂದೂಕಿಟ್ಟು ಇನ್ನೊಬ್ಬರ ರಾಜಕೀಯ ಜೀವನ ಎತ್ತಿಬಿಡುವ ನಿಮ್ಮಂಥ ‘ಎತ್ತುವಳಿ ಗಿರಾಕಿ’ಗೆ ನಕಲಿಪತ್ರಗಳ ಸೃಷ್ಟಿ ಬೆಣ್ಣೆ ಕಡಿದಷ್ಟೇ ಸಲೀಸು. ಮತ್ತೊಬ್ಬರ ಶ್ರಮದ ಬೆವರೇ ನಿಮ್ಮ ಸ್ವಾರ್ಥ ರಾಜಕಾರಣಕ್ಕೆ ಹವಿಸ್ಸು ಎಂದು ಕುಮಾರಸ್ವಾಮಿ ಪರೋಕ್ಷವಾಗಿ ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದಾರೆ.
ನಿಮ್ಮ ಸಚಿವರ ವಿರುದ್ಧ ನಿಮ್ಮ ಕಾಂಗ್ರೆಸ್ ಶಾಸಕರೇ ಬರೆದ ಪತ್ರವನ್ನೇ ನಕಲಿ ಎಂದು ಬಿಂಬಿಸಿದ ‘ನಕಲಿರಾಮ’ನ ಉಪ್ಪುಹುಳಿ ಖಾರದ ಬಗ್ಗೆ ನನಗೆ ಗೊತ್ತಿಲ್ಲದ್ದೇನಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಉಗಿದು ಉಪ್ಪಾಕಿದ ಮೇಲೆ ಆ ನಕಲಿ ಪತ್ರ ‘ಅಸಲಿ’ಯಾದ ಕಥೆಯ ಹಕೀಕತ್ತು ಏನಿರಬಹುದು ಸಿಎಂ ಸಾಹೇಬರೇ? ಎಂದು ಪ್ರಶ್ನಿಸಿದ್ದಾರೆ.
ನಿಮ್ಮ ರಾಜಕೀಯ ಬದುಕಿಗೆ ಬ್ಲ್ಯಾಕ್’ಮೇಲೇ ಬಂಡವಾಳ. ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ‘ಅಪ್ಪಯ್ಯ ಮತ್ತು ಅತೀಂದ್ರನ ಆಟಾಟೋಪ’ ಕಂಡು ಹೌಹಾರಿದವರು ಯಾರು? ವರ್ಗಾವಣೆ ಪಟ್ಟಿಗೆ ಅಲ್ಲಿ ಬಿದ್ದ ಟಿಕ್ಕುಗಳ ಲೆಕ್ಕ ಹೇಳಬೇಕಾ ಟಿಕ್ ಟಿಕ್ ಸಿದ್ದರಾಮಯ್ಯ? ಎಂದು ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…