BREAKING NEWS

100 ಕೋಟಿ ಪರಿಹಾರ ಕೋರಿ ಮಾಜಿ ಪತ್ನಿ, ಸಹೋದರನ ವಿರುದ್ಧ ಸಿದ್ಧಿಕಿ ಮಾನನಷ್ಟ ಕೇಸ್

ಮುಂಬೈ: ಬಾಲಿವುಡ್ ನಟ ನವಾಜುದ್ದೀನ್ ಸಿದ್ಧಿಕಿ 100 ಕೋಟಿ ನಷ್ಟ ಪರಿಹಾರಕ್ಕೆ ಒತ್ತಾಯಿಸಿ ಮಾಜಿ ಪತ್ನಿ ಆಲಿಯಾ ಅಲಿಯಾಸ್ ಜೈನಬ್ ಸಿದ್ಧಿಕಿ ಹಾಗೂ ಸಹೋದರ ಶಂಷುದ್ದೀನ್ ಸಿದ್ಧಿಕಿ ವಿರುದ್ಧ ಬಾಂಬೆ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ತನ್ನ ವಿರುದ್ಧ ಮಾಜಿ ಪತ್ನಿ ಆಲಿಯಾ ಮತ್ತು ಸಹೋದರ ಶಂಷುದ್ದೀನ್ ಮಾನಹಾನಿಕರ ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಸಿದ್ಧಿಕಿ ಆರೋಪಿಸಿದ್ದಾರೆ. ಮಾರ್ಚ್ 30ರಂದು ನ್ಯಾಯಮೂರ್ತಿ ರಿಯಾಜ್ ಚಂಗ್ಲಾ ಅವರ ಏಕಸದಸ್ಯ ಪೀಠದ ಎದುರು ಪ್ರಕರಣ ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಮಾಜಿ ಪತ್ನಿ ಹಾಗೂ ಸಹೋದರ ನನ್ನ ಮಾನಹಾನಿಗೆ ಕಾರಣವಾಗುವ ಯಾವುದೇ ಹೇಳಿಕೆ ನೀಡದಂತೆ ಶಾಶ್ವತವಾಗಿ ತಡೆ ನೀಡುವಂತೆ ಅವರು ಹೈಕೋರ್ಟ್‌ಗೆ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ, ಅವರಿಬ್ಬರಿಂದ ಲಿಖಿತ ಕ್ಷಮಾಪಣಾ ಪತ್ರಕ್ಕೂ ಸಿದ್ಧಿಕಿ ಬೇಡಿಕೆ ಇಟ್ಟಿದ್ದಾರೆ.

2008ರಲ್ಲಿ ಸಹೋದರ ಶಂಷುದ್ದೀನ್‌ನನ್ನು ತನ್ನ ಮ್ಯಾನೇಜರ್ ಆಗಿ ನೇಮಕ ಮಾಡಿಕೊಂಡು ಎಲ್ಲ ಹಣಕಾಸು ವ್ಯವಹಾರಗಳನ್ನು ಒಪ್ಪಿಸಿದ್ದೆ. ಆದರೆ, ಆತ ನನ್ನನ್ನು ವಂಚಿಸಿ ನನ್ನ ಹಣದಲ್ಲಿ ಆಸ್ತಿ ಖರೀದಿ ಮಾಡಿದ್ದಾನೆ. ಈ ಬಗ್ಗೆ ಪ್ರಶ್ನಿಸಿದಾಗ, ನನ್ನ ಮಾಜಿ ಪತ್ನಿಯನ್ನು ಉತ್ತೇಜಿಸಿ ಸುಳ್ಳು ಪ್ರಕರಣ ದಾಖಲಿಸುವಂತೆ ಮಾಡಿದ್ದಾನೆ ಎಂದು ಸಿದ್ಧಿಕಿ ದಾಖಲಿಸಿರುವ ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ.

ಆಲಿಯಾ ಮತ್ತು ಶಂಷುದ್ದೀನ್ ತನಗೆ ₹21 ಕೋಟಿ ವಂಚಿಸಿ ಆಸ್ತಿ ಖರೀದಿಸಿದ್ದಾರೆ ಎಂದು ಸಿದ್ಧಿಕಿ ಆರೋಪಿಸಿದ್ದಾರೆ.

ಅಕ್ರಮ ಆಸ್ತಿಯನ್ನು ತನಗೆ ಹಿಂದಿರುಗಿಸುವಂತೆ ಕೇಳಿದಾಗ, ಇಬ್ಬರೂ ನನ್ನ ವಿರುದ್ಧ ಸಂಚು ರೂಪಿಸಿದ್ದಾರೆ. ನನ್ನ ವಿರುದ್ಧ ಕೀಳುಮಟ್ಟದ ವಿಡಿಯೊ ಮತ್ತು ಹೇಳಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿ ಮಾನ ಕಳೆದಿದ್ದಾರೆ ಎಂದೂ ಸಿದ್ಧಿಕಿ ದೂರಿದ್ದಾರೆ.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago