BREAKING NEWS

100 ಕೋಟಿ ಪರಿಹಾರ ಕೋರಿ ಮಾಜಿ ಪತ್ನಿ, ಸಹೋದರನ ವಿರುದ್ಧ ಸಿದ್ಧಿಕಿ ಮಾನನಷ್ಟ ಕೇಸ್

ಮುಂಬೈ: ಬಾಲಿವುಡ್ ನಟ ನವಾಜುದ್ದೀನ್ ಸಿದ್ಧಿಕಿ 100 ಕೋಟಿ ನಷ್ಟ ಪರಿಹಾರಕ್ಕೆ ಒತ್ತಾಯಿಸಿ ಮಾಜಿ ಪತ್ನಿ ಆಲಿಯಾ ಅಲಿಯಾಸ್ ಜೈನಬ್ ಸಿದ್ಧಿಕಿ ಹಾಗೂ ಸಹೋದರ ಶಂಷುದ್ದೀನ್ ಸಿದ್ಧಿಕಿ ವಿರುದ್ಧ ಬಾಂಬೆ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ತನ್ನ ವಿರುದ್ಧ ಮಾಜಿ ಪತ್ನಿ ಆಲಿಯಾ ಮತ್ತು ಸಹೋದರ ಶಂಷುದ್ದೀನ್ ಮಾನಹಾನಿಕರ ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಸಿದ್ಧಿಕಿ ಆರೋಪಿಸಿದ್ದಾರೆ. ಮಾರ್ಚ್ 30ರಂದು ನ್ಯಾಯಮೂರ್ತಿ ರಿಯಾಜ್ ಚಂಗ್ಲಾ ಅವರ ಏಕಸದಸ್ಯ ಪೀಠದ ಎದುರು ಪ್ರಕರಣ ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಮಾಜಿ ಪತ್ನಿ ಹಾಗೂ ಸಹೋದರ ನನ್ನ ಮಾನಹಾನಿಗೆ ಕಾರಣವಾಗುವ ಯಾವುದೇ ಹೇಳಿಕೆ ನೀಡದಂತೆ ಶಾಶ್ವತವಾಗಿ ತಡೆ ನೀಡುವಂತೆ ಅವರು ಹೈಕೋರ್ಟ್‌ಗೆ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ, ಅವರಿಬ್ಬರಿಂದ ಲಿಖಿತ ಕ್ಷಮಾಪಣಾ ಪತ್ರಕ್ಕೂ ಸಿದ್ಧಿಕಿ ಬೇಡಿಕೆ ಇಟ್ಟಿದ್ದಾರೆ.

2008ರಲ್ಲಿ ಸಹೋದರ ಶಂಷುದ್ದೀನ್‌ನನ್ನು ತನ್ನ ಮ್ಯಾನೇಜರ್ ಆಗಿ ನೇಮಕ ಮಾಡಿಕೊಂಡು ಎಲ್ಲ ಹಣಕಾಸು ವ್ಯವಹಾರಗಳನ್ನು ಒಪ್ಪಿಸಿದ್ದೆ. ಆದರೆ, ಆತ ನನ್ನನ್ನು ವಂಚಿಸಿ ನನ್ನ ಹಣದಲ್ಲಿ ಆಸ್ತಿ ಖರೀದಿ ಮಾಡಿದ್ದಾನೆ. ಈ ಬಗ್ಗೆ ಪ್ರಶ್ನಿಸಿದಾಗ, ನನ್ನ ಮಾಜಿ ಪತ್ನಿಯನ್ನು ಉತ್ತೇಜಿಸಿ ಸುಳ್ಳು ಪ್ರಕರಣ ದಾಖಲಿಸುವಂತೆ ಮಾಡಿದ್ದಾನೆ ಎಂದು ಸಿದ್ಧಿಕಿ ದಾಖಲಿಸಿರುವ ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ.

ಆಲಿಯಾ ಮತ್ತು ಶಂಷುದ್ದೀನ್ ತನಗೆ ₹21 ಕೋಟಿ ವಂಚಿಸಿ ಆಸ್ತಿ ಖರೀದಿಸಿದ್ದಾರೆ ಎಂದು ಸಿದ್ಧಿಕಿ ಆರೋಪಿಸಿದ್ದಾರೆ.

ಅಕ್ರಮ ಆಸ್ತಿಯನ್ನು ತನಗೆ ಹಿಂದಿರುಗಿಸುವಂತೆ ಕೇಳಿದಾಗ, ಇಬ್ಬರೂ ನನ್ನ ವಿರುದ್ಧ ಸಂಚು ರೂಪಿಸಿದ್ದಾರೆ. ನನ್ನ ವಿರುದ್ಧ ಕೀಳುಮಟ್ಟದ ವಿಡಿಯೊ ಮತ್ತು ಹೇಳಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿ ಮಾನ ಕಳೆದಿದ್ದಾರೆ ಎಂದೂ ಸಿದ್ಧಿಕಿ ದೂರಿದ್ದಾರೆ.

andolanait

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

36 mins ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

54 mins ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

1 hour ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

2 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

2 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

3 hours ago