ಮುಂಬೈ: ಬಾಲಿವುಡ್ ನಟ ನವಾಜುದ್ದೀನ್ ಸಿದ್ಧಿಕಿ 100 ಕೋಟಿ ನಷ್ಟ ಪರಿಹಾರಕ್ಕೆ ಒತ್ತಾಯಿಸಿ ಮಾಜಿ ಪತ್ನಿ ಆಲಿಯಾ ಅಲಿಯಾಸ್ ಜೈನಬ್ ಸಿದ್ಧಿಕಿ ಹಾಗೂ ಸಹೋದರ ಶಂಷುದ್ದೀನ್ ಸಿದ್ಧಿಕಿ ವಿರುದ್ಧ ಬಾಂಬೆ ಹೈಕೋರ್ಟ್ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ತನ್ನ ವಿರುದ್ಧ ಮಾಜಿ ಪತ್ನಿ ಆಲಿಯಾ ಮತ್ತು ಸಹೋದರ ಶಂಷುದ್ದೀನ್ ಮಾನಹಾನಿಕರ ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಸಿದ್ಧಿಕಿ ಆರೋಪಿಸಿದ್ದಾರೆ. ಮಾರ್ಚ್ 30ರಂದು ನ್ಯಾಯಮೂರ್ತಿ ರಿಯಾಜ್ ಚಂಗ್ಲಾ ಅವರ ಏಕಸದಸ್ಯ ಪೀಠದ ಎದುರು ಪ್ರಕರಣ ವಿಚಾರಣೆಗೆ ಬರುವ ಸಾಧ್ಯತೆ ಇದೆ.
ಮಾಜಿ ಪತ್ನಿ ಹಾಗೂ ಸಹೋದರ ನನ್ನ ಮಾನಹಾನಿಗೆ ಕಾರಣವಾಗುವ ಯಾವುದೇ ಹೇಳಿಕೆ ನೀಡದಂತೆ ಶಾಶ್ವತವಾಗಿ ತಡೆ ನೀಡುವಂತೆ ಅವರು ಹೈಕೋರ್ಟ್ಗೆ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ, ಅವರಿಬ್ಬರಿಂದ ಲಿಖಿತ ಕ್ಷಮಾಪಣಾ ಪತ್ರಕ್ಕೂ ಸಿದ್ಧಿಕಿ ಬೇಡಿಕೆ ಇಟ್ಟಿದ್ದಾರೆ.
2008ರಲ್ಲಿ ಸಹೋದರ ಶಂಷುದ್ದೀನ್ನನ್ನು ತನ್ನ ಮ್ಯಾನೇಜರ್ ಆಗಿ ನೇಮಕ ಮಾಡಿಕೊಂಡು ಎಲ್ಲ ಹಣಕಾಸು ವ್ಯವಹಾರಗಳನ್ನು ಒಪ್ಪಿಸಿದ್ದೆ. ಆದರೆ, ಆತ ನನ್ನನ್ನು ವಂಚಿಸಿ ನನ್ನ ಹಣದಲ್ಲಿ ಆಸ್ತಿ ಖರೀದಿ ಮಾಡಿದ್ದಾನೆ. ಈ ಬಗ್ಗೆ ಪ್ರಶ್ನಿಸಿದಾಗ, ನನ್ನ ಮಾಜಿ ಪತ್ನಿಯನ್ನು ಉತ್ತೇಜಿಸಿ ಸುಳ್ಳು ಪ್ರಕರಣ ದಾಖಲಿಸುವಂತೆ ಮಾಡಿದ್ದಾನೆ ಎಂದು ಸಿದ್ಧಿಕಿ ದಾಖಲಿಸಿರುವ ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ.
ಆಲಿಯಾ ಮತ್ತು ಶಂಷುದ್ದೀನ್ ತನಗೆ ₹21 ಕೋಟಿ ವಂಚಿಸಿ ಆಸ್ತಿ ಖರೀದಿಸಿದ್ದಾರೆ ಎಂದು ಸಿದ್ಧಿಕಿ ಆರೋಪಿಸಿದ್ದಾರೆ.
ಅಕ್ರಮ ಆಸ್ತಿಯನ್ನು ತನಗೆ ಹಿಂದಿರುಗಿಸುವಂತೆ ಕೇಳಿದಾಗ, ಇಬ್ಬರೂ ನನ್ನ ವಿರುದ್ಧ ಸಂಚು ರೂಪಿಸಿದ್ದಾರೆ. ನನ್ನ ವಿರುದ್ಧ ಕೀಳುಮಟ್ಟದ ವಿಡಿಯೊ ಮತ್ತು ಹೇಳಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿ ಮಾನ ಕಳೆದಿದ್ದಾರೆ ಎಂದೂ ಸಿದ್ಧಿಕಿ ದೂರಿದ್ದಾರೆ.
ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…
ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…
ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…
ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್ಪೋ…