BREAKING NEWS

100 ಕೋಟಿ ಪರಿಹಾರ ಕೋರಿ ಮಾಜಿ ಪತ್ನಿ, ಸಹೋದರನ ವಿರುದ್ಧ ಸಿದ್ಧಿಕಿ ಮಾನನಷ್ಟ ಕೇಸ್

ಮುಂಬೈ: ಬಾಲಿವುಡ್ ನಟ ನವಾಜುದ್ದೀನ್ ಸಿದ್ಧಿಕಿ 100 ಕೋಟಿ ನಷ್ಟ ಪರಿಹಾರಕ್ಕೆ ಒತ್ತಾಯಿಸಿ ಮಾಜಿ ಪತ್ನಿ ಆಲಿಯಾ ಅಲಿಯಾಸ್ ಜೈನಬ್ ಸಿದ್ಧಿಕಿ ಹಾಗೂ ಸಹೋದರ ಶಂಷುದ್ದೀನ್ ಸಿದ್ಧಿಕಿ ವಿರುದ್ಧ ಬಾಂಬೆ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ತನ್ನ ವಿರುದ್ಧ ಮಾಜಿ ಪತ್ನಿ ಆಲಿಯಾ ಮತ್ತು ಸಹೋದರ ಶಂಷುದ್ದೀನ್ ಮಾನಹಾನಿಕರ ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಸಿದ್ಧಿಕಿ ಆರೋಪಿಸಿದ್ದಾರೆ. ಮಾರ್ಚ್ 30ರಂದು ನ್ಯಾಯಮೂರ್ತಿ ರಿಯಾಜ್ ಚಂಗ್ಲಾ ಅವರ ಏಕಸದಸ್ಯ ಪೀಠದ ಎದುರು ಪ್ರಕರಣ ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಮಾಜಿ ಪತ್ನಿ ಹಾಗೂ ಸಹೋದರ ನನ್ನ ಮಾನಹಾನಿಗೆ ಕಾರಣವಾಗುವ ಯಾವುದೇ ಹೇಳಿಕೆ ನೀಡದಂತೆ ಶಾಶ್ವತವಾಗಿ ತಡೆ ನೀಡುವಂತೆ ಅವರು ಹೈಕೋರ್ಟ್‌ಗೆ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ, ಅವರಿಬ್ಬರಿಂದ ಲಿಖಿತ ಕ್ಷಮಾಪಣಾ ಪತ್ರಕ್ಕೂ ಸಿದ್ಧಿಕಿ ಬೇಡಿಕೆ ಇಟ್ಟಿದ್ದಾರೆ.

2008ರಲ್ಲಿ ಸಹೋದರ ಶಂಷುದ್ದೀನ್‌ನನ್ನು ತನ್ನ ಮ್ಯಾನೇಜರ್ ಆಗಿ ನೇಮಕ ಮಾಡಿಕೊಂಡು ಎಲ್ಲ ಹಣಕಾಸು ವ್ಯವಹಾರಗಳನ್ನು ಒಪ್ಪಿಸಿದ್ದೆ. ಆದರೆ, ಆತ ನನ್ನನ್ನು ವಂಚಿಸಿ ನನ್ನ ಹಣದಲ್ಲಿ ಆಸ್ತಿ ಖರೀದಿ ಮಾಡಿದ್ದಾನೆ. ಈ ಬಗ್ಗೆ ಪ್ರಶ್ನಿಸಿದಾಗ, ನನ್ನ ಮಾಜಿ ಪತ್ನಿಯನ್ನು ಉತ್ತೇಜಿಸಿ ಸುಳ್ಳು ಪ್ರಕರಣ ದಾಖಲಿಸುವಂತೆ ಮಾಡಿದ್ದಾನೆ ಎಂದು ಸಿದ್ಧಿಕಿ ದಾಖಲಿಸಿರುವ ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ.

ಆಲಿಯಾ ಮತ್ತು ಶಂಷುದ್ದೀನ್ ತನಗೆ ₹21 ಕೋಟಿ ವಂಚಿಸಿ ಆಸ್ತಿ ಖರೀದಿಸಿದ್ದಾರೆ ಎಂದು ಸಿದ್ಧಿಕಿ ಆರೋಪಿಸಿದ್ದಾರೆ.

ಅಕ್ರಮ ಆಸ್ತಿಯನ್ನು ತನಗೆ ಹಿಂದಿರುಗಿಸುವಂತೆ ಕೇಳಿದಾಗ, ಇಬ್ಬರೂ ನನ್ನ ವಿರುದ್ಧ ಸಂಚು ರೂಪಿಸಿದ್ದಾರೆ. ನನ್ನ ವಿರುದ್ಧ ಕೀಳುಮಟ್ಟದ ವಿಡಿಯೊ ಮತ್ತು ಹೇಳಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿ ಮಾನ ಕಳೆದಿದ್ದಾರೆ ಎಂದೂ ಸಿದ್ಧಿಕಿ ದೂರಿದ್ದಾರೆ.

andolanait

Recent Posts

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

4 mins ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

16 mins ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

58 mins ago

ಬಡ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್:‌ 39 ಅಗತ್ಯ ಔಷಧಿಗಳ ಬೆಲೆ ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…

1 hour ago

ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಪಂಚಾಯಿತಿ ಚುನಾವಣೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಜ್ಯದ ಬಹುತೇಕ ಪಂಚಾಯ್ತಿಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…

3 hours ago

ಮಡಿಕೇರಿ: ಸ್ಟಾಕ್‌ ಮಾರ್ಕೆಟ್‌ನಲ್ಲಿ ಲಾಸ್:‌ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ. ಕವನ್(‌24) ಆತ್ಮಹತ್ಯೆ ಮಾಡಿಕೊಂಡಿರುವ…

3 hours ago