ಮುಂಬೈ: ಬಾಲಿವುಡ್ ನಟ ನವಾಜುದ್ದೀನ್ ಸಿದ್ಧಿಕಿ 100 ಕೋಟಿ ನಷ್ಟ ಪರಿಹಾರಕ್ಕೆ ಒತ್ತಾಯಿಸಿ ಮಾಜಿ ಪತ್ನಿ ಆಲಿಯಾ ಅಲಿಯಾಸ್ ಜೈನಬ್ ಸಿದ್ಧಿಕಿ ಹಾಗೂ ಸಹೋದರ ಶಂಷುದ್ದೀನ್ ಸಿದ್ಧಿಕಿ ವಿರುದ್ಧ ಬಾಂಬೆ ಹೈಕೋರ್ಟ್ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ತನ್ನ ವಿರುದ್ಧ ಮಾಜಿ ಪತ್ನಿ ಆಲಿಯಾ ಮತ್ತು ಸಹೋದರ ಶಂಷುದ್ದೀನ್ ಮಾನಹಾನಿಕರ ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಸಿದ್ಧಿಕಿ ಆರೋಪಿಸಿದ್ದಾರೆ. ಮಾರ್ಚ್ 30ರಂದು ನ್ಯಾಯಮೂರ್ತಿ ರಿಯಾಜ್ ಚಂಗ್ಲಾ ಅವರ ಏಕಸದಸ್ಯ ಪೀಠದ ಎದುರು ಪ್ರಕರಣ ವಿಚಾರಣೆಗೆ ಬರುವ ಸಾಧ್ಯತೆ ಇದೆ.
ಮಾಜಿ ಪತ್ನಿ ಹಾಗೂ ಸಹೋದರ ನನ್ನ ಮಾನಹಾನಿಗೆ ಕಾರಣವಾಗುವ ಯಾವುದೇ ಹೇಳಿಕೆ ನೀಡದಂತೆ ಶಾಶ್ವತವಾಗಿ ತಡೆ ನೀಡುವಂತೆ ಅವರು ಹೈಕೋರ್ಟ್ಗೆ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ, ಅವರಿಬ್ಬರಿಂದ ಲಿಖಿತ ಕ್ಷಮಾಪಣಾ ಪತ್ರಕ್ಕೂ ಸಿದ್ಧಿಕಿ ಬೇಡಿಕೆ ಇಟ್ಟಿದ್ದಾರೆ.
2008ರಲ್ಲಿ ಸಹೋದರ ಶಂಷುದ್ದೀನ್ನನ್ನು ತನ್ನ ಮ್ಯಾನೇಜರ್ ಆಗಿ ನೇಮಕ ಮಾಡಿಕೊಂಡು ಎಲ್ಲ ಹಣಕಾಸು ವ್ಯವಹಾರಗಳನ್ನು ಒಪ್ಪಿಸಿದ್ದೆ. ಆದರೆ, ಆತ ನನ್ನನ್ನು ವಂಚಿಸಿ ನನ್ನ ಹಣದಲ್ಲಿ ಆಸ್ತಿ ಖರೀದಿ ಮಾಡಿದ್ದಾನೆ. ಈ ಬಗ್ಗೆ ಪ್ರಶ್ನಿಸಿದಾಗ, ನನ್ನ ಮಾಜಿ ಪತ್ನಿಯನ್ನು ಉತ್ತೇಜಿಸಿ ಸುಳ್ಳು ಪ್ರಕರಣ ದಾಖಲಿಸುವಂತೆ ಮಾಡಿದ್ದಾನೆ ಎಂದು ಸಿದ್ಧಿಕಿ ದಾಖಲಿಸಿರುವ ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ.
ಆಲಿಯಾ ಮತ್ತು ಶಂಷುದ್ದೀನ್ ತನಗೆ ₹21 ಕೋಟಿ ವಂಚಿಸಿ ಆಸ್ತಿ ಖರೀದಿಸಿದ್ದಾರೆ ಎಂದು ಸಿದ್ಧಿಕಿ ಆರೋಪಿಸಿದ್ದಾರೆ.
ಅಕ್ರಮ ಆಸ್ತಿಯನ್ನು ತನಗೆ ಹಿಂದಿರುಗಿಸುವಂತೆ ಕೇಳಿದಾಗ, ಇಬ್ಬರೂ ನನ್ನ ವಿರುದ್ಧ ಸಂಚು ರೂಪಿಸಿದ್ದಾರೆ. ನನ್ನ ವಿರುದ್ಧ ಕೀಳುಮಟ್ಟದ ವಿಡಿಯೊ ಮತ್ತು ಹೇಳಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿ ಮಾನ ಕಳೆದಿದ್ದಾರೆ ಎಂದೂ ಸಿದ್ಧಿಕಿ ದೂರಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…