BREAKING NEWS

ಸಿಕ್ಕಿಂ ಪ್ರವಾಹ : 102 ಜನ ನಾಪತ್ತೆ, ಸಾವಿನ ಸಂಖ್ಯೆ 14ಕ್ಕೆ ಏರಿಕೆ

ಗ್ಯಾಂಗ್ಟಾಕ್ : ಸಿಕ್ಕಿಂನಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಇದುವರೆಗೆ 14 ಜನರು ಸಾವನ್ನಪ್ಪಿದ್ದಾರೆ. 102 ಮಂದಿ ನಾಪತ್ತೆಯಾಗಿದ್ದಾರೆ ಎಂದು ಸಿಕ್ಕಿಂ ಸರ್ಕಾರ ತಿಳಿಸಿದೆ. ಮಾತ್ರವಲ್ಲದೇ ರಾಜ್ಯದ ವಿವಿಧ ಭಾಗಗಳಲ್ಲಿ 3,000 ಪ್ರವಾಸಿಗರು ಸಿಲುಕಿರುವ ಆತಂಕ ವ್ಯಕ್ತವಾಗಿದೆ.

ವಾಯುವ್ಯ ಸಿಕ್ಕಿಂನಲ್ಲಿರುವ ಸೌತ್ ಲೊನಾಕ್ ಸರೋವರದಲ್ಲಿ ಬುಧವಾರ ಬೆಳಗ್ಗೆ ಸುರಿದ ನಿರಂತರ ಮಳೆಗೆ ಮೇಘಸ್ಫೋಟ ಉಂಟಾಗಿದೆ. ಇದರಿಂದ ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಯಿತು. ಇದರಿಂದಾಗಿ ಸಿಂಗ್ಟಾಮ್ ಪಟ್ಟಣದ ತೀಸ್ತಾ ನದಿಯ ಇಂದ್ರೇಣಿ ಸೇತುವೆ ಮೂಲಕ ಪ್ರವಾಹ ಸಾಗಿದೆ. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಬಲೂಟಾರ್ ಕುಗ್ರಾಮದ ಮತ್ತೊಂದು ಸಂಪರ್ಕ ಸೇತುವೆ ಕೂಡ ಕೊಚ್ಚಿ ಹೋಗಿದೆ.

ಸಿಕ್ಕಿಂ ಮುಖ್ಯ ಕಾರ್ಯದರ್ಶಿ ವಿಬಿ ಪಾಠಕ್ ಅವರು ಹಂಚಿಕೊಂಡ ಮಾಹಿತಿಯ ಪ್ರಕಾರ, ಲೊನಾಕ್ ಸರೋವರದಲ್ಲಿ ಮಂಗಳವಾರ ರಾತ್ರಿ 10:42 ರ ಸುಮಾರಿಗೆ ಮೇಘಸ್ಫೋಟ ಉಂಟಾಗಿದೆ. ನಂತರ ಸರೋವರ ಅದರ ದಂಡೆಯನ್ನು ಭೇದಿಸಿ ತೀಸ್ತಾ ನದಿಯ ಕಡೆಗೆ ಪ್ರವಾಹ ರೂಪದಲ್ಲಿ ಸಾಗಿದೆ. ಶೀಘ್ರವೇ ತೀಸ್ತಾ ಜಲಾನಯನ ಪ್ರದೇಶದಲ್ಲಿ ನೀರಿನ ಮಟ್ಟ ಏರಿಕೆ ವರದಿಯಾಗಿದೆ. ವಿಶೇಷವಾಗಿ ಚುಂಗ್‌ಥಾಂಗ್‌ನಲ್ಲಿ ತೀಸ್ತಾ ಸ್ಟೇಜ್ 3 ಅಣೆಕಟ್ಟು ಒಡೆದು ಆತಂಕ ಸೃಷ್ಟಿಯಾಗಿದೆ ಎಂದು ಹೇಳಿದ್ದಾರೆ.

ಚುಂಗ್‌ಥಾಂಗ್‌ನ ತೀಸ್ತಾ ಸ್ಟೇಜ್ 3 ಅಣೆಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದ 12-14 ಕಾರ್ಮಿಕರು ಇನ್ನೂ ಅಲ್ಲಿನ ಸುರಂಗಗಳಲ್ಲಿ ಸಿಲುಕಿಕೊಂಡಿದ್ದಾರೆ. ಮಂಗನ್ ಜಿಲ್ಲೆಯ ಚುಂಗ್ತಾಂಗ್ ಮತ್ತು ಗ್ಯಾಂಗ್ಟಾಕ್ ಜಿಲ್ಲೆಯ ಡಿಕ್ಚು, ಸಿಂಗ್ಟಾಮ್ ಮತ್ತು ಪಾಕ್ಯೊಂಗ್ ಜಿಲ್ಲೆಯ ರಂಗ್ಪೋದಿಂದ ಹಲವರು ನಾಪತ್ತೆಯಾಗಿದ್ದಾರೆ ಹಾಗೂ ಹೆಚ್ಚಿನವರಿಗೆ ಗಾಯಗಳಾಗಿವೆ.

ಒಟ್ಟಾರೆಯಾಗಿ ರಾಜ್ಯದಾದ್ಯಂತ 26 ಜನರು ಗಾಯಗೊಂಡಿದ್ದಾರೆ. ಅವರೆಲ್ಲರನ್ನು ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಬರ್ದಂಗ್‌ನಲ್ಲಿ 23 ಸೇನಾ ಸಿಬ್ಬಂದಿ ಇನ್ನೂ ನಾಪತ್ತೆಯಾಗಿದ್ದಾರೆ. ಅವರು ಬೆಂಗಾವಲು ವಾಹನ ಪ್ರವಾಹದ ಕೆಸರಿನಲ್ಲಿ ಮುಳುಗಿದೆ. ರಾಜ್ಯ ಸರ್ಕಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 3 ಹೆಚ್ಚುವರಿ ತುಕಡಿಗಳನ್ನು ಕೇಳಿದೆ. ಇದನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ. ಎನ್‌ಡಿಆರ್‌ಎಫ್‌ನ ಒಂದು ತುಕಡಿ ಈಗಾಗಲೇ ರಂಗ್ಪೋ ಮತ್ತು ಸಿಂಗ್ಟಮ್ ಪಟ್ಟಣಗಳಲ್ಲಿ ಕಾರ್ಯನಿರ್ವಹಿಸುತ್ತಿದೆ.

lokesh

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

10 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

11 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

12 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

12 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

13 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

15 hours ago