BREAKING NEWS

ಸಿಕ್ಕಿಂ ಪ್ರವಾಹ : ಸಾವಿನ ಸಂಖ್ಯೆ 53ಕ್ಕೆ ಏರಿಕೆ

ನವದೆಹಲಿ : ಸಿಕ್ಕಿಂ ಹಠಾತ್ ಪ್ರವಾಹದಿಂದ ಸಾವಿಗೀಡಾದವರ ಸಂಖ್ಯೆ 53ಕ್ಕೆ ಏರಿಕೆಯಾಗಿದೆ. ಮೃತರಲ್ಲಿ ಏಳು ಸೈನಿಕರು ಹಾಗೂ ಸ್ಥಳೀಯರು ಸೇರಿದ್ದಾರೆ. ಅಲ್ಲದೇ 140 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನೆರೆಯ ರಾಜ್ಯ ಪಶ್ಚಿಮ ಬಂಗಾಳದ ತೀಸ್ತಾ ನದಿ ಪಾತ್ರದಲ್ಲಿ 27 ಮೃತದೇಹಗಳು ಪತ್ತೆಯಾಗಿವೆ. ಈ ಪೈಕಿ ಏಳು ಮೃತದೇಹಗಳನ್ನು ಗುರುತಿಸಲಾಗಿದೆ. ಪ್ರವಾಹದ ಬಳಿಕ ಸಾವಿರಾರು ಜನರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಗಿದೆ. ಒಟ್ಟಾರೆ 1,173 ಮನೆಗಳಿಗೆ ತೀವ್ರ ಹಾನಿಯಾಗಿದೆ ಮತ್ತು 2,413 ಜನರನ್ನು ಇಲ್ಲಿಯವರೆಗೂ ರಕ್ಷಿಸಲಾಗಿದೆ. 25,000 ಜನರಿಗೆ ಪ್ರವಾಹದಿಂದ ತೊಂದರೆಯಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.

ಪ್ರವಾಹದಿಂದ ಹಾನಿಗೊಳಗಾದ ರಸ್ತೆಗಳ ನಿರ್ಮಾಣವನ್ನು ಆದಷ್ಟು ಬೇಗ ಮಾಡಲಾಗುತ್ತದೆ. ಮೃತರ ಕುಟುಂಬಗಳಿಗೆ 4 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಅಧಿಕಾರಿಗಳು ಹಗಲೂ ರಾತ್ರಿ ಜನರ ರಕ್ಷಣೆಗಾಗಿ ಶ್ರಮಿಸುತ್ತಿದ್ದಾರೆ. ಕೇಂದ್ರ ಸರ್ಕಾರಕ್ಕೆ 44 ಕೋಟಿ ರೂ. ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ ಎಂದು ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ತಿಳಿಸಿದ್ದಾರೆ.

ಭಾರತ ಹವಾಮಾನ ಇಲಾಖೆ ಮುಂದಿನ ಐದು ದಿನಗಳಲ್ಲಿ ಮತ್ತೆ ಮಳೆಯಾಗುವ ಸೂಚನೆ ನೀಡಿದೆ. ಅಲ್ಲದೇ ಈಗ ಇರುವ ಹವಾಮಾನ ಪರಿಸ್ಥಿತಿಯಲ್ಲಿ ಹೆಲಿಕಾಪ್ಟರ್ ಬಳಕೆ ಹಾಗೂ ವಿಮಾನಯಾನಕ್ಕೂ ತೊಡಕಾಗುತ್ತಿದೆ. ಸೇತುವೆಗಳ ಹಾನಿಯಿಂದ ರಕ್ಷಣಾ ಕಾರ್ಯದಲ್ಲೂ ವಿಳಂಬವಾಗುತ್ತಿದೆ. ಮತ್ತೆ ಇಂದು ರಕ್ಷಣಾ ಕಾರ್ಯಾಚರಣೆ ಆರಂಭಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇಘಸ್ಫೋಟದಿಂದ ಉಂಟಾದ ಭಾರೀ ಮಳೆಯಿಂದ ಮೊದಲು ಗ್ಲೇಶಿಯಲ್ ಸರೋವರ ಉಕ್ಕಿ ಹಠಾತ್ ಪ್ರವಾಹವನ್ನು ಉಂಟುಮಾಡಿತು. ಬಳಿಕ ಚುಂಗ್ಥಾಂಗ್ ಅಣೆಕಟ್ಟಿನಿಂದ ನೀರನ್ನು ಬಿಡುಗಡೆಗೆ ಮಾಡಲಾಯಿತು. ಇದು ತೀಸ್ತಾ ನದಿಯ ನೀರಿನ ಮಟ್ಟವನ್ನು ತೀವ್ರವಾಗಿ ಹೆಚ್ಚಿಸಿತು. ಇದರಿಂದ ಪ್ರವಾಹ ತೀವ್ರ ಸ್ವರೂಪ ಪಡೆಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

lokesh

Recent Posts

ಸೋಮವಾರಪೇಟೆಯಲ್ಲಿ ಗ್ಯಾಸ್ ಸೋರಿಕೆಗೆ ಯುವತಿ ಸಾವು

ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್‌ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…

8 hours ago

ರಾಜ್ಯದಲ್ಲಿ ಎಂಟು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…

9 hours ago

ಚಿರತೆ ದಾಳಿಗೆ ನಾಯಿ ಸಾವು: ಗ್ರಾಮಸ್ಥರಲ್ಲಿ ಭೀತಿ

ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…

9 hours ago

ಎಲ್‌ಪಿಜಿ ದರ ಭಾರತದಲ್ಲೇ ಅಗ್ಗ: ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಸಮರ್ಥನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್…

10 hours ago

ಬಾವಿಗೆ ಬಿದ್ದಿದ್ದ ಹಸು ರಕ್ಷಣೆ

ಮಹಾದೇಶ್‌ ಎಂ ಗೌಡ:  ಹನೂರು ತಾಲ್ಲೂಕು ವರದಿಗಾರರು  ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…

11 hours ago

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

11 hours ago