BREAKING NEWS

ಸಿಕ್ಕಿಂ ಪ್ರವಾಹ : ಸಾವಿನ ಸಂಖ್ಯೆ 53ಕ್ಕೆ ಏರಿಕೆ

ನವದೆಹಲಿ : ಸಿಕ್ಕಿಂ ಹಠಾತ್ ಪ್ರವಾಹದಿಂದ ಸಾವಿಗೀಡಾದವರ ಸಂಖ್ಯೆ 53ಕ್ಕೆ ಏರಿಕೆಯಾಗಿದೆ. ಮೃತರಲ್ಲಿ ಏಳು ಸೈನಿಕರು ಹಾಗೂ ಸ್ಥಳೀಯರು ಸೇರಿದ್ದಾರೆ. ಅಲ್ಲದೇ 140 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನೆರೆಯ ರಾಜ್ಯ ಪಶ್ಚಿಮ ಬಂಗಾಳದ ತೀಸ್ತಾ ನದಿ ಪಾತ್ರದಲ್ಲಿ 27 ಮೃತದೇಹಗಳು ಪತ್ತೆಯಾಗಿವೆ. ಈ ಪೈಕಿ ಏಳು ಮೃತದೇಹಗಳನ್ನು ಗುರುತಿಸಲಾಗಿದೆ. ಪ್ರವಾಹದ ಬಳಿಕ ಸಾವಿರಾರು ಜನರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಗಿದೆ. ಒಟ್ಟಾರೆ 1,173 ಮನೆಗಳಿಗೆ ತೀವ್ರ ಹಾನಿಯಾಗಿದೆ ಮತ್ತು 2,413 ಜನರನ್ನು ಇಲ್ಲಿಯವರೆಗೂ ರಕ್ಷಿಸಲಾಗಿದೆ. 25,000 ಜನರಿಗೆ ಪ್ರವಾಹದಿಂದ ತೊಂದರೆಯಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.

ಪ್ರವಾಹದಿಂದ ಹಾನಿಗೊಳಗಾದ ರಸ್ತೆಗಳ ನಿರ್ಮಾಣವನ್ನು ಆದಷ್ಟು ಬೇಗ ಮಾಡಲಾಗುತ್ತದೆ. ಮೃತರ ಕುಟುಂಬಗಳಿಗೆ 4 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಅಧಿಕಾರಿಗಳು ಹಗಲೂ ರಾತ್ರಿ ಜನರ ರಕ್ಷಣೆಗಾಗಿ ಶ್ರಮಿಸುತ್ತಿದ್ದಾರೆ. ಕೇಂದ್ರ ಸರ್ಕಾರಕ್ಕೆ 44 ಕೋಟಿ ರೂ. ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ ಎಂದು ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ತಿಳಿಸಿದ್ದಾರೆ.

ಭಾರತ ಹವಾಮಾನ ಇಲಾಖೆ ಮುಂದಿನ ಐದು ದಿನಗಳಲ್ಲಿ ಮತ್ತೆ ಮಳೆಯಾಗುವ ಸೂಚನೆ ನೀಡಿದೆ. ಅಲ್ಲದೇ ಈಗ ಇರುವ ಹವಾಮಾನ ಪರಿಸ್ಥಿತಿಯಲ್ಲಿ ಹೆಲಿಕಾಪ್ಟರ್ ಬಳಕೆ ಹಾಗೂ ವಿಮಾನಯಾನಕ್ಕೂ ತೊಡಕಾಗುತ್ತಿದೆ. ಸೇತುವೆಗಳ ಹಾನಿಯಿಂದ ರಕ್ಷಣಾ ಕಾರ್ಯದಲ್ಲೂ ವಿಳಂಬವಾಗುತ್ತಿದೆ. ಮತ್ತೆ ಇಂದು ರಕ್ಷಣಾ ಕಾರ್ಯಾಚರಣೆ ಆರಂಭಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇಘಸ್ಫೋಟದಿಂದ ಉಂಟಾದ ಭಾರೀ ಮಳೆಯಿಂದ ಮೊದಲು ಗ್ಲೇಶಿಯಲ್ ಸರೋವರ ಉಕ್ಕಿ ಹಠಾತ್ ಪ್ರವಾಹವನ್ನು ಉಂಟುಮಾಡಿತು. ಬಳಿಕ ಚುಂಗ್ಥಾಂಗ್ ಅಣೆಕಟ್ಟಿನಿಂದ ನೀರನ್ನು ಬಿಡುಗಡೆಗೆ ಮಾಡಲಾಯಿತು. ಇದು ತೀಸ್ತಾ ನದಿಯ ನೀರಿನ ಮಟ್ಟವನ್ನು ತೀವ್ರವಾಗಿ ಹೆಚ್ಚಿಸಿತು. ಇದರಿಂದ ಪ್ರವಾಹ ತೀವ್ರ ಸ್ವರೂಪ ಪಡೆಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

11 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

12 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

15 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

16 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

16 hours ago