BREAKING NEWS

ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು: ಸಿಎಂ ಸಿದ್ದರಾಮಯ್ಯ ಕರೆ

ಚಾಮರಾಜನಗರ : ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಬಿಟ್ಟು ಸಾಲ ಮಾಡಿ ವ್ಯವಸಾಯ ಮಾಡಿ ಜೀವನ ರೂಪಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಕರೆ ನೀಡಿದ್ದಾರೆ.

ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೇವಸ್ಥಾನದ ರಂಗಮಂದಿರದ ಆವರಣದಲ್ಲಿ ಆಯೋಜಿಸಿದ್ದ ಸಾಮೂಹಿಕ ಸರಳ ವಿವಾಹದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಅದ್ದೂರಿ ಮದುವೆಗಳು ಬಹಳ ದೊಡ್ಡ ಹೊರೆಯಾಗುತ್ತವೆ. ಜೀವನ ಪರ್ಯಂತ ಸಾಲ ತೀರಿಸುತ್ತಾ ಕೂರಬೇಕಾಗುತ್ತದೆ. ಆದ್ದರಿಂದ ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು ಎಂದರು.

ಮಹದೇಶ್ವರನ ಬೆಟ್ಟ ಅಧ್ಯಾತ್ಮಿಕ ಮಹತ್ವ ಇರುವ ಪುಣ್ಯ ಸ್ಥಳ. ಶೂದ್ರರು, ಶ್ರಮಿಕರು, ಬಡವರು, ಎಲ್ಲಾ ಜಾತಿಯವರ ಅಧ್ಯಾತ್ಮಿಕ ಕೇಂದ್ರವಾಗಿದೆ. ಈ ಕಾರಣಕ್ಕೇ ನನಗೆ ಈ ಕ್ಷೇತ್ರದ ಬಗ್ಗೆ ಅತ್ಯಂತ ಶ್ರದ್ದೆ ಮತ್ತು ಗೌರವ ಇದೆ. ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ. ಈಗ ಪ್ರಾಧಿಕಾರದ ಆದಾಯವೂ ಹೆಚ್ಚಾಗಿದೆ. ಶಕ್ತಿ ಯೋಜನೆಯ ಪರಿಣಾಮ ಭಕ್ತರು, ಅದರಲ್ಲೂ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮಲೆ ಮಹದೇಶ್ವರನ ದರ್ಶನ ಪಡೆಯುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಇಲ್ಲಿ ಕುಡಿಯುವ ನೀರು ಮತ್ತು ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಿ ಎಂದು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಷ್ಟ್ರಪತಿ ಭವನ ಹೆಸರು ಇನ್ನು ತಪೋಭವನ:  ಮಲೆ ಮಹದೇಶ್ವರ ಬೆಟ್ಟದಲ್ಲಿರುವ ರಾಷ್ಟ್ರಪತಿ ಭವನದ ಹೆಸರು ಬದಲಾಗಿದೆ. ಇನ್ನು ಮುಂದೆ ಇದು ತಪೋಭವನ. ಮಾದೇಶ್ವರ ತಪಸ್ಸು ಮಾಡಿದ ಶಕ್ತಿ ಕೇಂದ್ರ ಇದು. ಆದ್ದರಿಂದ ಇದನ್ನು ನಾವು ತಪೋಭವನ ಎಂದು ಕರೆಯಬೇಕು.ಶಿವರಾತ್ರಿ ದೇಶೀಕೇಂದ್ರ ಮಹಾ ಸ್ವಾಮಿಗಳ ಸಲಹೆಯಂತೆ ತಪೋಭವನ ಎಂದು ಬದಲಾಯಿಸಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಮೌಢ್ಯ ತೊಡೆದಿದ್ದೇನೆ: ಚಾಮರಾಜನಗರ ಜಿಲ್ಲೆಗೆ ಅಂಟಿದ್ದ ಮೌಡ್ಯ ತೊಡೆದು ಹಾಕಿರುವೆ, ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದಾಗ 12 ಬಾರಿ ಭೇಟಿ ನೀಡಿ 5 ವರ್ಷ ಗಟ್ಟಿಯಾಗಿ ಆಡಳಿತ ನಡೆಸಿದ್ದೆ. ಈಗ ಮತ್ತೆ ಬಂದಿದ್ದೇನೆ ಎಂದರು.

ಎರಡನೇ ಬಾರಿ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ ಅವರು ಇಂದು ಬುಧವಾರ ಬೆಳಗ್ಗೆ ಮಲೆ ಮಹದೇಶ್ವರನ ದರ್ಶನ ಪಡೆದರು. ಈ ವೇಳೆ ರಾಜ್ಯದ ಸಂಕಷ್ಟದ ಪರಿಸ್ಥಿತಿ ನಿವಾರಣೆ ಆಗಲಿ, ಉತ್ತಮ ಮಳೆ ಆಗಲಿ, ರೈತರಿಗೆ ಒಳ್ಳೆಯದಾಗಲಿ ಎಂದು ಮಹದೇಶ್ವರನನ್ನು ಪ್ರಾರ್ಥಿಸಿದ್ದೇನೆ ಎಂದು ಹೇಳಿದರು.

andolanait

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

10 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

10 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

11 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

11 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

11 hours ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

11 hours ago