BREAKING NEWS

ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು: ಸಿಎಂ ಸಿದ್ದರಾಮಯ್ಯ ಕರೆ

ಚಾಮರಾಜನಗರ : ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಬಿಟ್ಟು ಸಾಲ ಮಾಡಿ ವ್ಯವಸಾಯ ಮಾಡಿ ಜೀವನ ರೂಪಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಕರೆ ನೀಡಿದ್ದಾರೆ.

ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೇವಸ್ಥಾನದ ರಂಗಮಂದಿರದ ಆವರಣದಲ್ಲಿ ಆಯೋಜಿಸಿದ್ದ ಸಾಮೂಹಿಕ ಸರಳ ವಿವಾಹದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಅದ್ದೂರಿ ಮದುವೆಗಳು ಬಹಳ ದೊಡ್ಡ ಹೊರೆಯಾಗುತ್ತವೆ. ಜೀವನ ಪರ್ಯಂತ ಸಾಲ ತೀರಿಸುತ್ತಾ ಕೂರಬೇಕಾಗುತ್ತದೆ. ಆದ್ದರಿಂದ ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು ಎಂದರು.

ಮಹದೇಶ್ವರನ ಬೆಟ್ಟ ಅಧ್ಯಾತ್ಮಿಕ ಮಹತ್ವ ಇರುವ ಪುಣ್ಯ ಸ್ಥಳ. ಶೂದ್ರರು, ಶ್ರಮಿಕರು, ಬಡವರು, ಎಲ್ಲಾ ಜಾತಿಯವರ ಅಧ್ಯಾತ್ಮಿಕ ಕೇಂದ್ರವಾಗಿದೆ. ಈ ಕಾರಣಕ್ಕೇ ನನಗೆ ಈ ಕ್ಷೇತ್ರದ ಬಗ್ಗೆ ಅತ್ಯಂತ ಶ್ರದ್ದೆ ಮತ್ತು ಗೌರವ ಇದೆ. ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ. ಈಗ ಪ್ರಾಧಿಕಾರದ ಆದಾಯವೂ ಹೆಚ್ಚಾಗಿದೆ. ಶಕ್ತಿ ಯೋಜನೆಯ ಪರಿಣಾಮ ಭಕ್ತರು, ಅದರಲ್ಲೂ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮಲೆ ಮಹದೇಶ್ವರನ ದರ್ಶನ ಪಡೆಯುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಇಲ್ಲಿ ಕುಡಿಯುವ ನೀರು ಮತ್ತು ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಿ ಎಂದು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಷ್ಟ್ರಪತಿ ಭವನ ಹೆಸರು ಇನ್ನು ತಪೋಭವನ:  ಮಲೆ ಮಹದೇಶ್ವರ ಬೆಟ್ಟದಲ್ಲಿರುವ ರಾಷ್ಟ್ರಪತಿ ಭವನದ ಹೆಸರು ಬದಲಾಗಿದೆ. ಇನ್ನು ಮುಂದೆ ಇದು ತಪೋಭವನ. ಮಾದೇಶ್ವರ ತಪಸ್ಸು ಮಾಡಿದ ಶಕ್ತಿ ಕೇಂದ್ರ ಇದು. ಆದ್ದರಿಂದ ಇದನ್ನು ನಾವು ತಪೋಭವನ ಎಂದು ಕರೆಯಬೇಕು.ಶಿವರಾತ್ರಿ ದೇಶೀಕೇಂದ್ರ ಮಹಾ ಸ್ವಾಮಿಗಳ ಸಲಹೆಯಂತೆ ತಪೋಭವನ ಎಂದು ಬದಲಾಯಿಸಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಮೌಢ್ಯ ತೊಡೆದಿದ್ದೇನೆ: ಚಾಮರಾಜನಗರ ಜಿಲ್ಲೆಗೆ ಅಂಟಿದ್ದ ಮೌಡ್ಯ ತೊಡೆದು ಹಾಕಿರುವೆ, ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದಾಗ 12 ಬಾರಿ ಭೇಟಿ ನೀಡಿ 5 ವರ್ಷ ಗಟ್ಟಿಯಾಗಿ ಆಡಳಿತ ನಡೆಸಿದ್ದೆ. ಈಗ ಮತ್ತೆ ಬಂದಿದ್ದೇನೆ ಎಂದರು.

ಎರಡನೇ ಬಾರಿ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ ಅವರು ಇಂದು ಬುಧವಾರ ಬೆಳಗ್ಗೆ ಮಲೆ ಮಹದೇಶ್ವರನ ದರ್ಶನ ಪಡೆದರು. ಈ ವೇಳೆ ರಾಜ್ಯದ ಸಂಕಷ್ಟದ ಪರಿಸ್ಥಿತಿ ನಿವಾರಣೆ ಆಗಲಿ, ಉತ್ತಮ ಮಳೆ ಆಗಲಿ, ರೈತರಿಗೆ ಒಳ್ಳೆಯದಾಗಲಿ ಎಂದು ಮಹದೇಶ್ವರನನ್ನು ಪ್ರಾರ್ಥಿಸಿದ್ದೇನೆ ಎಂದು ಹೇಳಿದರು.

andolanait

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

1 hour ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

2 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

3 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

4 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

4 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

11 hours ago