BREAKING NEWS

ಏಕಕಾಲಿಕ ಚುನಾವಣೆಗಳು 2029ರಲ್ಲಷ್ಟೇ ಸಾಧ್ಯ: ಕಾನೂನು ಆಯೋಗ

ನವದೆಹಲಿ : ಸಂವಿಧಾನಕ್ಕೆ ಅಗತ್ಯ ಸಂಭಾವ್ಯ ಬದಲಾವಣೆಗಳು ಸೇರಿದಂತೆ ಮಾರ್ಗಸೂಚಿಯೊಂದನ್ನು ಕಾನೂನು ಆಯೋಗವು ಏಕಕಾಲಿಕ ಚುನಾವಣೆಗಳ ಪ್ರಸ್ತಾವವನ್ನು ಪರಿಶೀಲಿಸುತ್ತಿರುವ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿಗೆ ಸಲ್ಲಿಸಿದೆ.

ಆಯಾ ರಾಜ್ಯ ವಿಧಾನಸಭೆಗಳ ಅಧಿಕಾರಾವಧಿಯನ್ನು ವಿಸ್ತರಿಸುವ ಅಥವಾ ಕಡಿತಗೊಳಿಸುವ ಮೂಲಕ ಎಲ್ಲ ವಿಧಾನಸಭಾ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ತಾನು ಸೂತ್ರವೊಂದನ್ನು ರೂಪಿಸಬೇಕಿದೆ ಮತ್ತು ಇದಕ್ಕೆ ಸಮಯಾವಕಾಶ ಅಗತ್ಯವಿದೆ, ಹೀಗಾಗಿ ಏಕಕಾಲಿಕ ಚುನಾವಣೆಗಳ ಪ್ರಸ್ತಾವವು 2029ರ ವೇಳೆಗಷ್ಟೇ ಕಾರ್ಯರೂಪಕ್ಕೆ ಬರಲು ಸಾಧ್ಯ ಎಂದು ಆಯೋಗವು ಹೇಳಿದೆ. ಈ ಸಂಬಂಧ ಕಾನೂನು ಆಯೋಗದಿಂದ ವರದಿ ಇನ್ನೂ ಬಾಕಿಯುಳಿದಿದ್ದು, ಕೋವಿಂದ್ ಸಮಿತಿಯೊಂದಿಗೆ ಇನ್ನೊಂದು ಸುತ್ತಿನ ಚರ್ಚೆಗಾಗಿ ಅದನ್ನು ಆಹ್ವಾನಿಸಲಾಗುವುದು.

ಕಾನೂನು ಆಯೋಗವು ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಪ್ರಸ್ತಾವವನ್ನು ಪರಿಶೀಲಿಸುತ್ತಿದ್ದರೆ ಕೋವಿಂದ್ ಸಮಿತಿಯು ವಿಧಾನಸಭೆ, ಸಂಸತ್, ನಗರಸಭೆ ಮತ್ತು ಪಂಚಾಯತ್ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಮಾರ್ಗಗಳನ್ನು ಅನ್ವೇಷಿಸುತ್ತಿದೆ.

ಕೋವಿಂದ್ ಸಮಿತಿಗೆ ‘ಒಂದು ರಾಷ್ಟ್ರ ಒಂದು ಚುನಾವಣೆ ಕುರಿತು ಉನ್ನತ ಮಟ್ಟದ ಸಮಿತಿ (ಎಚ್‌ಎಲ್‌ಸಿ)’ ಎಂದು ಅಧಿಕೃತವಾಗಿ ಮರುನಾಮಕರಣ ಮಾಡಲಾಗಿದೆ ಎಂದು ಕಾನೂನು ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ.

ಏಕಕಾಲಿಕ ಚುನಾವಣೆಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸುವಂತೆ ಕೋರಿ ಎಚ್‌ಎಲ್‌ಸಿ ಈಗಾಗಲೇ ದೇಶಾದ್ಯಂತದ ರಾಜಕೀಯ ಪಕ್ಷಗಳಿಗೆ ಪತ್ರಗಳನ್ನು ಬರೆದಿದೆ.

ಬುಧವಾರ ಸಭೆ ನಡೆಸಿದ ಎಚ್‌ಎಲ್‌ಸಿಯು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧಿರ್ ರಂಜನ ಚೌಧುರಿ ಅವರು ಸಮಿತಿಯ ಸದಸ್ಯತ್ವಕ್ಕೆ ಸಲ್ಲಿಸಿರುವ ರಾಜೀನಾಮೆಯನ್ನು ಗಮನಕ್ಕೆ ತೆಗೆದುಕೊಂಡಿದೆ.

andolanait

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

4 hours ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

8 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

8 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

8 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

9 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

9 hours ago