ನವದೆಹಲಿ : ಸಂವಿಧಾನಕ್ಕೆ ಅಗತ್ಯ ಸಂಭಾವ್ಯ ಬದಲಾವಣೆಗಳು ಸೇರಿದಂತೆ ಮಾರ್ಗಸೂಚಿಯೊಂದನ್ನು ಕಾನೂನು ಆಯೋಗವು ಏಕಕಾಲಿಕ ಚುನಾವಣೆಗಳ ಪ್ರಸ್ತಾವವನ್ನು ಪರಿಶೀಲಿಸುತ್ತಿರುವ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿಗೆ ಸಲ್ಲಿಸಿದೆ.
ಆಯಾ ರಾಜ್ಯ ವಿಧಾನಸಭೆಗಳ ಅಧಿಕಾರಾವಧಿಯನ್ನು ವಿಸ್ತರಿಸುವ ಅಥವಾ ಕಡಿತಗೊಳಿಸುವ ಮೂಲಕ ಎಲ್ಲ ವಿಧಾನಸಭಾ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ತಾನು ಸೂತ್ರವೊಂದನ್ನು ರೂಪಿಸಬೇಕಿದೆ ಮತ್ತು ಇದಕ್ಕೆ ಸಮಯಾವಕಾಶ ಅಗತ್ಯವಿದೆ, ಹೀಗಾಗಿ ಏಕಕಾಲಿಕ ಚುನಾವಣೆಗಳ ಪ್ರಸ್ತಾವವು 2029ರ ವೇಳೆಗಷ್ಟೇ ಕಾರ್ಯರೂಪಕ್ಕೆ ಬರಲು ಸಾಧ್ಯ ಎಂದು ಆಯೋಗವು ಹೇಳಿದೆ. ಈ ಸಂಬಂಧ ಕಾನೂನು ಆಯೋಗದಿಂದ ವರದಿ ಇನ್ನೂ ಬಾಕಿಯುಳಿದಿದ್ದು, ಕೋವಿಂದ್ ಸಮಿತಿಯೊಂದಿಗೆ ಇನ್ನೊಂದು ಸುತ್ತಿನ ಚರ್ಚೆಗಾಗಿ ಅದನ್ನು ಆಹ್ವಾನಿಸಲಾಗುವುದು.
ಕಾನೂನು ಆಯೋಗವು ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಪ್ರಸ್ತಾವವನ್ನು ಪರಿಶೀಲಿಸುತ್ತಿದ್ದರೆ ಕೋವಿಂದ್ ಸಮಿತಿಯು ವಿಧಾನಸಭೆ, ಸಂಸತ್, ನಗರಸಭೆ ಮತ್ತು ಪಂಚಾಯತ್ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಮಾರ್ಗಗಳನ್ನು ಅನ್ವೇಷಿಸುತ್ತಿದೆ.
ಕೋವಿಂದ್ ಸಮಿತಿಗೆ ‘ಒಂದು ರಾಷ್ಟ್ರ ಒಂದು ಚುನಾವಣೆ ಕುರಿತು ಉನ್ನತ ಮಟ್ಟದ ಸಮಿತಿ (ಎಚ್ಎಲ್ಸಿ)’ ಎಂದು ಅಧಿಕೃತವಾಗಿ ಮರುನಾಮಕರಣ ಮಾಡಲಾಗಿದೆ ಎಂದು ಕಾನೂನು ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ.
ಏಕಕಾಲಿಕ ಚುನಾವಣೆಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸುವಂತೆ ಕೋರಿ ಎಚ್ಎಲ್ಸಿ ಈಗಾಗಲೇ ದೇಶಾದ್ಯಂತದ ರಾಜಕೀಯ ಪಕ್ಷಗಳಿಗೆ ಪತ್ರಗಳನ್ನು ಬರೆದಿದೆ.
ಬುಧವಾರ ಸಭೆ ನಡೆಸಿದ ಎಚ್ಎಲ್ಸಿಯು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧಿರ್ ರಂಜನ ಚೌಧುರಿ ಅವರು ಸಮಿತಿಯ ಸದಸ್ಯತ್ವಕ್ಕೆ ಸಲ್ಲಿಸಿರುವ ರಾಜೀನಾಮೆಯನ್ನು ಗಮನಕ್ಕೆ ತೆಗೆದುಕೊಂಡಿದೆ.
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…