BREAKING NEWS

ಏಕಕಾಲಿಕ ಚುನಾವಣೆಗಳು 2029ರಲ್ಲಷ್ಟೇ ಸಾಧ್ಯ: ಕಾನೂನು ಆಯೋಗ

ನವದೆಹಲಿ : ಸಂವಿಧಾನಕ್ಕೆ ಅಗತ್ಯ ಸಂಭಾವ್ಯ ಬದಲಾವಣೆಗಳು ಸೇರಿದಂತೆ ಮಾರ್ಗಸೂಚಿಯೊಂದನ್ನು ಕಾನೂನು ಆಯೋಗವು ಏಕಕಾಲಿಕ ಚುನಾವಣೆಗಳ ಪ್ರಸ್ತಾವವನ್ನು ಪರಿಶೀಲಿಸುತ್ತಿರುವ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿಗೆ ಸಲ್ಲಿಸಿದೆ.

ಆಯಾ ರಾಜ್ಯ ವಿಧಾನಸಭೆಗಳ ಅಧಿಕಾರಾವಧಿಯನ್ನು ವಿಸ್ತರಿಸುವ ಅಥವಾ ಕಡಿತಗೊಳಿಸುವ ಮೂಲಕ ಎಲ್ಲ ವಿಧಾನಸಭಾ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ತಾನು ಸೂತ್ರವೊಂದನ್ನು ರೂಪಿಸಬೇಕಿದೆ ಮತ್ತು ಇದಕ್ಕೆ ಸಮಯಾವಕಾಶ ಅಗತ್ಯವಿದೆ, ಹೀಗಾಗಿ ಏಕಕಾಲಿಕ ಚುನಾವಣೆಗಳ ಪ್ರಸ್ತಾವವು 2029ರ ವೇಳೆಗಷ್ಟೇ ಕಾರ್ಯರೂಪಕ್ಕೆ ಬರಲು ಸಾಧ್ಯ ಎಂದು ಆಯೋಗವು ಹೇಳಿದೆ. ಈ ಸಂಬಂಧ ಕಾನೂನು ಆಯೋಗದಿಂದ ವರದಿ ಇನ್ನೂ ಬಾಕಿಯುಳಿದಿದ್ದು, ಕೋವಿಂದ್ ಸಮಿತಿಯೊಂದಿಗೆ ಇನ್ನೊಂದು ಸುತ್ತಿನ ಚರ್ಚೆಗಾಗಿ ಅದನ್ನು ಆಹ್ವಾನಿಸಲಾಗುವುದು.

ಕಾನೂನು ಆಯೋಗವು ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಪ್ರಸ್ತಾವವನ್ನು ಪರಿಶೀಲಿಸುತ್ತಿದ್ದರೆ ಕೋವಿಂದ್ ಸಮಿತಿಯು ವಿಧಾನಸಭೆ, ಸಂಸತ್, ನಗರಸಭೆ ಮತ್ತು ಪಂಚಾಯತ್ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಮಾರ್ಗಗಳನ್ನು ಅನ್ವೇಷಿಸುತ್ತಿದೆ.

ಕೋವಿಂದ್ ಸಮಿತಿಗೆ ‘ಒಂದು ರಾಷ್ಟ್ರ ಒಂದು ಚುನಾವಣೆ ಕುರಿತು ಉನ್ನತ ಮಟ್ಟದ ಸಮಿತಿ (ಎಚ್‌ಎಲ್‌ಸಿ)’ ಎಂದು ಅಧಿಕೃತವಾಗಿ ಮರುನಾಮಕರಣ ಮಾಡಲಾಗಿದೆ ಎಂದು ಕಾನೂನು ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ.

ಏಕಕಾಲಿಕ ಚುನಾವಣೆಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸುವಂತೆ ಕೋರಿ ಎಚ್‌ಎಲ್‌ಸಿ ಈಗಾಗಲೇ ದೇಶಾದ್ಯಂತದ ರಾಜಕೀಯ ಪಕ್ಷಗಳಿಗೆ ಪತ್ರಗಳನ್ನು ಬರೆದಿದೆ.

ಬುಧವಾರ ಸಭೆ ನಡೆಸಿದ ಎಚ್‌ಎಲ್‌ಸಿಯು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧಿರ್ ರಂಜನ ಚೌಧುರಿ ಅವರು ಸಮಿತಿಯ ಸದಸ್ಯತ್ವಕ್ಕೆ ಸಲ್ಲಿಸಿರುವ ರಾಜೀನಾಮೆಯನ್ನು ಗಮನಕ್ಕೆ ತೆಗೆದುಕೊಂಡಿದೆ.

andolanait

Recent Posts

ಒಳಮೀಸಲಾತಿ: ಕರ್ನಾಟಕ ಮಾಡೆಲ್

ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಸೂತ್ರವನ್ನು ಹೆಣೆಯುವಲ್ಲಿ ಕರ್ನಾಟಕ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಬಲಗೈ, ಎಡಗೈಗೆ ತಲಾ…

44 mins ago

ಮುಸ್ಲಿಂ ನಂಬಿಕೆ; ಕಾಂಗ್ರೆಸ್‌ಗೆ ಬೇಕು ಹೊಣೆಗಾರಿಕೆ

ಪ್ರೊ.ಶಬ್ಬೀರ್ ಮುಸ್ತಾಫಾ ಜಿ.ಪಿ.ಬಸವರಾಜು ಸಮುದಾಯದ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದದ್ದು ಕಾಂಗ್ರೆಸ್ ಪಕ್ಷದ ಹೊಣೆ ಭಾರತದಂಥ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾವಣೆ ಎನ್ನುವುದು ನಿರಂತರ…

53 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ

ಜನನಾಯಕನ ಪೌರುಷವನ್ನು ಕೆಣಕುತ್ತಿದ್ದಾರೆ ಸಿದ್ದು ಆಪ್ತರು ರಾಜ್ಯದ ಆಡಳಿತ ಯಂತ್ರದ ಚುರುಕಿಗೆ ಸಚಿವ ಸಂಪುಟ ಪುನರ್‌ರಚಿಸಬೇಕೆಂಬ ಒತ್ತಾಸೆಯೂ ಇದೆ ಕಳೆದ…

1 hour ago

ಚಾರಣಕ್ಕೆ ಹೊಸ ಮಾರ್ಗಸೂಚಿ; ಮೆಚ್ಚುಗೆ

ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…

4 hours ago

ಖಾಸಗಿ ಶಾಲೆಗಳ ಆರ್ಭಟಕ್ಕೆ ಬಾಡಿದ ಸರ್ಕಾರಿ ಶಾಲೆ

ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…

4 hours ago

‘ಅಮೆರಿಕದಲ್ಲಿ ನೆಲೆ ಕಂಡುಕೊಂಡಿರುವ ಮಕ್ಕಳ ಭವಿಷ್ಯದ ಬಗ್ಗೆ ಭಯವಾಗುತ್ತದೆ…’

ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…

4 hours ago