ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಶಾಲೆಗಳ ಆಧುನೀಕರಣಕ್ಕೆ ಮನೀಶ್ ಸಿಸೋಡಿಯಾ ಕಾರಣ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಹೇಳಿದ್ದಾರೆ.
ಪ್ರತಿ ದಿನ ಮುಂಜಾನೆ ಆರು ಗಂಟೆಗೆ ಎದ್ದು ತಪಾಸಣೆಗೆ ತೆರಳುವ ಸಿಸೋಡಿಯಾ ಅವರಿಂದಲೇ ಕಳೆದ ಎಂಟು ವರ್ಷಗಳಲ್ಲಿ ದೆಹಲಿ ಸರ್ಕಾರಿ ಶಾಲೆಗಳು ಬದಲಾವಣೆಯಾಗಲು ಸಾಧ್ಯವಾಗಿದೆ ಎಂದು ಅವರು ಹೇಳಿದರು.
ಪೂರ್ವ ವಿನೋದ್ ನಗರದಲ್ಲಿ ರಾಜ್ಕೀಯ ಸರ್ವೋದಯ ಕನ್ಯಾ ಬಾಲ ವಿದ್ಯಾಲಯದ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೇರವೇರಿಸಿ ಮಾತನಾಡಿದ ಅವರು, ಶಾಲೆ ಸಂಪೂರ್ಣ ನಿರ್ಮಾಣವಾದ ಬಳಿಕ ಕೊಲಂಬಿಯಾ ವಿಶ್ವವಿದ್ಯಾಲಯದಂತೆ ಕಾಣಲಿದೆ ಎಂದು ಹೇಳಿದರು.
ಭ್ರಷ್ಟಾಚಾರದ ಆರೋಪದಲ್ಲಿ ಕೇಂದ್ರವು ಸಿಸೋಡಿಯಾ ಅವರನ್ನು ಜೈಲಿಗೆ ಅಟ್ಟಿದೆ. ಆದರೆ ಪ್ರತಿ ದಿನ ಬೆಳಗ್ಗೆ ಎದ್ದು ಶಾಲೆಗಳಿಗೆ ಭೇಟಿ ನೀಡುತ್ತಿದ್ದ ನಾಯಕರು ಅವರಾಗಿದ್ದಾರೆ. ಭ್ರಷ್ಟ ನಾಯಕರಾಗಿದ್ದರೆ ಹಾಗೇ ಮಾಡುತ್ತಿರಲಿಲ್ಲ ಎಂದು ಹೇಳಿದರು.
ದೆಹಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿ ವೈದ್ಯರು, ಎಂಜಿನಿಯರ್ ಮತ್ತು ಪೊಲೀಸ್ ಅಧಿಕಾರಿಗಳಂತಹ ಉನ್ನತ ಪದವಿ ಹೊಂದುತ್ತಿದ್ದಾರೆ. ಈ ಶಿಕ್ಷಣ ಬದಲಾವಣೆಯ ಹಿಂದೆ ಓರ್ವ ವ್ಯಕ್ತಿ ಇದ್ದು, ಅವರೇ ಮನೀಶ್ ಸಿಸೋಡಿಯಾ ಎಂದು ಹೇಳಿದರು.
ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…
ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…
ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…
ಹಲವು ಹೋಟೆಲ್ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್ಫುಡ್ಗಳ ದರವೂ ಗಗನಮುಖಿ • ಚಿರಂಜೀವಿ ಸಿ…
• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ಹತ್ತಿರತ್ತಿರ ಒಂದೂ ಕಾಲು ಶತಮಾನದ ಚಿರನೂತನ ಶಾಲೆ... ವೃದ್ಧಾಪ್ಯದಲ್ಲೂ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಂಡು…
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…