ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಶಾಲೆಗಳ ಆಧುನೀಕರಣಕ್ಕೆ ಮನೀಶ್ ಸಿಸೋಡಿಯಾ ಕಾರಣ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಹೇಳಿದ್ದಾರೆ.
ಪ್ರತಿ ದಿನ ಮುಂಜಾನೆ ಆರು ಗಂಟೆಗೆ ಎದ್ದು ತಪಾಸಣೆಗೆ ತೆರಳುವ ಸಿಸೋಡಿಯಾ ಅವರಿಂದಲೇ ಕಳೆದ ಎಂಟು ವರ್ಷಗಳಲ್ಲಿ ದೆಹಲಿ ಸರ್ಕಾರಿ ಶಾಲೆಗಳು ಬದಲಾವಣೆಯಾಗಲು ಸಾಧ್ಯವಾಗಿದೆ ಎಂದು ಅವರು ಹೇಳಿದರು.
ಪೂರ್ವ ವಿನೋದ್ ನಗರದಲ್ಲಿ ರಾಜ್ಕೀಯ ಸರ್ವೋದಯ ಕನ್ಯಾ ಬಾಲ ವಿದ್ಯಾಲಯದ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೇರವೇರಿಸಿ ಮಾತನಾಡಿದ ಅವರು, ಶಾಲೆ ಸಂಪೂರ್ಣ ನಿರ್ಮಾಣವಾದ ಬಳಿಕ ಕೊಲಂಬಿಯಾ ವಿಶ್ವವಿದ್ಯಾಲಯದಂತೆ ಕಾಣಲಿದೆ ಎಂದು ಹೇಳಿದರು.
ಭ್ರಷ್ಟಾಚಾರದ ಆರೋಪದಲ್ಲಿ ಕೇಂದ್ರವು ಸಿಸೋಡಿಯಾ ಅವರನ್ನು ಜೈಲಿಗೆ ಅಟ್ಟಿದೆ. ಆದರೆ ಪ್ರತಿ ದಿನ ಬೆಳಗ್ಗೆ ಎದ್ದು ಶಾಲೆಗಳಿಗೆ ಭೇಟಿ ನೀಡುತ್ತಿದ್ದ ನಾಯಕರು ಅವರಾಗಿದ್ದಾರೆ. ಭ್ರಷ್ಟ ನಾಯಕರಾಗಿದ್ದರೆ ಹಾಗೇ ಮಾಡುತ್ತಿರಲಿಲ್ಲ ಎಂದು ಹೇಳಿದರು.
ದೆಹಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿ ವೈದ್ಯರು, ಎಂಜಿನಿಯರ್ ಮತ್ತು ಪೊಲೀಸ್ ಅಧಿಕಾರಿಗಳಂತಹ ಉನ್ನತ ಪದವಿ ಹೊಂದುತ್ತಿದ್ದಾರೆ. ಈ ಶಿಕ್ಷಣ ಬದಲಾವಣೆಯ ಹಿಂದೆ ಓರ್ವ ವ್ಯಕ್ತಿ ಇದ್ದು, ಅವರೇ ಮನೀಶ್ ಸಿಸೋಡಿಯಾ ಎಂದು ಹೇಳಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…